Homeಕರ್ನಾಟಕಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.

- Advertisement -
- Advertisement -

ಇಂದು ಒಂದು ದಿನದ ವಿಧಾನ ಪರಿಷತ್ ಅಧಿವೇಶನ ಆರಂಭವಾಗಬೇಕಿತ್ತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆದರೆ ಇಂದು ವಿಧಾನ ಪರಿಷತ್ ಅಧಿವೇಶನ ಆರಂಭವಾಗುವ ಮೊದಲೇ ಹಲವು ನಾಟಕೀಯ ಬೆಳವಣಿಗೆಗಳು ಜರುಗಿದ್ದು, ಗದ್ದಲ, ಕೈ-ಕೈ ಮಿಲಾಯಿಸುವ ಪರಿಸ್ಥಿತಿ ಉದ್ಭವಿಸಿತ್ತು.

ಇಂದಿನ ಕಲಾಪ ಆರಂಭವಾಗುವ ಮೊದಲೇ ಸಭಾಪತಿ ಸ್ಥಾನದಲ್ಲಿ ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿದ್ದಾರೆ! ಇದರಿಂದ ಕುಪಿತಗೊಂಡ ಕಾಂಗ್ರೆಸ್ ಸದಸ್ಯರು ಸಭಾಪತಿಗಳ ಆಸೀನದತ್ತ ನಡೆದು ಅವರನ್ನು ಆ ಸ್ಥಾನದಿಂದ ಹೊರಗೆಳೆಯಲು ಪ್ರಯತ್ನಿಸಿದ್ದಾರೆ. ಆ ಸಮಯಕ್ಕೆ ಬಿಜೆಪಿ ಸದಸ್ಯರು ಬಂದು ಅವರನ್ನು ಮತ್ತೆ ಅದೇ ಸ್ಥಾನದಲ್ಲಿ ಕುಳ್ಳಿರಿಸಿ ಕಲಾಪ ಮುಂದುವರೆಸಲು ಪ್ರಯತ್ನಿಸಿದ್ದಾರೆ. ಈ ಸಮಯದಲ್ಲಿ ಮಾರ್ಷಲ್‌ಗಳು ಏನು ಮಾಡಬೇಕೆಂದು ತಿಳಿಯದೆ ಕಕ್ಕಾಬಿಕ್ಕಿಯಾಗಿದ್ದಾರೆ!

ಕೆಲ ಸಮಯ ಪರಿಷತ್ ಅಧಿವೇಶನ ಅಕ್ಷರಶಃ ಜಗಳಬೀದಿಯಾಗಿ ಪರಿವರ್ತನೆಗೊಂಡಿದೆ. ಕಲಾಪ ಕಾರ್ಯಸೂಚಿ ಕಿತ್ತೆಸುವುದು, ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಳ್ಳುವುದು, ಕೈ ಕೈ ಮಿಲಾಯಿಸುವುದು ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಸದಸ್ಯರು ಬಲವಂತವಾಗಿ ಉಪಸಭಾಪತಿ ಧರ್ಮೇಗೌಡರವರನ್ನು ಕೆಳಗಿಳಿಸಿ ಆ ಸ್ಥಾನದಲ್ಲಿ ತಮ್ಮ ಪಕ್ಷದ ಸದಸ್ಯರನ್ನು ಕೂಡಿಸಿದ್ದಾರೆ. ಅಲ್ಲದೆ ಬಲವಂತವಾಗಿ ಸಭಾಪತಿಗಳ ಕೊಠಡಿಯ ಬಾಗಿಲು ತೆರೆದು ಅವರನ್ನು ಕರೆತಂದು ಸಭಾಪತಿ ಸ್ಥಾನದಲ್ಲಿ ಕೂರಿಸಲು ಪ್ರಯತ್ನಿಸಿದ್ದಾರೆ. ನಂತರ ಮಾರ್ಷಲ್‌ಗಳ ರಕ್ಷಣೆಯಲ್ಲಿ ಸಭಾಪತಿ ಸ್ಥಾನಕ್ಕೆ ಬಂದ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರು ಅನಿರ್ಧಿಷ್ಟಾವಧಿಯವರೆಗೆ ಕಲಾಪ ಮುಂದೂಡಿದ್ದಾರೆ.

ಸದನ ಆರಂಭವಾಗದಿದ್ದಾಗಲೇ ಬಿಜೆಪಿ ಮತ್ತು ಜೆಡಿಎಸ್ ಅಕ್ರಮವಾಗಿ ಉಪಸಭಾಪತಿಯನ್ನು ಸಭಾಪತಿ ಕುರ್ಚಿಯಲ್ಲಿ ಕೂರಿಸಿತು. ಬಿಜೆಪಿ ಇಂತಹ ಅಸಂವಿಧಾನಿಕ ಕೆಲಸಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಕಾಂಗ್ರೆಸ್ ಸದಸ್ಯರು ಅವರನ್ನು ಆ ಸ್ಥಾನದಿಂದ ಕೆಳಗಿಳಿಯುವಂತೆ ಕೇಳಿಕೊಂಡೆವು. ಅವರು ಒಪ್ಪಲಿಲ್ಲ. ಅದು  ಕಾನೂನುಬಾಹಿರ ಕ್ರಮವಾದ ಕಾರಣ ನಾವು ಅವರನ್ನು ಹೊರಹಾಕಬೇಕಾಯಿತು: ಎಂದು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಅದರ ಭಾಗವಾಗಿ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ನೀಡಿದೆ. ಅದೇ ಇಂದಿನ ಗದ್ದಲ ಗಲಾಟೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಲ್ಲಿ ಕಾಂಗ್ರೆಸ್ ನದು ತಪ್ಪಿದೆ ಬಿಜೆಪಿ ಜೆಡಿಎಸ್ ತಪ್ಪು ಮಾಡಿದ್ದರೆ. ಕಾನೂನಿನ ಅಡಿಯಲ್ಲಿ ಕ್ರಮಜರಿಗಿಸಬಹುದಿತ್ತು. ಆದರೆ ಉಪ ಸಭಾಪತಿಯನ್ನು ಕತ್ತು ಹಿಡಿದು ದಬ್ಬಿರುವುದು ಸರಿಯಲ್ಲ. ಪರಿಷತ್ತಿನ ಗೌರವಕ್ಕೆ ಚ್ಯುತಿ ತಂದಿದ್ದಾರೆ. ಅವರನ್ನು ಶಾಶ್ವತವಾಗಿ ಸದನದಿಂದ ಹೊರಗಡೆ ಇಡಬೇಕು.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...