Homeಮುಖಪುಟಕಾಂಗ್ರೆಸ್, ಎಐಯುಡಿಎಫ್ ಪಕ್ಷಗಳು ಮೊಘಲರಿದ್ದಂತೆ: ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್, ಎಐಯುಡಿಎಫ್ ಪಕ್ಷಗಳು ಮೊಘಲರಿದ್ದಂತೆ: ಸಂಸದ ತೇಜಸ್ವಿ ಸೂರ್ಯ

’ಅಸ್ಸಾಂನ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಲು ಮತ್ತು ಹಿಂದುತ್ವದ ಸ್ತಂಭವನ್ನು ಬಲಪಡಿಸಲು ನಾವು ಈ ಎಲ್ಲ ಮೊಘಲರನ್ನು ಸೋಲಿಸಬೇಕಾಗಿದೆ’

- Advertisement -
- Advertisement -

ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿರುವ ಅಸ್ಸಾಂನಲ್ಲಿ ಬಿಜೆಪಿ ಈಗಾಗಲೇ ಚುನಾವಣಾ ಪ್ರಚಾರಕ್ಕೆ ಕಾರ್ಯತಂತ್ರ ಆರಂಭಿಸಿದೆ. ಯುವ ಮೋರ್ಚಾ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಎಐಯುಡಿಎಫ್ ಪಕ್ಷಗಳು ಮೊಘಲರಿದ್ದಂತೆ ಎಂದಿದ್ದಾರೆ.

ಅಸ್ಸಾಂನ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಎರಡು ಪಕ್ಷಗಳನ್ನು ಸೋಲಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟದ ವಿರುದ್ಧ ಲೋಕಸಭಾ ಸಂಸದ ಬದ್ರುದ್ದೀನ್ ಅಜ್ಮಲ್ ನೇತೃತ್ವದ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮತ್ತು ಇತರ ಪಕ್ಷಗಳೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ.

ಇದನ್ನೂ ಓದಿ: ಪ್ರಧಾನಿಯನ್ನು ಪ್ರೀತಿ, ಅಹಿಂಸೆಯಿಂದ ಸೋಲಿಸುತ್ತೇವೆ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

“ಕಾಂಗ್ರೆಸ್ ಬದ್ರುದ್ದೀನ್ ಅಜ್ಮಲ್ ಅವರ ಅನುಯಾಯಿಗಳಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಮತ್ತು ಎಐಯುಡಿಎಫ್ ಅಸ್ಸಾಂ ಸಂಸ್ಕೃತಿಯನ್ನು ಉಳಿಸಲು ಸಾಧ್ಯವಿಲ್ಲ. ಇಂದು ಕಾಂಗ್ರೆಸ್ ಅಥವಾ ಬದ್ರುದ್ದೀನ್ ಅವರ ಪಕ್ಷವು ಮೊಘಲರನ್ನು ಮಾತ್ರ ಪ್ರತಿನಿಧಿಸುತ್ತದೆ. ಅವರು ನಮ್ಮನ್ನು ಪ್ರತಿನಿಧಿಸುವುದಿಲ್ಲ” ಎಂದು ಯುವಮೋರ್ಚಾ ಸಭೆಯಲ್ಲಿ ತೇಜಸ್ವಿ ಸೂರ್ಯ ಹೇಳಿದ್ದಾರೆ.

“ಅಸ್ಸಾಂನ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಲು ಮತ್ತು ಹಿಂದುತ್ವದ ಸ್ತಂಭವನ್ನು ಬಲಪಡಿಸಲು ನಾವು ಈ ಎಲ್ಲ ಮೊಘಲರನ್ನು ಸೋಲಿಸಬೇಕಾಗಿದೆ” ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಸೋಲಿಸಲು 2016 ರ ವಿಧಾನಸಭಾ ಚುನಾವಣೆಯನ್ನು “ಸಾರೈಘಾಟ್‌ನ (Saraighat) ಕೊನೆಯ ಯುದ್ಧ” ಎಂದು ಬಿಜೆಪಿ ಬಣ್ಣಿಸಿತ್ತು. 1671 ರಲ್ಲಿ ನಡೆದ ಸಾರೈಘಾಟ್ ಕದನದಲ್ಲಿ, ಅಹೋಮ್ ಜನರಲ್ ಲಚಿತ್ ಬೊರ್ಫುಕನ್, 1 ನೇ ರಾಜಾ ರಾಮ್‌ಸಿಂಗ್ ನೇತೃತ್ವದ ಮೊಘಲ್ ಪಡೆಗಳನ್ನು ಸೋಲಿಸಿದ್ದರು.

ಅಸ್ಸಾಂ ರಾಜ್ಯದ ಸಂಸ್ಕೃತಿ, ಭಾಷೆ ಮತ್ತು ಪರಂಪರೆಯನ್ನು ರಕ್ಷಿಸಲು ಕಾಂಗ್ರೆಸ್ ಈ ಕ್ಷಣದಲ್ಲಿ ಯಾವುದೇ ನೀತಿಯನ್ನು ಹೊಂದಿಲ್ಲ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಅಸ್ಸಾಂನಲ್ಲಿ ಮಾರ್ಚ್ 27 ರಿಂದ ಮೂರು ಹಂತಗಳಲ್ಲಿ ಚುನಾವಣೆಗೆ ಮತದಾನ ನಡೆಯಲಿದೆ. ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...