Homeಮುಖಪುಟತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

ತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

- Advertisement -
- Advertisement -

ಚುನಾವಣೋತ್ತರ ಹಿಂಸಾಚಾರಗಳ ಕುರಿತು ತಿಳಿಯಲು ಹೋಗಿದ್ದ ಕಾಂಗ್ರೆಸ್ ಮತ್ತು ಎಡಪಕ್ಷದ ನಾಯಕರ ಮೇಲೆ ತ್ರಿಪುರಾದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

“ಅಗರ್ತಲಾದಿಂದ 30 ಕಿಮೀ ದೂರದಲ್ಲಿರುವ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ನೆಹಲ್‌ಚಂದ್ರನಗರದಲ್ಲಿ ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆದಿದೆ” ಎಂದು ಇಬ್ಬರು ಸಂಸದರು ಸೇರಿದಂತೆ ಎಡ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿದ್ದ ತಂಡ ಹೇಳಿದೆ.

ಕಾಂಗ್ರೆಸ್‌ ಮತ್ತು ಎಡಪಕ್ಷದ ನಾಯಕರ ಮೇಲೆ ಮೇಲೆ ದಾಳಿ ನಡೆಸಿದಾಗ ಕನಿಷ್ಠ ಮೂರು ಕಾರುಗಳನ್ನು ಹಾನಿಗೊಳಿಸಲಾಗಿದೆ. ಹಲ್ಲೆ ನಡೆಸಿದವರು ‘ಜೈ ಶ್ರೀ ರಾಮ್’ ಎಂದು ಕೂಗಿದರು ಎಂದು ಆರೋಪಿಸಲಾಗಿದೆ. ನಿಯೋಗದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಜೊತೆಯಲ್ಲಿದ್ದ ಭದ್ರತಾ ಸಿಬ್ಬಂದಿಗಳೂ ಮಧ್ಯಪ್ರವೇಶಿಸಲಿಲ್ಲ ಎಂದು ಸಂಸದರೊಬ್ಬರು ಆರೋಪಿಸಿದ್ದಾರೆ. ಘಟನೆಯ ನಂತರ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಅವರು ಪ್ರತಿಕ್ರಿಯಿಸಿದ್ದು, “ಎರಡು ದಿನಗಳ ಪ್ರವಾಸ ಹಮ್ಮಿಕೊಳ್ಳಲಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಎಡ ಮತ್ತು ಕಾಂಗ್ರೆಸ್ ನಾಯಕರ ತಂಡವು ನೆಹಲ್‌ಚಂದ್ರನಗರಕ್ಕೆ ದಿಢೀರ್‌ ಭೇಟಿ ನೀಡಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಮಯದಲ್ಲಿ ಕೆಲವು ಘೋಷಣೆಗಳನ್ನು ಕೂಗಲಾಗಿದೆ.

ಸಹಾಯಕ ಪೊಲೀಸ್ ಮಹಾನಿರೀಕ್ಷಕ ಜ್ಯೋತಿಷ್ಮನ್ ದಾಸ್ ಚೌಧರಿ ಪ್ರತಿಕ್ರಿಯಿಸಿ,  “ತಂಡದ ಜೊತೆಗಿದ್ದ ಪೊಲೀಸ್ ಅಧಿಕಾರಿಗಳು ಕ್ರಮಕೈಗೊಳ್ಳಲಿಲ್ಲ ಎಂಬುದು ಸುಳ್ಳು” ಎಂದಿದ್ದಾರೆ.

“ಜೊತೆಗಿದ್ದ ಪೊಲೀಸ್ ಬೆಂಗಾವಲು ತಂಡವು ತ್ವರಿತವಾಗಿ ಸ್ಪಂದಿಸಿ ನಿಯೋಗವನ್ನು ರಕ್ಷಿಸಿತು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಸ್ಥಳೀಯವಾಗಿ ಯಾವುದೇ ವ್ಯಕ್ತಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ. 2-3 ವಾಹನಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ. ಇತರ ದುಷ್ಕರ್ಮಿಗಳನ್ನು ಗುರುತಿಸಲು ಮತ್ತು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಿದಾಗಿನಿಂದ ಸಂಭವಿಸಿದ ಹಿಂಸಾಚಾರದ ಪ್ರಮಾಣವನ್ನು ತಿಳಿಯಲು ರಾಜ್ಯಕ್ಕೆ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ಎಡರಂಗ ಮತ್ತು ಕಾಂಗ್ರೆಸ್ ಸಂಸದರ ತಂಡ ಆಗಮಿಸಿತ್ತು. ಸೆಪಹಿಜಾಲಾ, ಗೋಮತಿ, ಪಶ್ಚಿಮ ತ್ರಿಪುರಾ, ಖೋವೈ ಮತ್ತು ಧಲೈ ಜಿಲ್ಲೆಗಳ ವಿವಿಧ ಭಾಗಗಳಿಗೆ ಭೇಟಿ ನೀಡಲಾಗಿತ್ತು.

ಸಿಪಿಐಎಂ ರಾಜ್ಯಸಭಾ ಸಂಸದ ಎಲರಾಮ್ ಕರೀಂ ಮತ್ತು ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರಿದ ತಂಡವು ಸಿಪಹಿಜಾಲಾದ ಬಿಶಾಲ್ಗಢ ಮತ್ತು ಪಶ್ಚಿಮ ತ್ರಿಪುರದ ಕೆಲವು ಭಾಗಗಳಿಗೆ ಭೇಟಿ ನೀಡಿದ್ದರು.

