Homeಕರ್ನಾಟಕ“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ಸೋಮವಾರ [ಮೇ 24 ರಂದು] ರಾಜ್ಯವ್ಯಾಪಿ ಜನಾಗ್ರಹಕ್ಕೆ ಕರೆ ನೀಡಿದೆ. ಈ ಆಂದೋಲನಕ್ಕೆ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿವೆ.

ಉಚಿತ ಚಿಕಿತ್ಸೆ, ಸರ್ವರಿಗೂ ವ್ಯಾಕ್ಸಿನ್, ಬಿಪಿಎಲ್ ಜನರಿಗೆ ಸಮಗ್ರ ದಿನಸಿ – ಮಾಸಿಕ 5000 ನೆರವು ಧನ, ಅನಾಥವಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಮತ್ತು ಕೃಷಿ ಬೀಜ, ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಈ ಐದು ಪಂಚ ಕ್ರಮಗಳನ್ನು ಜಾರಿಗೆ ತರಬೇಕೆಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ. ಜನಪರ ಸಂಘಟನೆಗಳು ಹಾಗೂ ಪಕ್ಷಗಳು ಕರೆ ನೀಡಿವೆ.

ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ಕಣ್ತೆರೆಸಲು ಮುಂದಾಗಿದೆ.

ಇದನ್ನೂ ಓದಿ: “ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಜನಾಗ್ರಹ ಆಂದೋಲನದ ಪೋಸ್ಟರ್‌ಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷಗಳು ಈ ಆಂದೋಲನಕ್ಕೆ ಬೆಂಬಲ ನೀಡಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಕಾಂಗ್ರೆಸ್ ಪಕ್ಷವು ಈ ಜನಾಗ್ರಹ ಆಂದೋಲನವನ್ನು ಹಾಗೂ ಅದರ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

’ಸರ್ಕಾರ ತೆಗೆದುಕೊಳ್ಳಲೇಬೇಕಾದ ಕ್ರಮಗಳಿಗಾಗಿ 24 ರಂದು ಜನಾಗ್ರಹ ಆಂದೋಲನ ನಡಿಯುತ್ತಿದೆ.
ಉಚಿತ ಚಿಕಿತ್ಸೆ – ಸರ್ವರಿಗೂ ವ್ಯಾಕ್ಸಿನ್ – ಬಡವರಿಗೆ ಸಮಗ್ರ ದಿನಸಿ – ಕೆಲಸ ಇಲ್ಲದವರಿಗೆ ಆರ್ಥಿಕ ನೆರವು – ಅನಾಥರಿಗೆ ಪರಿಹಾರ. ಕಾಂಗ್ರೆಸ್ ಈ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ ಹಾಗೂ 24 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ” ಎಂದು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ರಾಜ್ಯದ ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತಾದಳ ಕೂಡ ಈ ಆಂದೋಲನಕ್ಕೆ ಬೆಂಬಲ ನೀಡಿದೆ. ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ “ಈ ಆಂದೋಲನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಬಹಳ ಸಮಂಜಸವಾಗಿವೆ. ಸರ್ಕಾರ ಇವನ್ನು ಪರಿಗಣಿಸಲೇಬೇಕು ಎಂದು ಜನತಾ ದಳ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ. ಜೆಡಿಎಸ್ 24 ರ ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಲಿದೆ” ಎಂದು ಹೇಳಿಕೆ ನೀಡಿದ್ದಾರೆ‌‌.

ಸರ್ಕಾರದ ವಿರುದ್ಧ ಜ‌ನರ ಆಕ್ರೋಶ ಹೆಚ್ಚಾಗುತ್ತಿದೆ. ಜನರ ಈ ಆಗ್ರಹಕ್ಕೆ ಸರ್ಕಾರ ಸ್ಪಂದಿಸುವುದೇ ಎಂಬುದನ್ನು ಕಾದು ನೋಡಬೇಕಿದೆ‌ ಎಂದು ಜನಾಗ್ರಹ ಆಂದೋಲನದ ಪರವಾಗಿ ಕೆ.ಎಲ್. ಅಶೋಕ್ ಮತ್ತು ಮಾಮಾವಳ್ಳಿ ಶಂಕರ್ ಆಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...