Homeಮುಖಪುಟತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

ತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

- Advertisement -
- Advertisement -

ಚುನಾವಣೋತ್ತರ ಹಿಂಸಾಚಾರಗಳ ಕುರಿತು ತಿಳಿಯಲು ಹೋಗಿದ್ದ ಕಾಂಗ್ರೆಸ್ ಮತ್ತು ಎಡಪಕ್ಷದ ನಾಯಕರ ಮೇಲೆ ತ್ರಿಪುರಾದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

“ಅಗರ್ತಲಾದಿಂದ 30 ಕಿಮೀ ದೂರದಲ್ಲಿರುವ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ನೆಹಲ್‌ಚಂದ್ರನಗರದಲ್ಲಿ ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆದಿದೆ” ಎಂದು ಇಬ್ಬರು ಸಂಸದರು ಸೇರಿದಂತೆ ಎಡ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿದ್ದ ತಂಡ ಹೇಳಿದೆ.

ಕಾಂಗ್ರೆಸ್‌ ಮತ್ತು ಎಡಪಕ್ಷದ ನಾಯಕರ ಮೇಲೆ ಮೇಲೆ ದಾಳಿ ನಡೆಸಿದಾಗ ಕನಿಷ್ಠ ಮೂರು ಕಾರುಗಳನ್ನು ಹಾನಿಗೊಳಿಸಲಾಗಿದೆ. ಹಲ್ಲೆ ನಡೆಸಿದವರು ‘ಜೈ ಶ್ರೀ ರಾಮ್’ ಎಂದು ಕೂಗಿದರು ಎಂದು ಆರೋಪಿಸಲಾಗಿದೆ. ನಿಯೋಗದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಜೊತೆಯಲ್ಲಿದ್ದ ಭದ್ರತಾ ಸಿಬ್ಬಂದಿಗಳೂ ಮಧ್ಯಪ್ರವೇಶಿಸಲಿಲ್ಲ ಎಂದು ಸಂಸದರೊಬ್ಬರು ಆರೋಪಿಸಿದ್ದಾರೆ. ಘಟನೆಯ ನಂತರ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಅವರು ಪ್ರತಿಕ್ರಿಯಿಸಿದ್ದು, “ಎರಡು ದಿನಗಳ ಪ್ರವಾಸ ಹಮ್ಮಿಕೊಳ್ಳಲಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಎಡ ಮತ್ತು ಕಾಂಗ್ರೆಸ್ ನಾಯಕರ ತಂಡವು ನೆಹಲ್‌ಚಂದ್ರನಗರಕ್ಕೆ ದಿಢೀರ್‌ ಭೇಟಿ ನೀಡಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಮಯದಲ್ಲಿ ಕೆಲವು ಘೋಷಣೆಗಳನ್ನು ಕೂಗಲಾಗಿದೆ.

ಸಹಾಯಕ ಪೊಲೀಸ್ ಮಹಾನಿರೀಕ್ಷಕ ಜ್ಯೋತಿಷ್ಮನ್ ದಾಸ್ ಚೌಧರಿ ಪ್ರತಿಕ್ರಿಯಿಸಿ,  “ತಂಡದ ಜೊತೆಗಿದ್ದ ಪೊಲೀಸ್ ಅಧಿಕಾರಿಗಳು ಕ್ರಮಕೈಗೊಳ್ಳಲಿಲ್ಲ ಎಂಬುದು ಸುಳ್ಳು” ಎಂದಿದ್ದಾರೆ.

“ಜೊತೆಗಿದ್ದ ಪೊಲೀಸ್ ಬೆಂಗಾವಲು ತಂಡವು ತ್ವರಿತವಾಗಿ ಸ್ಪಂದಿಸಿ ನಿಯೋಗವನ್ನು ರಕ್ಷಿಸಿತು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಸ್ಥಳೀಯವಾಗಿ ಯಾವುದೇ ವ್ಯಕ್ತಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ. 2-3 ವಾಹನಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ. ಇತರ ದುಷ್ಕರ್ಮಿಗಳನ್ನು ಗುರುತಿಸಲು ಮತ್ತು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಿದಾಗಿನಿಂದ ಸಂಭವಿಸಿದ ಹಿಂಸಾಚಾರದ ಪ್ರಮಾಣವನ್ನು ತಿಳಿಯಲು ರಾಜ್ಯಕ್ಕೆ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ಎಡರಂಗ ಮತ್ತು ಕಾಂಗ್ರೆಸ್ ಸಂಸದರ ತಂಡ ಆಗಮಿಸಿತ್ತು. ಸೆಪಹಿಜಾಲಾ, ಗೋಮತಿ, ಪಶ್ಚಿಮ ತ್ರಿಪುರಾ, ಖೋವೈ ಮತ್ತು ಧಲೈ ಜಿಲ್ಲೆಗಳ ವಿವಿಧ ಭಾಗಗಳಿಗೆ ಭೇಟಿ ನೀಡಲಾಗಿತ್ತು.

ಸಿಪಿಐಎಂ ರಾಜ್ಯಸಭಾ ಸಂಸದ ಎಲರಾಮ್ ಕರೀಂ ಮತ್ತು ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರಿದ ತಂಡವು ಸಿಪಹಿಜಾಲಾದ ಬಿಶಾಲ್ಗಢ ಮತ್ತು ಪಶ್ಚಿಮ ತ್ರಿಪುರದ ಕೆಲವು ಭಾಗಗಳಿಗೆ ಭೇಟಿ ನೀಡಿದ್ದರು.

