Homeಮುಖಪುಟಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಪಕ್ಷದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ಕೋರಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ 23 ಕಾಂಗ್ರೆಸ್ ಭಿನ್ನಮತೀಯ ನಾಯಕರಲ್ಲಿ ಒಬ್ಬರಾದ ಗುಲಾಮ್ ನಬಿ ಆಜಾದ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿನ್ನೆ ಪಕ್ಷದ ಹೊಸ ಕಾರ್ಯದರ್ಶಿಗಳನ್ನು ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನು ನೇಮಕ ಮಾಡಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಅಂಬಿಕಾ ಸೋನಿ, ಮೋತಿ ಲಾಲ್ ವೊಹ್ರಾ, ಲುಜೆನಿಯೊ ಫಲೇರಿಯೊ ಮತ್ತು ಮಲ್ಲಿಕಾರ್ಜುನ್ ಖರ್ಗೆ ಮುಂತಾದವರನ್ನು ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಿಂದ ಕೈಬಿಡಲಾಗಿದೆ.

ಪಕ್ಷದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ಕೋರಿ ಸೋನಿಯಾ ಗಾಂಧಿಗೆ ಪತ್ರ ಬರೆದ 23 ಕಾಂಗ್ರೆಸ್ ನಾಯಕರಲ್ಲಿ ಗುಲಾಮ್ ನಬಿ ಆಜಾದ್ ಕೂಡ ಇದ್ದರು. ಅವರು ಹರಿಯಾಣ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚುತ್ತಿದೆ: ಸೋನಿಯಾ ಗಾಂಧಿ

ಹೊಸ ನೇಮಕಾತಿಗಳ ಪ್ರಕಾರ, ಹಲವು ರಾಜ್ಯ ಉಸ್ತುವಾರಿಗಳನ್ನು ಬದಲಿಸಲಾಗಿದೆ. ಮಧ್ಯಪ್ರದೇಶದಲ್ಲಿ ಮುಕುಲ್ ವಾಸ್ನಿಕ್, ಪಂಜಾಬ್‌ನಲ್ಲಿ ಹರೀಶ್ ರಾವತ್, ಆಂಧ್ರಪ್ರದೇಶದಲ್ಲಿ ಉಮ್ಮನ್ ಚಾಂಡಿ, ಕೇರಳ ಮತ್ತು ಲಕ್ಷದ್ವೀಪದಲ್ಲಿ ತಾರಿಕ್ ಅನ್ವರ್, ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ, ಕರ್ನಾಟಕದಲ್ಲಿ ರಣದೀಪ್ ಸಿಂಗ್ ಸುರ್ಜೆವಾಲಾ, ಅಸ್ಸಾಂನಲ್ಲಿ ಜಿತೇಂದ್ರ ಸಿಂಗ್, ರಾಜಸ್ಥಾನದಲ್ಲಿ ಅಜಯ್ ಮಾಕೆನ್ ನೇಮಕಗೊಂಡಿದ್ದಾರೆ. ಕೆ.ಸಿ.ವೇಣುಗೋಪಾಲ್ ಅವರು ಸಾಂಸ್ಥಿಕ ಪ್ರಧಾನ ಕಾರ್ಯದರ್ಶಿಯಾಗಲಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ನಾಯಕತ್ವ: ಪಕ್ಷದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ

ಸಾಂಸ್ಥಿಕ ಮತ್ತು ಕಾರ್ಯಾಚರಣೆಯ ವಿಷಯಗಳಲ್ಲಿ ಸೋನಿಯಾ ಗಾಂಧಿಗೆ ಸಹಾಯ ಮಾಡಲು ಪಕ್ಷವು ವಿಶೇಷ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ಎ.ಕೆ. ಆಂಟನಿ, ಅಹ್ಮದ್ ಪಟೇಲ್, ಅಂಬಿಕಾ ಸೋನಿ, ಕೆ.ಸಿ. ವೇಣುಗೋಪಾಲ್, ಮುಕುಲ್ ವಾಸ್ನಿಕ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಇದ್ದು, ಯಾವುದೇ ಭಿನ್ನಮತೀಯ ನಾಯಕರನ್ನು ಸೇರಿಸಲಾಗಿಲ್ಲ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕೇಂದ್ರ ಚುನಾವಣಾ ಪ್ರಾಧಿಕಾರವನ್ನೂ ಸೋನಿಯಾ ಗಾಂಧಿ ಪುನರ್ನಿರ್ಮಿಸಿದ್ದಾರೆ.

ಈ ಹಿಂದೆ 23 ಭಿನ್ನಮತೀಯರ ಪತ್ರವು ಕಾಂಗ್ರೆಸ್‌ನಲ್ಲಿ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಹಿರಿಯ ರಾಜಕಾರಣಿಗಳಾದ ಶಶಿ ತರೂರ್, ಗುಲಾಮ್ ನಬಿ ಆಜಾದ್, ಪೃಥ್ವಿರಾಜ್ ಚೌವ್ಹಾಣ್, ಆನಂದ್ ಶರ್ಮಾ ಮತ್ತು ಕಪಿಲ್ ಸಿಬಲ್ ಇದಕ್ಕೆ ಸಹಿ ಹಾಕಿದ್ದರು.

ಪತ್ರದಲ್ಲಿ ನಾಯಕರು ಸಾಮೂಹಿಕ ನಾಯಕತ್ವಕ್ಕೆ ಕರೆ ನೀಡಿದ್ದರು. ಇದು ಕಾರ್ಯಕಾರಿ ಸಭೆಯಲ್ಲಿ ಭಾರಿ ಚರ್ಚೆ ನಡೆದು ರಾಹುಲ್ ಗಾಂಧಿ ಈ ನಾಯಕರು ಕಿಡಿ ಕಾಡಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಗಡಿ ಬಿಕ್ಕಟ್ಟಿಗೆ ಕೇಂದ್ರದ ಅಸಮರ್ಪಕ ನೀತಿಗಳೇ ಕಾರಣ – ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...