Homeಕರ್ನಾಟಕಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆಯೇ "ಕೋಮು-ಕುಂಡ"ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ: ಕಾಂಗ್ರೆಸ್ ವಾಗ್ದಾಳಿ

ಜಾತ್ಯತೀತತೆ ನಾಟ್ಯಕ್ಕೆ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ: ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

”ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಜೆಡಿಎಸ್‌ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆದಿದೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ”ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ!” ಎಂದು ಕುಟುಕಿದೆ.

”ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಗಾ ಹೊಡೆದಿದೆ!” ಎಂದು ಟೀಕಿಸಿದೆ.

”ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು” ಎಂದು ಮೈತ್ರಿ ಸರ್ಕಾರದ ದಿನಗಳನ್ನು ಕಾಂಗ್ರೆಸ್ ನೆನಪಿಸಿದೆ.

”ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ!” ಕಿಡಿಕಾರಿದೆ.

”ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ… ನಿಮಗೇನಾದರೂ ಆತ್ಮಗೌರವ ಇದೆಯೇ?” ಎಂದು ವಾಗ್ದಾಳಿ ನಡೆಸಿದೆ.

”ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ” ಎಂದು ಹೇಳಿದೆ.

”ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

”ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ..?!” ಎಂದು ಪ್ರಶ್ನೆ ಮಾಡಿದೆ.

”ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ? ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!” ಎಂದು ಕಾಂಗ್ರೆಸ್ ಕಿಡಿಕಾರಿದೆ.

”ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ!” ಎಚ್ಚರಿಸಿದೆ.

”ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!” ಎಂದು ಹೇಳಿದೆ.

”ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!” ಎಂದಿದೆ.

”ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ… ಅಲ್ ದ ಬೆಸ್ಟ್!” ಎಂದು ಕಾಂಗ್ರೆಸ್ ಪೋಸ್ಟ್ ಮಾಡಿದೆ.

ಇದನ್ನೂ ಓದಿ: ಜೆಡಿಎಸ್‌ನ ‘ಅಡಹಾಕ್ ಅಧ್ಯಕ್ಷ’ರಾಗಿ ಹೆಚ್‌ಡಿಕೆ ನೇಮಕ: ಸಿಎಂ ಇಬ್ರಾಹಿಂಗೆ ಕೊಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...