Homeಕರ್ನಾಟಕಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.

- Advertisement -
- Advertisement -

ಇಂದು ಒಂದು ದಿನದ ವಿಧಾನ ಪರಿಷತ್ ಅಧಿವೇಶನ ಆರಂಭವಾಗಬೇಕಿತ್ತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆದರೆ ಇಂದು ವಿಧಾನ ಪರಿಷತ್ ಅಧಿವೇಶನ ಆರಂಭವಾಗುವ ಮೊದಲೇ ಹಲವು ನಾಟಕೀಯ ಬೆಳವಣಿಗೆಗಳು ಜರುಗಿದ್ದು, ಗದ್ದಲ, ಕೈ-ಕೈ ಮಿಲಾಯಿಸುವ ಪರಿಸ್ಥಿತಿ ಉದ್ಭವಿಸಿತ್ತು.

ಇಂದಿನ ಕಲಾಪ ಆರಂಭವಾಗುವ ಮೊದಲೇ ಸಭಾಪತಿ ಸ್ಥಾನದಲ್ಲಿ ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿದ್ದಾರೆ! ಇದರಿಂದ ಕುಪಿತಗೊಂಡ ಕಾಂಗ್ರೆಸ್ ಸದಸ್ಯರು ಸಭಾಪತಿಗಳ ಆಸೀನದತ್ತ ನಡೆದು ಅವರನ್ನು ಆ ಸ್ಥಾನದಿಂದ ಹೊರಗೆಳೆಯಲು ಪ್ರಯತ್ನಿಸಿದ್ದಾರೆ. ಆ ಸಮಯಕ್ಕೆ ಬಿಜೆಪಿ ಸದಸ್ಯರು ಬಂದು ಅವರನ್ನು ಮತ್ತೆ ಅದೇ ಸ್ಥಾನದಲ್ಲಿ ಕುಳ್ಳಿರಿಸಿ ಕಲಾಪ ಮುಂದುವರೆಸಲು ಪ್ರಯತ್ನಿಸಿದ್ದಾರೆ. ಈ ಸಮಯದಲ್ಲಿ ಮಾರ್ಷಲ್‌ಗಳು ಏನು ಮಾಡಬೇಕೆಂದು ತಿಳಿಯದೆ ಕಕ್ಕಾಬಿಕ್ಕಿಯಾಗಿದ್ದಾರೆ!

ಕೆಲ ಸಮಯ ಪರಿಷತ್ ಅಧಿವೇಶನ ಅಕ್ಷರಶಃ ಜಗಳಬೀದಿಯಾಗಿ ಪರಿವರ್ತನೆಗೊಂಡಿದೆ. ಕಲಾಪ ಕಾರ್ಯಸೂಚಿ ಕಿತ್ತೆಸುವುದು, ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಳ್ಳುವುದು, ಕೈ ಕೈ ಮಿಲಾಯಿಸುವುದು ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಸದಸ್ಯರು ಬಲವಂತವಾಗಿ ಉಪಸಭಾಪತಿ ಧರ್ಮೇಗೌಡರವರನ್ನು ಕೆಳಗಿಳಿಸಿ ಆ ಸ್ಥಾನದಲ್ಲಿ ತಮ್ಮ ಪಕ್ಷದ ಸದಸ್ಯರನ್ನು ಕೂಡಿಸಿದ್ದಾರೆ. ಅಲ್ಲದೆ ಬಲವಂತವಾಗಿ ಸಭಾಪತಿಗಳ ಕೊಠಡಿಯ ಬಾಗಿಲು ತೆರೆದು ಅವರನ್ನು ಕರೆತಂದು ಸಭಾಪತಿ ಸ್ಥಾನದಲ್ಲಿ ಕೂರಿಸಲು ಪ್ರಯತ್ನಿಸಿದ್ದಾರೆ. ನಂತರ ಮಾರ್ಷಲ್‌ಗಳ ರಕ್ಷಣೆಯಲ್ಲಿ ಸಭಾಪತಿ ಸ್ಥಾನಕ್ಕೆ ಬಂದ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರು ಅನಿರ್ಧಿಷ್ಟಾವಧಿಯವರೆಗೆ ಕಲಾಪ ಮುಂದೂಡಿದ್ದಾರೆ.

ಸದನ ಆರಂಭವಾಗದಿದ್ದಾಗಲೇ ಬಿಜೆಪಿ ಮತ್ತು ಜೆಡಿಎಸ್ ಅಕ್ರಮವಾಗಿ ಉಪಸಭಾಪತಿಯನ್ನು ಸಭಾಪತಿ ಕುರ್ಚಿಯಲ್ಲಿ ಕೂರಿಸಿತು. ಬಿಜೆಪಿ ಇಂತಹ ಅಸಂವಿಧಾನಿಕ ಕೆಲಸಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಕಾಂಗ್ರೆಸ್ ಸದಸ್ಯರು ಅವರನ್ನು ಆ ಸ್ಥಾನದಿಂದ ಕೆಳಗಿಳಿಯುವಂತೆ ಕೇಳಿಕೊಂಡೆವು. ಅವರು ಒಪ್ಪಲಿಲ್ಲ. ಅದು  ಕಾನೂನುಬಾಹಿರ ಕ್ರಮವಾದ ಕಾರಣ ನಾವು ಅವರನ್ನು ಹೊರಹಾಕಬೇಕಾಯಿತು: ಎಂದು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಅದರ ಭಾಗವಾಗಿ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ನೀಡಿದೆ. ಅದೇ ಇಂದಿನ ಗದ್ದಲ ಗಲಾಟೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಲ್ಲಿ ಕಾಂಗ್ರೆಸ್ ನದು ತಪ್ಪಿದೆ ಬಿಜೆಪಿ ಜೆಡಿಎಸ್ ತಪ್ಪು ಮಾಡಿದ್ದರೆ. ಕಾನೂನಿನ ಅಡಿಯಲ್ಲಿ ಕ್ರಮಜರಿಗಿಸಬಹುದಿತ್ತು. ಆದರೆ ಉಪ ಸಭಾಪತಿಯನ್ನು ಕತ್ತು ಹಿಡಿದು ದಬ್ಬಿರುವುದು ಸರಿಯಲ್ಲ. ಪರಿಷತ್ತಿನ ಗೌರವಕ್ಕೆ ಚ್ಯುತಿ ತಂದಿದ್ದಾರೆ. ಅವರನ್ನು ಶಾಶ್ವತವಾಗಿ ಸದನದಿಂದ ಹೊರಗಡೆ ಇಡಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...