Homeಕರ್ನಾಟಕ“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ಸೋಮವಾರ [ಮೇ 24 ರಂದು] ರಾಜ್ಯವ್ಯಾಪಿ ಜನಾಗ್ರಹಕ್ಕೆ ಕರೆ ನೀಡಿದೆ. ಈ ಆಂದೋಲನಕ್ಕೆ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿವೆ.

ಉಚಿತ ಚಿಕಿತ್ಸೆ, ಸರ್ವರಿಗೂ ವ್ಯಾಕ್ಸಿನ್, ಬಿಪಿಎಲ್ ಜನರಿಗೆ ಸಮಗ್ರ ದಿನಸಿ – ಮಾಸಿಕ 5000 ನೆರವು ಧನ, ಅನಾಥವಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಮತ್ತು ಕೃಷಿ ಬೀಜ, ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಈ ಐದು ಪಂಚ ಕ್ರಮಗಳನ್ನು ಜಾರಿಗೆ ತರಬೇಕೆಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ. ಜನಪರ ಸಂಘಟನೆಗಳು ಹಾಗೂ ಪಕ್ಷಗಳು ಕರೆ ನೀಡಿವೆ.

ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ಕಣ್ತೆರೆಸಲು ಮುಂದಾಗಿದೆ.

ಇದನ್ನೂ ಓದಿ: “ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಜನಾಗ್ರಹ ಆಂದೋಲನದ ಪೋಸ್ಟರ್‌ಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷಗಳು ಈ ಆಂದೋಲನಕ್ಕೆ ಬೆಂಬಲ ನೀಡಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಕಾಂಗ್ರೆಸ್ ಪಕ್ಷವು ಈ ಜನಾಗ್ರಹ ಆಂದೋಲನವನ್ನು ಹಾಗೂ ಅದರ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

’ಸರ್ಕಾರ ತೆಗೆದುಕೊಳ್ಳಲೇಬೇಕಾದ ಕ್ರಮಗಳಿಗಾಗಿ 24 ರಂದು ಜನಾಗ್ರಹ ಆಂದೋಲನ ನಡಿಯುತ್ತಿದೆ.
ಉಚಿತ ಚಿಕಿತ್ಸೆ – ಸರ್ವರಿಗೂ ವ್ಯಾಕ್ಸಿನ್ – ಬಡವರಿಗೆ ಸಮಗ್ರ ದಿನಸಿ – ಕೆಲಸ ಇಲ್ಲದವರಿಗೆ ಆರ್ಥಿಕ ನೆರವು – ಅನಾಥರಿಗೆ ಪರಿಹಾರ. ಕಾಂಗ್ರೆಸ್ ಈ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ ಹಾಗೂ 24 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ” ಎಂದು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ರಾಜ್ಯದ ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತಾದಳ ಕೂಡ ಈ ಆಂದೋಲನಕ್ಕೆ ಬೆಂಬಲ ನೀಡಿದೆ. ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ “ಈ ಆಂದೋಲನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಬಹಳ ಸಮಂಜಸವಾಗಿವೆ. ಸರ್ಕಾರ ಇವನ್ನು ಪರಿಗಣಿಸಲೇಬೇಕು ಎಂದು ಜನತಾ ದಳ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ. ಜೆಡಿಎಸ್ 24 ರ ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಲಿದೆ” ಎಂದು ಹೇಳಿಕೆ ನೀಡಿದ್ದಾರೆ‌‌.

ಸರ್ಕಾರದ ವಿರುದ್ಧ ಜ‌ನರ ಆಕ್ರೋಶ ಹೆಚ್ಚಾಗುತ್ತಿದೆ. ಜನರ ಈ ಆಗ್ರಹಕ್ಕೆ ಸರ್ಕಾರ ಸ್ಪಂದಿಸುವುದೇ ಎಂಬುದನ್ನು ಕಾದು ನೋಡಬೇಕಿದೆ‌ ಎಂದು ಜನಾಗ್ರಹ ಆಂದೋಲನದ ಪರವಾಗಿ ಕೆ.ಎಲ್. ಅಶೋಕ್ ಮತ್ತು ಮಾಮಾವಳ್ಳಿ ಶಂಕರ್ ಆಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...