Homeಮುಖಪುಟಕೇಂದ್ರದಿಂದ ಜಾತಿ ಗಣತಿ ಘೋಷಣೆ: ಕಾರ್ಯಕಾರಿಣಿ ಸಭೆ ಕರೆದ ಕಾಂಗ್ರೆಸ್

ಕೇಂದ್ರದಿಂದ ಜಾತಿ ಗಣತಿ ಘೋಷಣೆ: ಕಾರ್ಯಕಾರಿಣಿ ಸಭೆ ಕರೆದ ಕಾಂಗ್ರೆಸ್

- Advertisement -
- Advertisement -

ದೇಶದಲ್ಲಿ ಜಾತಿ ಸಮೀಕ್ಷೆ ಅಥವಾ ಜಾತಿ ಜನಗಣತಿ ನಡೆಸಬೇಕು ಎಂಬುವುದು ಕಾಂಗ್ರೆಸ್‌ನ ಬಹುಕಾಲದ ಬೇಡಿಕೆಯಾಗಿತ್ತು. ತೆಲಂಗಾಣ, ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಈಗಾಗಲೇ ಜಾತಿ,  ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಜಾತಿ ಜನಗಣತಿ ನಡೆಸುತ್ತೇವೆ ಎಂದೂ ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಜಾತಿ ಗಣತಿಯ ವಿಷಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಂತೂ ದೃಢವಾಗಿ ನಿಂತಿದ್ದರು.

ಈ ನಡುವೆ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ, ಮುಂದಿನ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನು ನಡೆಸುತ್ತೇವೆ ಎಂದು ಬುಧವಾರ (ಏ.29) ಘೋಷಣೆ ಮಾಡಿದೆ. ಈ ಮೂಲಕ ಒಂದು ರೀತಿಯಲ್ಲಿ ಕಾಂಗ್ರೆಸ್‌ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ಕೇಂದ್ರ ಸರ್ಕಾರ ಜಾತಿ ಗಣತಿಯ ಬಗ್ಗೆ ಘೋಷಣೆ ಮಾಡಿದ ಹಿನ್ನೆಲೆ, ಮುಂದಿನ ನಡೆಯ ಬಗ್ಗೆ ಚರ್ಚಿಸಲು ನಾಳೆ (ಮೇ.2 ಶುಕ್ರವಾರ) ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ) ಸಭೆ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ನಾಳೆ ಸಂಜೆ 4 ಗಂಟೆಗೆ ಸಿಡಬ್ಲ್ಯುಸಿ ಸಭೆ ನಡೆಸಲಿದ್ದೇವೆ. ಸರ್ಕಾರ ಜಾತಿ ಗಣತಿ ಬಗ್ಗೆ ಘೋಷಣೆ ಮಾಡಿದೆ. ಈ ವಿಚಾರದಲ್ಲಿ ನಮ್ಮ ನಿಲುವೇನು, ಮುಂದಿನ ನಡೆಯೇನು ಎಂಬುವುದರ ಬಗ್ಗೆ ಚರ್ಚಿಸಬೇಕಿದೆ. ಜಾತಿ ಗಣತಿಯ ಬಜೆಟ್, ಅವಧಿ, ಶೇ,50 ಮೀಸಲಾತಿ ಮಿತಿ ತೆರವು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ನಮಗೆ ಸರ್ಕಾರದಿಂದ ಉತ್ತರ ಬೇಕಿದೆ. ಈ ಕುರಿತು ಚರ್ಚೆ ನಡೆಸಲಿದ್ದೇವೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಾತಿ ಗಣತಿಯ ಕುರಿತು ಕೇಂದ್ರದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ನಿರ್ಧಾರದ ನಂತರ, ಜಾತಿ ಜನಗಣತಿಯ ಅತ್ಯಂತ ಗಟ್ಟಿ ಪ್ರತಿಪಾದಕರಲ್ಲಿ ಒಬ್ಬರಾಗಿರುವ ಲೋಕಸಭಾ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ, “ಇದು ನಮ್ಮ ದೃಷ್ಟಿಕೋನ ಮತ್ತು ಹೊಸ ಅಭಿವೃದ್ಧಿ ಮಾದರಿಯತ್ತ ಮೊದಲ ಹೆಜ್ಜೆ ಎಂದು ಹೇಳಿದ್ದಾರೆ. ಮುಂದಿನ ಹಂತಗಳಲ್ಲಿ ಮೀಸಲಾತಿಯ ಮೇಲಿನ ಶೇ.50 ಮಿತಿಯನ್ನು ತೆಗೆದುಹಾಕುವುದು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಜಾರಿಗೆ ತರುವುದು ಸೇರಿದೆ ಎಂದಿದ್ದಾರೆ.

ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಾವು ಸಂಸತ್ತಿನಲ್ಲಿ ಜಾತಿ ಜನಗಣತಿಯನ್ನು ಮಾಡುತ್ತೇವೆ ಎಂದು ಹೇಳಿದ್ದೆವು ಮತ್ತು ಮೀಸಲಾತಿಯ ಮೇಲಿನ ಶೇ.50 ಮಿತಿ ತೆರವುಗೊಳಿಸುತ್ತೇವೆ ಎಂದಿದ್ದೆವು. ಕೇವಲ ನಾಲ್ಕು ಜಾತಿಗಳಿವೆ ಎಂದು ಹೇಳುತ್ತಿದ್ದ ನರೇಂದ್ರ ಮೋದಿ ಇದ್ದಕ್ಕಿದ್ದಂತೆ ಜಾತಿ ಜನಗಣತಿಯನ್ನು ಘೋಷಿಸಿದ್ದಾರೆ. ನಾವು ಇದನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಆದರೆ, ನಮಗೆ ಜಾತಿ ಗಣತಿಯ ಅವಧಿ ಗೊತ್ತಾಗಬೇಕು. ಅದನ್ನು ಯಾವಾಗ ಮಾಡಲಾಗುತ್ತದೆ ಎಂಬ ಮಾಹಿತಿ ಬೇಕು.ಇದು ನಮ್ಮ ಮೊದಲ ಹೆಜ್ಜೆ. ತೆಲಂಗಾಣ ಜಾತಿ ಜನಗಣತಿ ಮಾದರಿಯಾಗಿದೆ” ಎಂದು ಹೇಳಿದ್ದಾರೆ.

“ತೆಲಂಗಾಣ ಜಾತಿಗಣತಿಯನ್ನು ‘ವಿವರವಾದ ಮತ್ತು ಸೂಕ್ಷ್ಮ’ ಎಂದು ಬಣ್ಣಿಸಿದ ರಾಹುಲ್ ಗಾಂಧಿ, ಅದನ್ನು ‘ಮುಕ್ತ ಪ್ರಕ್ರಿಯೆಯ ಮೂಲಕ ಕೈಗೊಳ್ಳಲಾಗಿದೆ’ ಎಂದಿದ್ದಾರೆ. ರಾಷ್ಟ್ರೀಯ ಜನಗಣತಿಯ ವೇಳೆ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ನಡೆದ ಕೆಲವು ವಿಚಾರಗಳನ್ನು ಅನುಸರಿಸಬೇಕು. ಅದಕ್ಕೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ” ಎಂದಿದ್ದಾರೆ.

ಜಾತಿ ಗಣತಿ ವಿಚಾರದಲ್ಲಿ ಕ್ರೆಡಿಟ್ ವಾರ್ ಶುರುವಾಗಿದೆ. ಜಾತಿ ಗಣತಿಯನ್ನು ಬಲವಾಗಿ ಪ್ರತಿಪಾದಿಸಿದ್ದು ನಾವು. ನಮ್ಮ ಬೇಡಿಕೆಗೆ ಸರ್ಕಾರ ಮಣಿದಿದೆ ಎಂದು ಜನವರಿಗೆ ಮನವರಿಗೆ ಮಾಡುವ ಸವಾಲು ಮತ್ತು ನರೇಂದ್ರ ಮೋದಿ ಹಠಾತ್ ಜಾತಿ ಗಣತಿ ಘೋಷಣೆ ಮಾಡಿ, ಅದರ ಕ್ರೆಡಿಟ್ ಅನ್ನು ಚುನಾವಣೆಯ ಅಸ್ತ್ರವಾಗಿ ಬಳಸುವ ಆತಂಕ ಕಾಂಗ್ರೆಸ್‌ ನಾಯಕರಲ್ಲಿದೆ.

ಪಹಲ್ಗಾಮ್ ದಾಳಿ ಗಮನ ಬೇರೆಡೆ ಸೆಳೆಯಲು ಮೋದಿ ಸರ್ಕಾರದಿಂದ ಜಾತಿ ಜನಗಣತಿ ಮುನ್ನೆಲೆಗೆ: ಸಂಜಯ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...