ಕಾಂಗ್ರೆಸ್ ಲೋಕಸಭಾ ಸಂಸದರಾದ ರಂಜಿತಾ ರಂಜನ್, ಸಿಪಿಐ(ಎಂ) ರಾಜ್ಯಸಭಾ ಸಂಸದರಾದ ಎ ಎ ರಹೀಮ್ ಮತ್ತು ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರನ್ನೊಳಗೊಂಡ ಎರಡನೇ ತಂಡವು ಪಶ್ಚಿಮ ತ್ರಿಪುರಾದ ಕಲ್ಕಾಲಿಯಾ ಗ್ರಾಮಕ್ಕೆ ಭೇಟಿ ನೀಡಿತ್ತು.

ಸಿಪಿಐ(ಎಂ) ಲೋಕಸಭಾ ಸಂಸದ ಪಿ ಆರ್ ನಟರಾಜನ್ ಮತ್ತು ಬಿನೋಯ್ ಬಿಸ್ವಾಮ್ ಅವರ ಮೂರನೇ ತಂಡವು ಜಿಲ್ಲೆಯ ದುರ್ಗಬರಿ, ಉಷಾಬಜಾರ್, ಕಾಳಿಕಾಪುರ ಮತ್ತು ಇತರ ಕೆಲವು ಗ್ರಾಮಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿತು. ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ವಿಧಾನಸಭೆಯ ಮಾಜಿ ಉಪ ಸ್ಪೀಕರ್ ಪಬಿತ್ರಾ ಕರ್ ಇದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ತ್ರಿಪುರಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಡಾ ಅಜಯ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿರಾಜಿತ್ ಸಿನ್ಹಾ, ಹಿರಿಯ ಕಾಂಗ್ರೆಸ್ ನಾಯಕ ಗೋಪಾಲ್ ಚಂದ್ರ ರಾಯ್ ಮತ್ತು ಜಿತೇಂದ್ರ ಚೌಧರಿ ಮುಂತಾದ ನಾಯಕರು ಕರೀಂ ಮತ್ತು ಖಲೇಕ್ ಅವರೊಂದಿಗೆ ಇದ್ದರು.

ಸ್ಥಳದಿಂದ ಹಿಂತಿರುಗಿದ ನಂತರ, ಅಬ್ದುಲ್ ಖಲೇಕ್ ಅವರು ಪ್ರತಿಕ್ರಿಯಿಸಿ,“ನೆಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಯಿತು. ಮಧ್ಯಾಹ್ನ ನಿಯೋಗವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ತಲುಪಿದ ನಂತರ ದಾಳಿಗೆ ಒಳಗಾಯಿತು. ಬಿಶಾಲ್‌ಗಢದ ನೇಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಅವರನ್ನು ಭೇಟಿ ಮಾಡಲು ಮತ್ತು ಸಂತ್ರಸ್ತ ಜನರೊಂದಿಗೆ ಮಾತನಾಡಲು ಹೋಗಿದ್ದೆವು. ಇದ್ದಕ್ಕಿದ್ದಂತೆ ಕೆಲವರು ಬಂದು ತಾವು ಬಿಜೆಪಿ ಬೆಂಬಲಿಗರೆಂದು ಹೇಳಿಕೊಂಡು ಅಂಗಡಿಗಳಿಗೆ ಬೆಂಕಿ ಹಚ್ಚಿದರು. ನಾವು ಅವರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು. ಆದರೆ ಕೆಲವರು ಇದ್ದಕ್ಕಿದ್ದಂತೆ ನಮ್ಮ ವಾಹನಗಳ ಮೇಲೆ ಕಲ್ಲು ತೂರಿದರು. ನಮ್ಮ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ನಮಗೆ ಸಹಾಯ ಮಾಡಲು ಒಂದೇ ಒಂದು ಕೆಲಸವನ್ನು ಮಾಡದಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ದೂರಿದ್ದಾರೆ.

ಹಗಲು ಹೊತ್ತಿನಲ್ಲಿ ನಿಯೋಗಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿರುವಾಗ ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಮಾತನಾಡುವುದು ವ್ಯರ್ಥ ಎಂದು ಖಲೇಕ್ ಟೀಕಿಸಿದ್ದಾರೆ.

ರಂಜೀತಾ ರಂಜನ್ ಮಾತನಾಡಿ, “ಇಲ್ಲಿ ಹಗಲಿರುಳು ಗೂಂಡಾಗಿರಿ ನಡೆಯುತ್ತಿದ್ದು, ಪ್ರತಿಪಕ್ಷಗಳು ಒಗ್ಗಟ್ಟಾಗಿ ನಿಲ್ಲಲು ಬಯಸಿದರೆ ದಾಳಿ ನಡೆಸಲಾಗುತ್ತಿದೆ. ತ್ರಿಪುರಾದಲ್ಲಿ ಏಳು ಸಂಸದರು ಮತ್ತು ಹಲವಾರು ಶಾಸಕರು ಸುರಕ್ಷಿತವಾಗಿಲ್ಲದಿದ್ದರೆ, ಇಲ್ಲಿ ಸಾಮಾನ್ಯ ಜನರು ಎಷ್ಟು ಸುರಕ್ಷಿತವಾಗಿರಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...