Homeಮುಖಪುಟಪಕ್ಷದ ಬ್ಯಾಂಕ್‌ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ: ಕಾಂಗ್ರೆಸ್‌ ಆರೋಪ

ಪಕ್ಷದ ಬ್ಯಾಂಕ್‌ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ: ಕಾಂಗ್ರೆಸ್‌ ಆರೋಪ

- Advertisement -
- Advertisement -

ಕಾಂಗ್ರೆಸ್ ಪಕ್ಷವು ತನ್ನ ನಾಲ್ಕು ಪ್ರಮುಖ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆಯು “ಕ್ಷುಲ್ಲಕ ಕಾರಣಕ್ಕೆ” ಸ್ಥಗಿತಗೊಳಿಸಿದೆ ಎಂದು ಶುಕ್ರವಾರ ಆರೋಪಿಸಿದೆ.

ಪಕ್ಷದ ಯುವ ಘಟಕದ ಬ್ಯಾಂಕ್ ಖಾತೆಯನ್ನೂ ಸ್ಥಗಿತಗೊಳಿಸಲಾಗಿದೆ. 2018-19 ಚುನಾವಣಾ ವರ್ಷಕ್ಕೆ ಪಕ್ಷದಿಂದ ಆದಾಯ ತೆರಿಗೆ ಇಲಾಖೆಯು ರೂ. 210 ಕೋಟಿ ತೆರಿಗೆ ಬೇಡಿಕೆ ಇರಿಸಿದೆ. ಇದು ರಾಜಕೀಯ ಪ್ರೇರಿತ ಕ್ರಮವಾಗಿದೆ ಮತ್ತು ಪಕ್ಷದ ಚುನಾವಣಾ ತಯಾರಿಗೆ ಅಡ್ಡಿಯುಂಟು ಮಾಡುವ ಯತ್ನ ಎಂದು ಕಾಂಗ್ರೆಸ್‌ ವಕ್ತಾರ ಅಜಯ್‌ ಮಾಕನ್‌ ಹೇಳಿದ್ದಾರೆ.

ಪಕ್ಷವು ಕೆಲ ದಿನಗಳ ಹಿಂದೆ ಸ್ವಲ್ಪ ತಡವಾಗಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿದೆ. ಅದನ್ನೇ ನೆಪವಾಗಿಟ್ಟುಕೊಂಡು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಈ ಬೆಳವಣಿಗೆ ನೋಡಿದರೆ, ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ, ಏಕ-ಪಕ್ಷ ಆಡಳಿತದಂತಿದೆ. ಮುಖ್ಯ ವಿಪಕ್ಷವನ್ನು ದುರ್ಬಲಗೊಳಿಸಲಾಗುತ್ತಿದೆ. ನಾವು ನ್ಯಾಯಾಂಗ, ಮಾಧ್ಯಮ ಮತ್ತು ಜನರಿಂದ ನ್ಯಾಯಕ್ಕಾಗಿ ಕೋರುತ್ತಿದ್ದೇವೆ ಎಂದಿದ್ದಾರೆ.

ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಿಂದ ₹210 ಕೋಟಿ ನೀಡುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದೆ. ನಮ್ಮ ಖಾತೆಗಳಲ್ಲಿನ ಕ್ರೌಡ್‌ಫಂಡಿಂಗ್ ಹಣವನ್ನು ಸ್ಥಗಿತಗೊಳಿಸಲಾಗಿದೆ. ಚುನಾವಣೆಗೆ ಕೇವಲ 2 ವಾರಗಳ ಮೊದಲು ಪ್ರತಿಪಕ್ಷಗಳ ಖಾತೆಗಳನ್ನು ಸ್ಥಗಿತಗೊಳಿಸಿದರೆ ಅದು ಪ್ರಜಾಪ್ರಭುತ್ವವನ್ನು ಸ್ಥಗಿತಗೊಳಿಸಿದಂತೆ ಎಂದು ಮಾಕನ್ ಹೇಳಿದ್ದಾರೆ.

ಸದ್ಯ ನಮ್ಮ ಬಳಿ ಖರ್ಚು ಮಾಡಲು, ವಿದ್ಯುತ್ ಬಿಲ್ ಪಾವತಿಸಲು, ನಮ್ಮ ಉದ್ಯೋಗಿಗಳಿಗೆ ಸಂಬಳ ನೀಡಲು ಯಾವುದೇ ಹಣವಿಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆ ಸೇರಿದಂತೆ ಎಲ್ಲಾ ರಾಜಕೀಯ ಚಟುವಟಿಕೆಗಳ ಮೇಲೆ ಇದು ಪರಿಣಾಮ ಬೀರಿದೆ. ಬ್ಯಾಂಕ್‌ ಖಾತೆಗಳ ಮುಟ್ಟುಗೋಲು ನಿನ್ನೆಯಷ್ಟೇ ತಿಳಿದು ಬಂತು. ಒಟ್ಟು ನಾಲ್ಕು ಖಾತೆಗಳು ಬಾಧಿತವಾಗಿವೆ ಎಂದು ಪಕ್ಷದ ವಕೀಲರಾದ ವಿವೇಕ್‌ ತಂಖ ತಿಳಿಸಿದ್ದಾರೆ ಎಂದಿದ್ದಾರೆ.

ಆದಾಯ ತೆರಿಗೆ ಇಲಾಖೆಯ ಕ್ರಮದ ವಿರುದ್ಧ ಪಕ್ಷ ಕಾನೂನು ಮೊರೆ ಹೋಗಿದೆ. ಈ ವಿಚಾರ ಆದಾಯ ತೆರಿಗೆ ಅಪೀಲು ಟ್ರಿಬ್ಯುನಲ್‌ ಮುಂದಿದೆ ಎಂದು ಅವರು ಮಾಕನ್ ಹೇಳಿದ್ದಾರೆ. ವಿಚಾರಣೆ ಬಾಕಿಯಿದ್ದರಿಂದ ಈ ವಿಚಾರವನ್ನು ಈ ಹಿಂದೆ ಬಹಿರಂಗಪಡಿಸಿರಲಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ಬಜೆಟ್: ಸುಳ್ಳು ಸುದ್ದಿ ತಡೆಗೆ ಸತ್ಯ ಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...