Homeಮುಖಪುಟಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

ಲೋಕಸಭೆ ಚನಾವಣೆ: ಪ್ರತಿಪಕ್ಷಗಳ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ತಡೆಯಲು ಬಿಜೆಪಿಯಿಂದ ಪ್ರಯತ್ನ?

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಮುಖ ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ತಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ, ಕಾಂಗ್ರೆಸ್‌ ಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಲೋಕಸಭೆ ಚುನಾವಣಾ ಹೊಸ್ತಿಲ್ಲಲ್ಲೇ ಪ್ರತಿಪಕ್ಷಗಳ ನಾಯಕರ ಬಂಧನ, ಬ್ಯಾಂಕ್‌ ಖಾತೆಗಳಿಗೆ ನಿರ್ಬಂಧ ಹೇರಿರುವುದು ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಪಕ್ಷಗಳನ್ನು ಕಟ್ಟಿಹಾಕಲು ಮಾಡಿದ ವ್ಯವಸ್ಥಿತ ಪಿತೂರಿಯ ಭಾಗ ಎಂದು ಆರೋಪ ಕೇಳಿ ಬಂದಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌, ಚುನಾವಣೆ ಅತಿ ದೊಡ್ಡ ಉತ್ಸವ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಇದರಲ್ಲಿ ಭಾಗಿಯಾಗುವುದಕ್ಕೆ ಒಂದು ಪಕ್ಷಕ್ಕೆ ಮಾತ್ರ ಅವಕಾಶ? ಒಂದು ರಾಷ್ಟ್ರೀಯ ಪಕ್ಷಕ್ಕೆ ಮಾತ್ರ ಎಲ್ಲಾ ಸಂಪತ್ತು ಮತ್ತು ಎಲ್ಲಾ ಅಧಿಕಾರ?  ಪ್ರಧಾನ ಪ್ರತಿಪಕ್ಷಕ್ಕೆ ಪಾರ್ಟಿಗೆ ನಿಯಮನುಸಾರ ಪಾರ್ಟಿ ಕಾರ್ಯಕರ್ತರಿಂದ ಸಂಗ್ರಹಿಸಿದ ಹಣವನ್ನು ಕೂಡ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಏನು ಕಾರಣ, ಆದಾಯ ತೆರಿಗೆ ಇಲಾಖೆ ಪ್ರಕಾರ, 10,000ರೂ ಪಾವತಿಸದ ಕಾರಣಕ್ಕೆ ಅವರು ನಮ್ಮ ಖಾತೆಯ 280 ಕೋಟಿಗೆ ನಿರ್ಬಂಧಿಸಿದ್ದಾರೆ. 96ರ ಸೀತಾ ರಾಮ್‌ ಕೇಸ್‌ ವಿಚಾರ ಹೇಳಿಕೊಂಡು ಈಗ ನೊಟೀಸ್‌ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ ಪಕ್ಷವನ್ನು ಚುನಾವಣಾ ಸಮರದಿಂದ ಹಿಂದೆ ಸರಿಯುವಂತೆ ಮಾಡುವ ಪಿತೂರಿಯಾಗಿದೆ. ಇದು ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿ ನೇರವಾಗಿ ಪಾಲ್ಗೊಂಡು ರೂಪಿಸಿದ ತಂತ್ರವಾಗಿದೆ. ಇದನ್ನು ಪ್ರಶ್ನಿಸಿ ನಾವು ಸುಪ್ರೀಂಕೋರ್ಟ್‌ಗೆ ಹೋಗಿದ್ದೆವು, ಆದರೆ ಸುಪ್ರೀಂಕೋರ್ಟ್‌ ಈ ಬಗ್ಗೆ ವಿಚಾರಣೆಗೆ ತಡ ಮಾಡುತ್ತಿದೆ. ಒಂದು ತಿಂಗಳ ಬಳಿಕ ಪ್ರಕರಣ ಕೈಗೆತ್ತಿಕೊಂಡರೆ ನಮಗೇನು ಪ್ರಯೋಜನ? ಚುನಾವಣೆ ಈ ವೇಳೆ ಮುಗಿಯುವುದಿಲ್ಲವೇ? ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸಕ್ರಿಯವಾಗಿ ಸ್ಪರ್ಧಿಸಲು ಅವಕಾಶ ನೀಡುವುತ್ತಿಲ್ಲ ಎಂದರೆ ಮತ್ತೆ ಯಾವ ರೀತಿಯ ಪ್ರಜಾಪ್ರಭುತ್ವ ದೇಶದಲ್ಲಿ ಬಾಕಿಯಾಗಿದೆ ಎಂದು ಕೆ.ಸಿ ವೇಣುಗೋಪಾಲ್‌ ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲ ಪಕ್ಷಗಳಿಗೂ ಸಮಾನ ಅವಕಾಶಗಳನ್ನು ಒದಗಿಸಬೇಕು ಎಂದು ಈ ಮೊದಲು ಕಾಂಗ್ರೆಸ್‌ ಹೇಳಿತ್ತು. ಸೋನಿಯಾ ಗಾಂಧಿ ಈ ಕುರಿತು ಸುದ್ದಿಗೋಷ್ಟಿಯನ್ನು ನಡೆಸಿ, ಕಾಂಗ್ರೆಸ್‌ ಪಕ್ಷವನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಈ ಕ್ರಮವು ಕಾಂಗ್ರೆಸ್‌ ಪಕ್ಷದ ಮೇಲಷ್ಟೆ ಅಲ್ಲ, ಭಾರತದ ಪ್ರಜಾತಂತ್ರ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಚುನಾವಣೆಯಲ್ಲಿ ಹೋರಾಟ ನಡೆಸುವ ನಮ್ಮ ಸಾಮರ್ಥ್ಯವನ್ನೇ ನಾಶ ಮಾಡಲಾಗಿದೆ. ನಾವು ಚುನಾವಣಾ ಪ್ರಚಾರ ಕಾರ್ಯ ಮಾಡುವ ಶಕ್ತಿ ಕಳೆದುಕೊಂಡಿದ್ದೇವೆ ಎಂದು ಹೇಳಿದ್ದರು. ಅಜಯ್‌ ಮಾಕನ್‌ ಅವರು ಮಾತನಾಡಿ, ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತ ಮಾಡಿ, ಅದರಿಂದ 115.32 ಕೋಟಿಯಷ್ಟು ಮೊತ್ತವನ್ನು ಒತ್ತಾಯದಿಂದ ಪಡೆದುಕೊಂಡಿರುವ ಬಿಜೆಪಿ, ಆ ಮೂಲಕ ಸಾಮಾನ್ಯ ಜನರು ಕಾಂಗ್ರೆಸ್‌ಗೆ ನೀಡಿದ್ದ ದೇಣಿಗೆಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದರು.

