Homeಮುಖಪುಟತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

ತ್ರಿಪುರದಲ್ಲಿ ಕಾಂಗ್ರೆಸ್, ಎಡಪಕ್ಷದ ನಾಯಕರ ಮೇಲೆ ದಾಳಿ; ಆರೋಪ

- Advertisement -
- Advertisement -

ಚುನಾವಣೋತ್ತರ ಹಿಂಸಾಚಾರಗಳ ಕುರಿತು ತಿಳಿಯಲು ಹೋಗಿದ್ದ ಕಾಂಗ್ರೆಸ್ ಮತ್ತು ಎಡಪಕ್ಷದ ನಾಯಕರ ಮೇಲೆ ತ್ರಿಪುರಾದಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

“ಅಗರ್ತಲಾದಿಂದ 30 ಕಿಮೀ ದೂರದಲ್ಲಿರುವ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ನೆಹಲ್‌ಚಂದ್ರನಗರದಲ್ಲಿ ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆದಿದೆ” ಎಂದು ಇಬ್ಬರು ಸಂಸದರು ಸೇರಿದಂತೆ ಎಡ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿದ್ದ ತಂಡ ಹೇಳಿದೆ.

ಕಾಂಗ್ರೆಸ್‌ ಮತ್ತು ಎಡಪಕ್ಷದ ನಾಯಕರ ಮೇಲೆ ಮೇಲೆ ದಾಳಿ ನಡೆಸಿದಾಗ ಕನಿಷ್ಠ ಮೂರು ಕಾರುಗಳನ್ನು ಹಾನಿಗೊಳಿಸಲಾಗಿದೆ. ಹಲ್ಲೆ ನಡೆಸಿದವರು ‘ಜೈ ಶ್ರೀ ರಾಮ್’ ಎಂದು ಕೂಗಿದರು ಎಂದು ಆರೋಪಿಸಲಾಗಿದೆ. ನಿಯೋಗದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಜೊತೆಯಲ್ಲಿದ್ದ ಭದ್ರತಾ ಸಿಬ್ಬಂದಿಗಳೂ ಮಧ್ಯಪ್ರವೇಶಿಸಲಿಲ್ಲ ಎಂದು ಸಂಸದರೊಬ್ಬರು ಆರೋಪಿಸಿದ್ದಾರೆ. ಘಟನೆಯ ನಂತರ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಅವರು ಪ್ರತಿಕ್ರಿಯಿಸಿದ್ದು, “ಎರಡು ದಿನಗಳ ಪ್ರವಾಸ ಹಮ್ಮಿಕೊಳ್ಳಲಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಎಡ ಮತ್ತು ಕಾಂಗ್ರೆಸ್ ನಾಯಕರ ತಂಡವು ನೆಹಲ್‌ಚಂದ್ರನಗರಕ್ಕೆ ದಿಢೀರ್‌ ಭೇಟಿ ನೀಡಿತು ಎಂದು ಪೊಲೀಸರು ಹೇಳಿದ್ದಾರೆ. ಈ ಸಮಯದಲ್ಲಿ ಕೆಲವು ಘೋಷಣೆಗಳನ್ನು ಕೂಗಲಾಗಿದೆ.

ಸಹಾಯಕ ಪೊಲೀಸ್ ಮಹಾನಿರೀಕ್ಷಕ ಜ್ಯೋತಿಷ್ಮನ್ ದಾಸ್ ಚೌಧರಿ ಪ್ರತಿಕ್ರಿಯಿಸಿ,  “ತಂಡದ ಜೊತೆಗಿದ್ದ ಪೊಲೀಸ್ ಅಧಿಕಾರಿಗಳು ಕ್ರಮಕೈಗೊಳ್ಳಲಿಲ್ಲ ಎಂಬುದು ಸುಳ್ಳು” ಎಂದಿದ್ದಾರೆ.

“ಜೊತೆಗಿದ್ದ ಪೊಲೀಸ್ ಬೆಂಗಾವಲು ತಂಡವು ತ್ವರಿತವಾಗಿ ಸ್ಪಂದಿಸಿ ನಿಯೋಗವನ್ನು ರಕ್ಷಿಸಿತು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಸ್ಥಳೀಯವಾಗಿ ಯಾವುದೇ ವ್ಯಕ್ತಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ. 2-3 ವಾಹನಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ. ಇತರ ದುಷ್ಕರ್ಮಿಗಳನ್ನು ಗುರುತಿಸಲು ಮತ್ತು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಿದಾಗಿನಿಂದ ಸಂಭವಿಸಿದ ಹಿಂಸಾಚಾರದ ಪ್ರಮಾಣವನ್ನು ತಿಳಿಯಲು ರಾಜ್ಯಕ್ಕೆ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ಎಡರಂಗ ಮತ್ತು ಕಾಂಗ್ರೆಸ್ ಸಂಸದರ ತಂಡ ಆಗಮಿಸಿತ್ತು. ಸೆಪಹಿಜಾಲಾ, ಗೋಮತಿ, ಪಶ್ಚಿಮ ತ್ರಿಪುರಾ, ಖೋವೈ ಮತ್ತು ಧಲೈ ಜಿಲ್ಲೆಗಳ ವಿವಿಧ ಭಾಗಗಳಿಗೆ ಭೇಟಿ ನೀಡಲಾಗಿತ್ತು.

ಸಿಪಿಐಎಂ ರಾಜ್ಯಸಭಾ ಸಂಸದ ಎಲರಾಮ್ ಕರೀಂ ಮತ್ತು ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರಿದ ತಂಡವು ಸಿಪಹಿಜಾಲಾದ ಬಿಶಾಲ್ಗಢ ಮತ್ತು ಪಶ್ಚಿಮ ತ್ರಿಪುರದ ಕೆಲವು ಭಾಗಗಳಿಗೆ ಭೇಟಿ ನೀಡಿದ್ದರು.

