Homeಮುಖಪುಟತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

ತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

- Advertisement -
- Advertisement -

ಚುನಾವಣೋತ್ತರ ಹಿಂಸಾಚಾರಗಳ ಕುರಿತು ತಿಳಿಯಲು ಹೋಗಿದ್ದ ಕಾಂಗ್ರೆಸ್ ಮತ್ತು ಎಡಪಕ್ಷದ ನಾಯಕರ ಮೇಲೆ ತ್ರಿಪುರಾದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

“ಅಗರ್ತಲಾದಿಂದ 30 ಕಿಮೀ ದೂರದಲ್ಲಿರುವ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ನೆಹಲ್‌ಚಂದ್ರನಗರದಲ್ಲಿ ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆದಿದೆ” ಎಂದು ಇಬ್ಬರು ಸಂಸದರು ಸೇರಿದಂತೆ ಎಡ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿದ್ದ ತಂಡ ಹೇಳಿದೆ.

ಕಾಂಗ್ರೆಸ್‌ ಮತ್ತು ಎಡಪಕ್ಷದ ನಾಯಕರ ಮೇಲೆ ಮೇಲೆ ದಾಳಿ ನಡೆಸಿದಾಗ ಕನಿಷ್ಠ ಮೂರು ಕಾರುಗಳನ್ನು ಹಾನಿಗೊಳಿಸಲಾಗಿದೆ. ಹಲ್ಲೆ ನಡೆಸಿದವರು ‘ಜೈ ಶ್ರೀ ರಾಮ್’ ಎಂದು ಕೂಗಿದರು ಎಂದು ಆರೋಪಿಸಲಾಗಿದೆ. ನಿಯೋಗದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಜೊತೆಯಲ್ಲಿದ್ದ ಭದ್ರತಾ ಸಿಬ್ಬಂದಿಗಳೂ ಮಧ್ಯಪ್ರವೇಶಿಸಲಿಲ್ಲ ಎಂದು ಸಂಸದರೊಬ್ಬರು ಆರೋಪಿಸಿದ್ದಾರೆ. ಘಟನೆಯ ನಂತರ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಅವರು ಪ್ರತಿಕ್ರಿಯಿಸಿದ್ದು, “ಎರಡು ದಿನಗಳ ಪ್ರವಾಸ ಹಮ್ಮಿಕೊಳ್ಳಲಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಎಡ ಮತ್ತು ಕಾಂಗ್ರೆಸ್ ನಾಯಕರ ತಂಡವು ನೆಹಲ್‌ಚಂದ್ರನಗರಕ್ಕೆ ದಿಢೀರ್‌ ಭೇಟಿ ನೀಡಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಮಯದಲ್ಲಿ ಕೆಲವು ಘೋಷಣೆಗಳನ್ನು ಕೂಗಲಾಗಿದೆ.

ಸಹಾಯಕ ಪೊಲೀಸ್ ಮಹಾನಿರೀಕ್ಷಕ ಜ್ಯೋತಿಷ್ಮನ್ ದಾಸ್ ಚೌಧರಿ ಪ್ರತಿಕ್ರಿಯಿಸಿ,  “ತಂಡದ ಜೊತೆಗಿದ್ದ ಪೊಲೀಸ್ ಅಧಿಕಾರಿಗಳು ಕ್ರಮಕೈಗೊಳ್ಳಲಿಲ್ಲ ಎಂಬುದು ಸುಳ್ಳು” ಎಂದಿದ್ದಾರೆ.

“ಜೊತೆಗಿದ್ದ ಪೊಲೀಸ್ ಬೆಂಗಾವಲು ತಂಡವು ತ್ವರಿತವಾಗಿ ಸ್ಪಂದಿಸಿ ನಿಯೋಗವನ್ನು ರಕ್ಷಿಸಿತು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಸ್ಥಳೀಯವಾಗಿ ಯಾವುದೇ ವ್ಯಕ್ತಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ. 2-3 ವಾಹನಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ. ಇತರ ದುಷ್ಕರ್ಮಿಗಳನ್ನು ಗುರುತಿಸಲು ಮತ್ತು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಿದಾಗಿನಿಂದ ಸಂಭವಿಸಿದ ಹಿಂಸಾಚಾರದ ಪ್ರಮಾಣವನ್ನು ತಿಳಿಯಲು ರಾಜ್ಯಕ್ಕೆ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ಎಡರಂಗ ಮತ್ತು ಕಾಂಗ್ರೆಸ್ ಸಂಸದರ ತಂಡ ಆಗಮಿಸಿತ್ತು. ಸೆಪಹಿಜಾಲಾ, ಗೋಮತಿ, ಪಶ್ಚಿಮ ತ್ರಿಪುರಾ, ಖೋವೈ ಮತ್ತು ಧಲೈ ಜಿಲ್ಲೆಗಳ ವಿವಿಧ ಭಾಗಗಳಿಗೆ ಭೇಟಿ ನೀಡಲಾಗಿತ್ತು.

ಸಿಪಿಐಎಂ ರಾಜ್ಯಸಭಾ ಸಂಸದ ಎಲರಾಮ್ ಕರೀಂ ಮತ್ತು ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರಿದ ತಂಡವು ಸಿಪಹಿಜಾಲಾದ ಬಿಶಾಲ್ಗಢ ಮತ್ತು ಪಶ್ಚಿಮ ತ್ರಿಪುರದ ಕೆಲವು ಭಾಗಗಳಿಗೆ ಭೇಟಿ ನೀಡಿದ್ದರು.

