Homeಕರ್ನಾಟಕಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ...

ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಬೆಳಗಾವಿಯಲ್ಲಿ ಇಂದು (ಡಿ.27) ನಡೆಯಬೇಕಿದ್ದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ರದ್ದು ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ನಿನ್ನೆ (ಡಿ.26) ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಇಂದು (ಶುಕ್ರವಾರ) ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಇಂದು ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರ ಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಭಾಗವಹಿಸಿ ಗೌರವ ಸಲ್ಲಿಸಿದರೆ ಸಾಕು. ಹೊರ ಊರುಗಳಿಂದ ಹೊರಡುವ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು ಎಂದು ಡಿಕೆಶಿ ಸೂಚಿಸಿದ್ದಾರೆ.

ಅಂತಿಮ ದರ್ಶನಕ್ಕಾಗಿ ದೆಹಲಿಗೆ ಪ್ರಯಾಣ

“ನೀವು ದೆಹಲಿಗೆ ತೆರಳುವಿರಾ? ಎಂದು ಪತ್ರಕರ್ತರು ಕೇಳಿದಾಗ, “ಪಕ್ಷದ ಅಧ್ಯಕ್ಷನಾಗಿ ಮನಮೋಹನ್ ಸಿಂಗ್ ಅವರ ಅಂತಿಮ ದರ್ಶನದಲ್ಲಿ ಭಾಗವಹಿಸುವುದು ನನ್ನ ಕರ್ತವ್ಯ. ರಾಜ್ಯದ ಹಿರಿಯ ನಾಯಕರು ಸೇರಿದಂತೆ ಒಂದಷ್ಟು ಮಂದಿ ದೆಹಲಿಗೆ ತೆರಳಲಿದ್ದೇವೆ. ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಹಾಗೂ ಕೈ ಕೆಳಗೆ ಕೆಲಸ ಮಾಡಿದವರು ಎಂದು ಡಿಕೆಶಿ ಹೇಳಿದ್ದಾರೆ.

‘ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟವರು ಸಿಂಗ್’

“ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ, ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ‘ನರ್ಮ್ ಯೋಜನೆ’ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಅವರು ನೀಡಿದ ಕೊಡುಗೆಗಳು. ಮನಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದ ದಿನ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು” ಎಂದು ಡಿಕೆಶಿ ಸ್ಮರಿಸಿದ್ದಾರೆ.

“ಪ್ರತಿ ಕೆಲಸದಲ್ಲಿಯೂ ಗಾಂಭೀರ್ಯತೆ ಪ್ರಾಮಾಣಿಕತೆಯನ್ನು ಉಳಿಸಿಕೊಂಡಿದ್ದವರು ಮನಮೋಹನ್ ಸಿಂಗ್. ಅವರ ಆಡಳಿತ ಅವಧಿಯಲ್ಲಿ ಬಡವರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನರೇಗಾ ಮೂಲಕ ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ ಗ್ಯಾರಂಟಿ ಸೃಷ್ಟಿ ಮಾಡಿದವರು. ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು ಸೇರಿದಂತೆ ಈ ದೇಶವನ್ನು ಗಟ್ಟಿಗೊಳಿಸುವ ಅನೇಕ ಕಾಯ್ದೆಗಳನ್ನು ನೀಡಿದವರು” ಎಂದಿದ್ದಾರೆ.

“ಗಾಂಧಿ ಭಾರತ’ ಕಾರ್ಯಕ್ರಮ ಅಂಗವಾಗಿ ಬೆಳಗಾವಿಯಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಉಳಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಶುಕ್ರವಾರ ಬೆಳಿಗ್ಗೆ ಮಾಹಿತಿ ನೀಡಲಾಗುವುದು. ಸಾಕಷ್ಟು ಜನರು ದೀಪಾಲಂಕಾರವನ್ನು ವೀಕ್ಷಿಸುತ್ತಿದ್ದಾರೆ. ಈ ಕಾರಣಕ್ಕೆ ಉಳಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಡಿಸಿಎಂ ಹೇಳಿದ್ದಾರೆ.

ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | 7 ದಿನಗಳ ರಾಷ್ಟ್ರೀಯ ಶೋಕಾಚರಣೆ; ಇಂದು ಸರ್ಕಾರಿ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...