Homeಕರ್ನಾಟಕಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆಯೇ "ಕೋಮು-ಕುಂಡ"ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ: ಕಾಂಗ್ರೆಸ್ ವಾಗ್ದಾಳಿ

ಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ: ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

”ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಜೆಡಿಎಸ್‌ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆದಿದೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ”ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ!” ಎಂದು ಕುಟುಕಿದೆ.

”ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಗಾ ಹೊಡೆದಿದೆ!” ಎಂದು ಟೀಕಿಸಿದೆ.

”ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು” ಎಂದು ಮೈತ್ರಿ ಸರ್ಕಾರದ ದಿನಗಳನ್ನು ಕಾಂಗ್ರೆಸ್ ನೆನಪಿಸಿದೆ.

”ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ!” ಕಿಡಿಕಾರಿದೆ.

”ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ… ನಿಮಗೇನಾದರೂ ಆತ್ಮಗೌರವ ಇದೆಯೇ?” ಎಂದು ವಾಗ್ದಾಳಿ ನಡೆಸಿದೆ.

”ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ” ಎಂದು ಹೇಳಿದೆ.

”ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

”ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ..?!” ಎಂದು ಪ್ರಶ್ನೆ ಮಾಡಿದೆ.

”ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ? ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!” ಎಂದು ಕಾಂಗ್ರೆಸ್ ಕಿಡಿಕಾರಿದೆ.

”ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ!” ಎಚ್ಚರಿಸಿದೆ.

”ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!” ಎಂದು ಹೇಳಿದೆ.

”ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!” ಎಂದಿದೆ.

”ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ… ಅಲ್ ದ ಬೆಸ್ಟ್!” ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ಜೆಡಿಎಸ್‌ನ ‘ಅಡಹಾಕ್ ಅಧ್ಯಕ್ಷ’ರಾಗಿ ಹೆಚ್‌ಡಿಕೆ ನೇಮಕ: ಸಿಎಂ ಇಬ್ರಾಹಿಂಗೆ ಕೊಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...