ಸಿಎಂ ಸಿದ್ದರಾಮಯ್ಯ ಈ ಕುರಿತು ಮಾತನಾಡಿ, ಲೋಕಸಭಾ ಚುನಾವಣೆಯ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕು ಎನ್ನುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹಿಸಿರುವ ಹಣ ಹೊರತು ದೊಡ್ಡ ಉದ್ಯಮಪತಿಗಳದ್ದಲ್ಲ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಸರ್ಕಾರ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ತನ್ನ ಪಕ್ಷದ ಮೇಲೆ ಸರ್ಜಿಕಲ್ ಸ್ಟ್ರೈಕ್’ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಹಿಂದೆ ಆರೋಪಿಸಿದ್ದರು.

ಕಾಂಗ್ರೆಸ್ ಪಕ್ಷದ 11 ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಇದರ ಪರಿಣಾಮವಾಗಿ ನಾವು ಯಾವುದೇ ಜಾಹೀರಾತು ಕೊಡುವಂತಿಲ್ಲ. ಅಭ್ಯರ್ಥಿಗಳಿಗೆ ಚುನಾವಣಾ ಖರ್ಚಿಗೆ ಹಣ ಕೊಡಲು ಸಾಧ್ಯವಾಗುತ್ತಿಲ್ಲ. ಬಲವಂತವಾಗಿ ಕಾಂಗ್ರೆಸ್ ಹಣ ಫ್ರೀಜ್ ಮಾಡಲಾಗಿದೆ. ಹೀಗಾದರೆ ನಾವು ಚುನಾವಣೆಯನ್ನು ಎದುರಿಸುವುದು ಹೇಗೆ? ಮೋದಿ ಸರ್ಕಾರ ಫಾಸಿಸಂ ಮಾಡುತ್ತಿದೆ ಎಂದು ರಾಜ್ಯ ಉಸ್ತುವಾರಿ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು  ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಕೇಜ್ರಿವಾಲ್‌ ಅವರು ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಬಿಜೆಪಿ ಮಾಡಿದ ವ್ಯವಸ್ಥಿತ ಪಿತೂರಿ ಎಂದು ಈ ಹಿಂದೆ ಸಮನ್ಸ್‌ ವೇಳೆ ಎಎಪಿ ಆರೋಪಿಸಿತ್ತು. ಇದೀಗ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಎಲ್ಲಾ ಕಡೆಯಿಂದ ಸೀಲ್ ಮಾಡಲಾಗಿದೆ ಎಂದು ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ಶನಿವಾರ ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಕಚೇರಿಯನ್ನು ಎಲ್ಲಾ ಕಡೆಯಿಂದ ಸೀಲ್ ಮಾಡಲಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷದ ಕಚೇರಿ ಪ್ರವೇಶವನ್ನು ಸೀಲ್‌ ಮಾಡುವುದು ಹೇಗೆ ಸಾಧ್ಯ? ಇದು ಭಾರತೀಯ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದರ ವಿರುದ್ಧ ದೂರು ನೀಡಲು ನಾವು ಚುನಾವಣಾ ಆಯೋಗಕ್ಕೆ ಸಮಯವನ್ನು ಕೇಳಿದ್ದೇವೆ ಎಂದು ಎಎಪಿ ನಾಯಕ ಅತಿಶಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಬಿಜೆಪಿ ತನ್ನ ವಿರೋಧಿಗಳ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳ ಈ ಹಿಂದೆ ಹಲವು ಬಾರಿ ಆರೋಪವನ್ನು ಮಾಡಿದ್ದವು, ಇದೀಗ ಲೋಕಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ತಡೆಯಲು ಸರಕಾರಿ ತನಿಖಾ ಸಂಸ್ಥೆಗಳನ್ನು ಆಯುಧವಾಗಿ ಬಳಸಿಕೊಳ್ಳುತ್ತಿದೆ ಎಂಬ ಆರೋಪ ಮತ್ತೆ ಕೇಳಿ ಬಂದಿದೆ.

ಇದನ್ನು ಓದಿ: ಮಹುವಾ ಮೊಯಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...