Homeಮುಖಪುಟಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಕಾಂಗ್ರೆಸ್‌: 'ಕೈ' ನಾಯಕರಿಗೆ ಕಗ್ಗಂಟಾದ ಕೋಲಾರ

ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಕಾಂಗ್ರೆಸ್‌: ‘ಕೈ’ ನಾಯಕರಿಗೆ ಕಗ್ಗಂಟಾದ ಕೋಲಾರ

- Advertisement -
- Advertisement -

ಲೋಕಸಭೆಯ ಬಾಕಿ ಇದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಳ್ಳಾರಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಅವರಿಗೆ ನೀಡಲಾಗಿದೆ. ಈ ಕ್ಷೇತ್ರದ ಟಿಕೆಟ್ ತಮಗೇ ನೀಡಬೇಕೆಂದು ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಎನ್‌.ಹೆಚ್‌ ಶಿವಶಂಕರ ರೆಡ್ಡಿ ಮತ್ತು ಬಾಗೇಪಲ್ಲಿ ಶಾಸಕ ಎಸ್‌.ಎನ್‌ ಸುಬ್ಬಾರೆಡ್ಡಿ ಪಟ್ಟು ಹಿಡಿದಿದ್ದರು. ಅವರನ್ನು ಮನವೊಲಿಸಿದ ಕೈ ನಾಯಕರು, ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿದ್ದಾರೆ.

ಚಾಮರಾಜನಗರದಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಅವರ ಮಗ ಸುನಿಲ್ ಬೋಸ್‌ಗೆ ಟಿಕೆಟ್ ನೀಡಲಾಗಿದೆ. ಸುನಿಲ್ ಬೋಸ್‌ಗೆ ಟಿಕೆಟ್ ನೀಡುವುದಕ್ಕೆ ಕ್ಷೇತ್ರದ ಕೆಲ ಕೈ ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ನಾಯಕರು, ಅಭ್ಯರ್ಥಿ ಘೋಷಣೆ ಮಾಡಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಂಡೂರು ಶಾಸಕ ಇ. ತುಕರಾಂ ಅವರಿಗೆ ನೀಡಲಾಗಿದೆ.

ಕಗ್ಗಂಟಾದ ಕೋಲಾರ :

ಇನ್ನು ಕೋಲಾರ ಒಂದು ಕ್ಷೇತ್ರದ ಅಭ್ಯರ್ಥಿ ಘೋಷಣೆ ಬಾಕಿ ಇದೆ. ಈ ಕ್ಷೇತ್ರದ ಕಾಂಗ್ರೆಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಇಲ್ಲಿ ಸಚಿವ ಕೆ.ಹೆಚ್‌ ಮುನಿಯಪ್ಪ ಮತ್ತು ಮಾಜಿ ಸಚಿವ ಕೆ.ಆರ್‌ ರಮೇಶ್ ಕುಮಾರ್ ಬಣಗಳ ನಡುವೆ ಕಿತ್ತಾಟ ನಡೆಯುತ್ತಿದೆ.

ಮುನಿಯಪ್ಪ ಸಂಬಂಧಿಕರಿಗೆ ಟಿಕೆಟ್ ನೀಡುವುದಕ್ಕೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿ ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಅತ್ತ ಮುನಿಯಪ್ಪ ಬಣ ತಮ್ಮವರಿಗೇ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದೆ.

ಹಾಗಾಗಿ, ಎಡಗೈ ಸಮುದಾಯದ ಕೆ.ವಿ ಗೌತಮ್ ಅಥವಾ ಎಲ್‌. ಹನುಮಂತಯ್ಯ ಅವರಿಗೆ ಟಿಕೆಟ್ ನೀಡಿ ಎರಡೂ ಬಣಗಳನ್ನು ಸಮಾಧಾನಗೊಳಿಸುವ ಪ್ರಯತ್ನವನ್ನು ಸಿಎಂ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಡಿದ್ದಾರೆ. ಆದರೆ, ಇದಕ್ಕೂ ಮುನಿಯಪ್ಪ ತಕರಾರು ಎತ್ತಿದ್ದಾರೆ ಎನ್ನಲಾಗಿದೆ. ಹಾಗಾಗಿ, ಎರಡೂ ಕರೆಯವರಿಗೂ ಒಪ್ಪಿಗೆಯಾಗುವ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಕೈ ನಾಯಕರಿಗೆ ಸವಾಲಾಗಿದೆ.

ಇದನ್ನೂ ಓದಿ : ‘ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಕುಟುಂಬದವರು ಎಲ್ಲಿದ್ದರು..?’: ಡಿಕೆ ಶಿವಕುಮಾರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...