ಕಾಂಗ್ರೆಸ್ ಲೋಕಸಭಾ ಸಂಸದರಾದ ರಂಜಿತಾ ರಂಜನ್, ಸಿಪಿಐ(ಎಂ) ರಾಜ್ಯಸಭಾ ಸಂಸದರಾದ ಎ ಎ ರಹೀಮ್ ಮತ್ತು ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರನ್ನೊಳಗೊಂಡ ಎರಡನೇ ತಂಡವು ಪಶ್ಚಿಮ ತ್ರಿಪುರಾದ ಕಲ್ಕಾಲಿಯಾ ಗ್ರಾಮಕ್ಕೆ ಭೇಟಿ ನೀಡಿತ್ತು.

ಸಿಪಿಐ(ಎಂ) ಲೋಕಸಭಾ ಸಂಸದ ಪಿ ಆರ್ ನಟರಾಜನ್ ಮತ್ತು ಬಿನೋಯ್ ಬಿಸ್ವಾಮ್ ಅವರ ಮೂರನೇ ತಂಡವು ಜಿಲ್ಲೆಯ ದುರ್ಗಬರಿ, ಉಷಾಬಜಾರ್, ಕಾಳಿಕಾಪುರ ಮತ್ತು ಇತರ ಕೆಲವು ಗ್ರಾಮಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿತು. ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ವಿಧಾನಸಭೆಯ ಮಾಜಿ ಉಪ ಸ್ಪೀಕರ್ ಪಬಿತ್ರಾ ಕರ್ ಇದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ತ್ರಿಪುರಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಡಾ ಅಜಯ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿರಾಜಿತ್ ಸಿನ್ಹಾ, ಹಿರಿಯ ಕಾಂಗ್ರೆಸ್ ನಾಯಕ ಗೋಪಾಲ್ ಚಂದ್ರ ರಾಯ್ ಮತ್ತು ಜಿತೇಂದ್ರ ಚೌಧರಿ ಮುಂತಾದ ನಾಯಕರು ಕರೀಂ ಮತ್ತು ಖಲೇಕ್ ಅವರೊಂದಿಗೆ ಇದ್ದರು.

ಸ್ಥಳದಿಂದ ಹಿಂತಿರುಗಿದ ನಂತರ, ಅಬ್ದುಲ್ ಖಲೇಕ್ ಅವರು ಪ್ರತಿಕ್ರಿಯಿಸಿ,“ನೆಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಯಿತು. ಮಧ್ಯಾಹ್ನ ನಿಯೋಗವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ತಲುಪಿದ ನಂತರ ದಾಳಿಗೆ ಒಳಗಾಯಿತು. ಬಿಶಾಲ್‌ಗಢದ ನೇಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಅವರನ್ನು ಭೇಟಿ ಮಾಡಲು ಮತ್ತು ಸಂತ್ರಸ್ತ ಜನರೊಂದಿಗೆ ಮಾತನಾಡಲು ಹೋಗಿದ್ದೆವು. ಇದ್ದಕ್ಕಿದ್ದಂತೆ ಕೆಲವರು ಬಂದು ತಾವು ಬಿಜೆಪಿ ಬೆಂಬಲಿಗರೆಂದು ಹೇಳಿಕೊಂಡು ಅಂಗಡಿಗಳಿಗೆ ಬೆಂಕಿ ಹಚ್ಚಿದರು. ನಾವು ಅವರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು. ಆದರೆ ಕೆಲವರು ಇದ್ದಕ್ಕಿದ್ದಂತೆ ನಮ್ಮ ವಾಹನಗಳ ಮೇಲೆ ಕಲ್ಲು ತೂರಿದರು. ನಮ್ಮ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ನಮಗೆ ಸಹಾಯ ಮಾಡಲು ಒಂದೇ ಒಂದು ಕೆಲಸವನ್ನು ಮಾಡದಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ದೂರಿದ್ದಾರೆ.

ಹಗಲು ಹೊತ್ತಿನಲ್ಲಿ ನಿಯೋಗಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿರುವಾಗ ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಮಾತನಾಡುವುದು ವ್ಯರ್ಥ ಎಂದು ಖಲೇಕ್ ಟೀಕಿಸಿದ್ದಾರೆ.

ರಂಜೀತಾ ರಂಜನ್ ಮಾತನಾಡಿ, “ಇಲ್ಲಿ ಹಗಲಿರುಳು ಗೂಂಡಾಗಿರಿ ನಡೆಯುತ್ತಿದ್ದು, ಪ್ರತಿಪಕ್ಷಗಳು ಒಗ್ಗಟ್ಟಾಗಿ ನಿಲ್ಲಲು ಬಯಸಿದರೆ ದಾಳಿ ನಡೆಸಲಾಗುತ್ತಿದೆ. ತ್ರಿಪುರಾದಲ್ಲಿ ಏಳು ಸಂಸದರು ಮತ್ತು ಹಲವಾರು ಶಾಸಕರು ಸುರಕ್ಷಿತವಾಗಿಲ್ಲದಿದ್ದರೆ, ಇಲ್ಲಿ ಸಾಮಾನ್ಯ ಜನರು ಎಷ್ಟು ಸುರಕ್ಷಿತವಾಗಿರಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...