ಕಾಂಗ್ರೆಸ್ ಲೋಕಸಭಾ ಸಂಸದರಾದ ರಂಜಿತಾ ರಂಜನ್, ಸಿಪಿಐ(ಎಂ) ರಾಜ್ಯಸಭಾ ಸಂಸದರಾದ ಎ ಎ ರಹೀಮ್ ಮತ್ತು ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರನ್ನೊಳಗೊಂಡ ಎರಡನೇ ತಂಡವು ಪಶ್ಚಿಮ ತ್ರಿಪುರಾದ ಕಲ್ಕಾಲಿಯಾ ಗ್ರಾಮಕ್ಕೆ ಭೇಟಿ ನೀಡಿತ್ತು.

ಸಿಪಿಐ(ಎಂ) ಲೋಕಸಭಾ ಸಂಸದ ಪಿ ಆರ್ ನಟರಾಜನ್ ಮತ್ತು ಬಿನೋಯ್ ಬಿಸ್ವಾಮ್ ಅವರ ಮೂರನೇ ತಂಡವು ಜಿಲ್ಲೆಯ ದುರ್ಗಬರಿ, ಉಷಾಬಜಾರ್, ಕಾಳಿಕಾಪುರ ಮತ್ತು ಇತರ ಕೆಲವು ಗ್ರಾಮಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿತು. ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ವಿಧಾನಸಭೆಯ ಮಾಜಿ ಉಪ ಸ್ಪೀಕರ್ ಪಬಿತ್ರಾ ಕರ್ ಇದ್ದರು.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ತ್ರಿಪುರಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಡಾ ಅಜಯ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿರಾಜಿತ್ ಸಿನ್ಹಾ, ಹಿರಿಯ ಕಾಂಗ್ರೆಸ್ ನಾಯಕ ಗೋಪಾಲ್ ಚಂದ್ರ ರಾಯ್ ಮತ್ತು ಜಿತೇಂದ್ರ ಚೌಧರಿ ಮುಂತಾದ ನಾಯಕರು ಕರೀಂ ಮತ್ತು ಖಲೇಕ್ ಅವರೊಂದಿಗೆ ಇದ್ದರು.

ಸ್ಥಳದಿಂದ ಹಿಂತಿರುಗಿದ ನಂತರ, ಅಬ್ದುಲ್ ಖಲೇಕ್ ಅವರು ಪ್ರತಿಕ್ರಿಯಿಸಿ,“ನೆಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಯಿತು. ಮಧ್ಯಾಹ್ನ ನಿಯೋಗವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ತಲುಪಿದ ನಂತರ ದಾಳಿಗೆ ಒಳಗಾಯಿತು. ಬಿಶಾಲ್‌ಗಢದ ನೇಹಲ್‌ಚಂದ್ರನಗರದಲ್ಲಿ ಸುಮಾರು 20 ಅಂಗಡಿಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಅವರನ್ನು ಭೇಟಿ ಮಾಡಲು ಮತ್ತು ಸಂತ್ರಸ್ತ ಜನರೊಂದಿಗೆ ಮಾತನಾಡಲು ಹೋಗಿದ್ದೆವು. ಇದ್ದಕ್ಕಿದ್ದಂತೆ ಕೆಲವರು ಬಂದು ತಾವು ಬಿಜೆಪಿ ಬೆಂಬಲಿಗರೆಂದು ಹೇಳಿಕೊಂಡು ಅಂಗಡಿಗಳಿಗೆ ಬೆಂಕಿ ಹಚ್ಚಿದರು. ನಾವು ಅವರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು. ಆದರೆ ಕೆಲವರು ಇದ್ದಕ್ಕಿದ್ದಂತೆ ನಮ್ಮ ವಾಹನಗಳ ಮೇಲೆ ಕಲ್ಲು ತೂರಿದರು. ನಮ್ಮ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ನಮಗೆ ಸಹಾಯ ಮಾಡಲು ಒಂದೇ ಒಂದು ಕೆಲಸವನ್ನು ಮಾಡದಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ದೂರಿದ್ದಾರೆ.

ಹಗಲು ಹೊತ್ತಿನಲ್ಲಿ ನಿಯೋಗಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿರುವಾಗ ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಮಾತನಾಡುವುದು ವ್ಯರ್ಥ ಎಂದು ಖಲೇಕ್ ಟೀಕಿಸಿದ್ದಾರೆ.

ರಂಜೀತಾ ರಂಜನ್ ಮಾತನಾಡಿ, “ಇಲ್ಲಿ ಹಗಲಿರುಳು ಗೂಂಡಾಗಿರಿ ನಡೆಯುತ್ತಿದ್ದು, ಪ್ರತಿಪಕ್ಷಗಳು ಒಗ್ಗಟ್ಟಾಗಿ ನಿಲ್ಲಲು ಬಯಸಿದರೆ ದಾಳಿ ನಡೆಸಲಾಗುತ್ತಿದೆ. ತ್ರಿಪುರಾದಲ್ಲಿ ಏಳು ಸಂಸದರು ಮತ್ತು ಹಲವಾರು ಶಾಸಕರು ಸುರಕ್ಷಿತವಾಗಿಲ್ಲದಿದ್ದರೆ, ಇಲ್ಲಿ ಸಾಮಾನ್ಯ ಜನರು ಎಷ್ಟು ಸುರಕ್ಷಿತವಾಗಿರಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...