ಕಾಂಗ್ರೆಸ್ ಲೋಕಸಭಾ ಸಂಸದರಾದ ರಂಜಿತಾ ರಂಜನ್, ಸಿಪಿಐ(ಎಂ) ರಾಜ್ಯಸಭಾ ಸಂಸದರಾದ ಎ ಎ ರಹೀಮ್ ಮತ್ತು ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರನ್ನೊಳಗೊಂಡ ಎರಡನೇ ತಂಡವು ಪಶ್ಚಿಮ ತ್ರಿಪುರಾದ ಕಲ್ಕಾಲಿಯಾ ಗ್ರಾಮಕ್ಕೆ ಭೇಟಿ ನೀಡಿತ್ತು.

ಸಿಪಿಐ(ಎಂ) ಲೋಕಸಭಾ ಸಂಸದ ಪಿ ಆರ್ ನಟರಾಜನ್ ಮತ್ತು ಬಿನೋಯ್ ಬಿಸ್ವಾಮ್ ಅವರ ಮೂರನೇ ತಂಡವು ಜಿಲ್ಲೆಯ ದುರ್ಗಬರಿ, ಉಷಾಬಜಾರ್, ಕಾಳಿಕಾಪುರ ಮತ್ತು ಇತರ ಕೆಲವು ಗ್ರಾಮಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿತು. ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ವಿಧಾನಸಭೆಯ ಮಾಜಿ ಉಪ ಸ್ಪೀಕರ್ ಪಬಿತ್ರಾ ಕರ್ ಇದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ತ್ರಿಪುರಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಡಾ ಅಜಯ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿರಾಜಿತ್ ಸಿನ್ಹಾ, ಹಿರಿಯ ಕಾಂಗ್ರೆಸ್ ನಾಯಕ ಗೋಪಾಲ್ ಚಂದ್ರ ರಾಯ್ ಮತ್ತು ಜಿತೇಂದ್ರ ಚೌಧರಿ ಮುಂತಾದ ನಾಯಕರು ಕರೀಂ ಮತ್ತು ಖಲೇಕ್ ಅವರೊಂದಿಗೆ ಇದ್ದರು.

ಸ್ಥಳದಿಂದ ಹಿಂತಿರುಗಿದ ನಂತರ, ಅಬ್ದುಲ್ ಖಲೇಕ್ ಅವರು ಪ್ರತಿಕ್ರಿಯಿಸಿ,“ನೆಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಯಿತು. ಮಧ್ಯಾಹ್ನ ನಿಯೋಗವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ತಲುಪಿದ ನಂತರ ದಾಳಿಗೆ ಒಳಗಾಯಿತು. ಬಿಶಾಲ್‌ಗಢದ ನೇಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಅವರನ್ನು ಭೇಟಿ ಮಾಡಲು ಮತ್ತು ಸಂತ್ರಸ್ತ ಜನರೊಂದಿಗೆ ಮಾತನಾಡಲು ಹೋಗಿದ್ದೆವು. ಇದ್ದಕ್ಕಿದ್ದಂತೆ ಕೆಲವರು ಬಂದು ತಾವು ಬಿಜೆಪಿ ಬೆಂಬಲಿಗರೆಂದು ಹೇಳಿಕೊಂಡು ಅಂಗಡಿಗಳಿಗೆ ಬೆಂಕಿ ಹಚ್ಚಿದರು. ನಾವು ಅವರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು. ಆದರೆ ಕೆಲವರು ಇದ್ದಕ್ಕಿದ್ದಂತೆ ನಮ್ಮ ವಾಹನಗಳ ಮೇಲೆ ಕಲ್ಲು ತೂರಿದರು. ನಮ್ಮ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ನಮಗೆ ಸಹಾಯ ಮಾಡಲು ಒಂದೇ ಒಂದು ಕೆಲಸವನ್ನು ಮಾಡದಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ದೂರಿದ್ದಾರೆ.

ಹಗಲು ಹೊತ್ತಿನಲ್ಲಿ ನಿಯೋಗಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿರುವಾಗ ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಮಾತನಾಡುವುದು ವ್ಯರ್ಥ ಎಂದು ಖಲೇಕ್ ಟೀಕಿಸಿದ್ದಾರೆ.

ರಂಜೀತಾ ರಂಜನ್ ಮಾತನಾಡಿ, “ಇಲ್ಲಿ ಹಗಲಿರುಳು ಗೂಂಡಾಗಿರಿ ನಡೆಯುತ್ತಿದ್ದು, ಪ್ರತಿಪಕ್ಷಗಳು ಒಗ್ಗಟ್ಟಾಗಿ ನಿಲ್ಲಲು ಬಯಸಿದರೆ ದಾಳಿ ನಡೆಸಲಾಗುತ್ತಿದೆ. ತ್ರಿಪುರಾದಲ್ಲಿ ಏಳು ಸಂಸದರು ಮತ್ತು ಹಲವಾರು ಶಾಸಕರು ಸುರಕ್ಷಿತವಾಗಿಲ್ಲದಿದ್ದರೆ, ಇಲ್ಲಿ ಸಾಮಾನ್ಯ ಜನರು ಎಷ್ಟು ಸುರಕ್ಷಿತವಾಗಿರಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...