Homeಕರ್ನಾಟಕಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.

- Advertisement -
- Advertisement -

ಇಂದು ಒಂದು ದಿನದ ವಿಧಾನ ಪರಿಷತ್ ಅಧಿವೇಶನ ಆರಂಭವಾಗಬೇಕಿತ್ತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆದರೆ ಇಂದು ವಿಧಾನ ಪರಿಷತ್ ಅಧಿವೇಶನ ಆರಂಭವಾಗುವ ಮೊದಲೇ ಹಲವು ನಾಟಕೀಯ ಬೆಳವಣಿಗೆಗಳು ಜರುಗಿದ್ದು, ಗದ್ದಲ, ಕೈ-ಕೈ ಮಿಲಾಯಿಸುವ ಪರಿಸ್ಥಿತಿ ಉದ್ಭವಿಸಿತ್ತು.

ಇಂದಿನ ಕಲಾಪ ಆರಂಭವಾಗುವ ಮೊದಲೇ ಸಭಾಪತಿ ಸ್ಥಾನದಲ್ಲಿ ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿದ್ದಾರೆ! ಇದರಿಂದ ಕುಪಿತಗೊಂಡ ಕಾಂಗ್ರೆಸ್ ಸದಸ್ಯರು ಸಭಾಪತಿಗಳ ಆಸೀನದತ್ತ ನಡೆದು ಅವರನ್ನು ಆ ಸ್ಥಾನದಿಂದ ಹೊರಗೆಳೆಯಲು ಪ್ರಯತ್ನಿಸಿದ್ದಾರೆ. ಆ ಸಮಯಕ್ಕೆ ಬಿಜೆಪಿ ಸದಸ್ಯರು ಬಂದು ಅವರನ್ನು ಮತ್ತೆ ಅದೇ ಸ್ಥಾನದಲ್ಲಿ ಕುಳ್ಳಿರಿಸಿ ಕಲಾಪ ಮುಂದುವರೆಸಲು ಪ್ರಯತ್ನಿಸಿದ್ದಾರೆ. ಈ ಸಮಯದಲ್ಲಿ ಮಾರ್ಷಲ್‌ಗಳು ಏನು ಮಾಡಬೇಕೆಂದು ತಿಳಿಯದೆ ಕಕ್ಕಾಬಿಕ್ಕಿಯಾಗಿದ್ದಾರೆ!

ಕೆಲ ಸಮಯ ಪರಿಷತ್ ಅಧಿವೇಶನ ಅಕ್ಷರಶಃ ಜಗಳಬೀದಿಯಾಗಿ ಪರಿವರ್ತನೆಗೊಂಡಿದೆ. ಕಲಾಪ ಕಾರ್ಯಸೂಚಿ ಕಿತ್ತೆಸುವುದು, ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಳ್ಳುವುದು, ಕೈ ಕೈ ಮಿಲಾಯಿಸುವುದು ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಸದಸ್ಯರು ಬಲವಂತವಾಗಿ ಉಪಸಭಾಪತಿ ಧರ್ಮೇಗೌಡರವರನ್ನು ಕೆಳಗಿಳಿಸಿ ಆ ಸ್ಥಾನದಲ್ಲಿ ತಮ್ಮ ಪಕ್ಷದ ಸದಸ್ಯರನ್ನು ಕೂಡಿಸಿದ್ದಾರೆ. ಅಲ್ಲದೆ ಬಲವಂತವಾಗಿ ಸಭಾಪತಿಗಳ ಕೊಠಡಿಯ ಬಾಗಿಲು ತೆರೆದು ಅವರನ್ನು ಕರೆತಂದು ಸಭಾಪತಿ ಸ್ಥಾನದಲ್ಲಿ ಕೂರಿಸಲು ಪ್ರಯತ್ನಿಸಿದ್ದಾರೆ. ನಂತರ ಮಾರ್ಷಲ್‌ಗಳ ರಕ್ಷಣೆಯಲ್ಲಿ ಸಭಾಪತಿ ಸ್ಥಾನಕ್ಕೆ ಬಂದ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರು ಅನಿರ್ಧಿಷ್ಟಾವಧಿಯವರೆಗೆ ಕಲಾಪ ಮುಂದೂಡಿದ್ದಾರೆ.

ಸದನ ಆರಂಭವಾಗದಿದ್ದಾಗಲೇ ಬಿಜೆಪಿ ಮತ್ತು ಜೆಡಿಎಸ್ ಅಕ್ರಮವಾಗಿ ಉಪಸಭಾಪತಿಯನ್ನು ಸಭಾಪತಿ ಕುರ್ಚಿಯಲ್ಲಿ ಕೂರಿಸಿತು. ಬಿಜೆಪಿ ಇಂತಹ ಅಸಂವಿಧಾನಿಕ ಕೆಲಸಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಕಾಂಗ್ರೆಸ್ ಸದಸ್ಯರು ಅವರನ್ನು ಆ ಸ್ಥಾನದಿಂದ ಕೆಳಗಿಳಿಯುವಂತೆ ಕೇಳಿಕೊಂಡೆವು. ಅವರು ಒಪ್ಪಲಿಲ್ಲ. ಅದು  ಕಾನೂನುಬಾಹಿರ ಕ್ರಮವಾದ ಕಾರಣ ನಾವು ಅವರನ್ನು ಹೊರಹಾಕಬೇಕಾಯಿತು: ಎಂದು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಜೆಡಿಎಸ್‌ ಮೈತ್ರಿ ಬೆಂಬಲಿತ ಸಭಾಪತಿ ಮತ್ತು ಉಪಸಭಾಪತಿ ಇದ್ದಾರೆ. ಜೆಡಿಎಸ್ ಇನ್ನೂ ಅಧಿಕೃತವಾಗಿ ತಮಗೆ ಸಭಾಪತಿಗಳ ಮೇಲೆ ವಿಶ್ವಾಸ ಇಲ್ಲ ಎಂದು ಹೇಳಿಲ್ಲ. ಆದರೆ ಬಿಜೆಪಿ ಸಭಾಪತಿ ಸ್ಥಾನ ಪಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಅದರ ಭಾಗವಾಗಿ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ನೀಡಿದೆ. ಅದೇ ಇಂದಿನ ಗದ್ದಲ ಗಲಾಟೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಲ್ಲಿ ಕಾಂಗ್ರೆಸ್ ನದು ತಪ್ಪಿದೆ ಬಿಜೆಪಿ ಜೆಡಿಎಸ್ ತಪ್ಪು ಮಾಡಿದ್ದರೆ. ಕಾನೂನಿನ ಅಡಿಯಲ್ಲಿ ಕ್ರಮಜರಿಗಿಸಬಹುದಿತ್ತು. ಆದರೆ ಉಪ ಸಭಾಪತಿಯನ್ನು ಕತ್ತು ಹಿಡಿದು ದಬ್ಬಿರುವುದು ಸರಿಯಲ್ಲ. ಪರಿಷತ್ತಿನ ಗೌರವಕ್ಕೆ ಚ್ಯುತಿ ತಂದಿದ್ದಾರೆ. ಅವರನ್ನು ಶಾಶ್ವತವಾಗಿ ಸದನದಿಂದ ಹೊರಗಡೆ ಇಡಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...