Homeಮುಖಪುಟ’ಸುಳ್ಳುಗಳು, ಪಕ್ಷಾಂತರ ಮತ್ತು ಅಣಕ’: ಫಡ್ನವಿಸ್‌ ರಾಜಿನಾಮೆ ನಂತರ ಕಾಂಗ್ರೆಸ್‌ನಿಂದ 8 ಪ್ರಶ್ನೆಗಳು

’ಸುಳ್ಳುಗಳು, ಪಕ್ಷಾಂತರ ಮತ್ತು ಅಣಕ’: ಫಡ್ನವಿಸ್‌ ರಾಜಿನಾಮೆ ನಂತರ ಕಾಂಗ್ರೆಸ್‌ನಿಂದ 8 ಪ್ರಶ್ನೆಗಳು

- Advertisement -
- Advertisement -

ಬಿಜೆಪಿಯ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ಪೀಕರಿಸಿದ ಮೂರು ದಿನಗಳಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಕಾಂಗ್ರೆಸ್ ಅವರು ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದ್ದು ಬಿಜೆಪಿಗೆ ಎಂಟು ಪ್ರಶ್ನೆಗಳನ್ನು ಹಾಕಿದೆ.

ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್‌ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಆ ಪ್ರಶ್ನೆಗಳನ್ನು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಚಾಣುಕ್ಯ ನೀತಿ ಎಂದರೆ ಪ್ರಜಾಪ್ರಭುತ್ವದ ಅಪಹರಣ ಎಂಬುದು ಈಗ ಸ್ಪಷ್ಟವಾಗಿದೆ. ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಮಹಾರಾಷ್ಟ್ರದ ಜನರಲ್ಲಿ ಕ್ಷಮೆಯಾಚಿಸಬೇಕು. ಅವರ ಸರ್ಕಾರವು ಸುಳ್ಳು ಮತ್ತು ಪಕ್ಷಾಂತರವನ್ನು ಆಧರಿಸಿದೆ ಎಂದು ಸುರ್ಜೆವಾಲಾ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ ರಾಜಿನಾಮೆ…

“ಈಗ ಆಗಿರುವ ಅನಾಹುತಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ಹೊಣೆಯಾಗಿದ್ದು ನಮ್ಮ ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಪಟ್ಟು ಹಿಡಿದಿದ್ದರೆ. ಆ ಪ್ರಶ್ನೆಗಳು ಕೆಳಗಿನಂತಿವೆ.

1. ಮಹಾರಾಷ್ಟ್ರದಲ್ಲಿ ನೀವು ಪ್ರಜಾಪ್ರಭುತ್ವದ ಅಣಕವನ್ನು ಏಕೆ ಮಾಡಿದಿರಿ?

2. ನೀವು ರಾಜ್ಯಪಾಲರನ್ನು ಕೈಗೊಂಬೆಯಾಗಿ ಏಕೆ ಬಳಸಿಕೊಂಡಿರಿ?

3. ರಾಷ್ಟ್ರಪತಿಗಳ ಘನತೆಗೆ ನೀವು ನೋವುಂಟು ಮಾಡಿದ್ದು ಏಕೆ?

4. ನೀವು ದೇಶದ ಕ್ಯಾಬಿನೆಟ್ ಅನ್ನು ಪಾರ್ಶ್ವವಾಯುವಿಗೆ ತಳ್ಳಿದ್ದಾದರೂ ಏಕೆ?

5. ಪಕ್ಷಾಂತರ, ಖರೀದಿ ಮತ್ತು ಮಾರಾಟದ ಮೇಲೆ ನಿಮ್ಮ ಬೆತ್ತಲೆ ಉತ್ಸಾಹ ಏಕೆ?

6. ಅಲ್ಪಸಂಖ್ಯಾತ ಬಲದ ಸರ್ಕಾರವಿದ್ದರೂ ಬಹುಮತದ ಸರ್ಕಾರದಂತೆ ನಾಟಕವಾಡಿದ್ದು ಏಕೆ?

7. ಭ್ರಷ್ಟಾಚಾರದ ಪ್ರಕರಣಗಳನ್ನು ನೀವು ಏಕೆ ಹಿಂತೆಗೆದುಕೊಂಡಿರಿ?

8. ನೀವು ಸಂವಿಧಾನವನ್ನು ಏಕೆ ಕಿತ್ತುಹಾಕುತ್ತಿದ್ದೀರಿ? ”

ಕಾಂಗ್ರೆಸ್ ಹಿರಿಯ ಮುಖಂಡರಾದ ಕೆ.ಸಿ.ವೇಣುಗೋಪಾಲ್ ಕೂಡ ಬಿಜೆಪಿ ಮೇಲೆ ದಾಳಿ ನಡೆಸಿದ್ದಾರೆ.

“ಇದು ಸಾಂವಿಧಾನಿಕ ಪ್ರಜಾಪ್ರಭುತ್ವದ ವಿಜಯ. ಕುದುರೆ ವ್ಯಾಪಾರದ ಮೂಲಕ ಸರ್ಕಾರ ಮಾಡಬಹುದೆಂದು ಅವರು ಯೋಚಿಸಿದ್ದರು. ಇದು ದೇವೇಂದ್ರ ಫಡ್ನವೀಸ್ ಅವರ ವೈಫಲ್ಯ ಮಾತ್ರವಲ್ಲದೆ ದೆಹಲಿಯಲ್ಲಿ ಕುಳಿತಿರುವ ಅವರ ಯಜಮಾನರ ಮುಖಕ್ಕೆ ಕಪಾಳಮೋಕ್ಷವಾಗಿದೆ ”ಎಂದು ಕೆ.ಸಿ ವೇಣುಗೋಪಾಲ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...