Homeಮುಖಪುಟರೈತ ಹೋರಾಟಕ್ಕೆ ಕಾಂಗ್ರೆಸ್, ವಿದೇಶಿ ಏಜೆಂಟ್‌ಗಳು ಸ್ಪಾನ್ಸರ್ಸ್‌ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ರೈತ ಹೋರಾಟಕ್ಕೆ ಕಾಂಗ್ರೆಸ್, ವಿದೇಶಿ ಏಜೆಂಟ್‌ಗಳು ಸ್ಪಾನ್ಸರ್ಸ್‌ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಸಿಎಂ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಮತ್ತು ದೇಶದ ಇತರೆಡೆ ನಡೆಯುತ್ತಿರುವ ರೈತ ಹೋರಾಟವನ್ನು ಕಾಂಗ್ರೆಸ್ ಅಥವಾ ವಿದೇಶಿ ಏಜೆಂಟ್‌ಗಳು ಪ್ರಾಯೋಜಿಸುತ್ತಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್, ಫಾರಿನ್ ಏಜೆಂಟರ್, ಎಂಎಸ್‌ಪಿ ಏಜೆಂಟರ್ ರೈತ ಹೋರಾಟಕ್ಕೆ ಸ್ಪಾನ್ಸರ್ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಮಾತನಾಡಿ “ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸುತ್ತೇನೆ. ಇದು ರೈತ ಹೋರಾಟಕ್ಕೆ ಮಾಡಿದ ಅವಮಾನ. ಈ ರೀತಿ ಹೇಳಿಕೆ ಕೊಡುವುದನ್ನು ಬಿಟ್ಟು ಅವರ ಬಳಿ ಆಧಾರವಿದ್ದರೆ ಸ್ಪಾನ್ಸರ್ ಮಾಡುವರನ್ನು ಬಂಧಿಸಲಿ” ಎಂದು ಸವಾಲು ಹಾಕಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡಿ “ಮುಖ್ಯಮಂತ್ರಿಗಳು ರೈತರ ಚಳವಳಿಯನ್ನು ಪ್ರಾಯೋಜಿತ ಎಂದು ಕರೆದು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು ರೈತರು ಮತ್ತು ಹೊರಗಿನ ಜನರು ತೀರ್ಮಾನಿಸುತ್ತಾರೆ” ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಧ್ಯಕ್ಷರು ಮತ್ತು ರೈತ ಹೋರಾಟಗಾರರಾದ ಕುರುಬೂರು ಶಾಂತಕುಮಾರ್‌ರವರು “ಸೆಪ್ಟಂಬರ್ 8 ರಂದು ಬಿಜೆಪಿ-ಆರ್‌ಎಸ್‌ಎಸ್‌ ಅಂಗಸಂಸ್ಥೆಯಾದ ಭಾರತೀಯ ಕಿಸಾನ್ ಸಭಾದವರು ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೃಷಿ ಕಾನೂನು ರದ್ದಗೊಳಿಸಬೇಕೆಂದು ಹೋರಾಟ ಮಾಡಿದ್ದಾರೆ. ಅವರು ದೇಶದ್ರೋಹಿಗಳೇ? ಅವರಿಗೂ ಕಾಂಗ್ರೆಸ್ ಫಂಡ್ ಮಾಡುತ್ತಿದೆಯೇ? ಈ ಕುರಿತು ಮುಖ್ಯಮಂತ್ರಿಗಳು ಉತ್ತರಿಸಬೇಕು” ಎಂದು ಆಗ್ರಹಿಸಿದರು.

ಮುಂದುವರಿದು ಇಂತಹ ರೈತರ ಜೊತೆ ಕೇಂದ್ರ ಸರ್ಕಾರ ಏಕೆ 12 ಬಾರಿ ಮಾತುಕತೆ ನಡೆಸಿತು? ಏಕೆ ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷ ತಡೆಹಿಡಿಯುತ್ತೇವೆ ಎಂದು ಹೇಳಿತು ಎಂದು ಪ್ರಶ್ನಿಸಿದ ಅವರು, ಬಿಜೆಪಿ ಪಕ್ಷದಿಂದ ಮುಖ್ಯಮಂತ್ರಿಯಾದವರು ಮನಸ್ಸಿಗೆ ಬಂದಂತೆ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ತಮ್ಮ ಹಕ್ಕಿಗಾಗಿ ರೈತರು ನಡೆಸುತ್ತಿರುವ ಹೋರಾಟವನ್ನು ‘ಪ್ರಾಯೋಜಿತ ಹೋರಾಟ’ ಎಂಬ ಮುಖ್ಯಮಂತ್ರಿ ಬೊಮ್ಮಾಯಿಯವರ ಹೇಳಿಕೆ ಆಘಾತಕಾರಿ. ಅವರು ಕೂಡಲೇ ರೈತರ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...