Homeಮುಖಪುಟಕೇಂದ್ರದಿಂದ ಜಾತಿ ಗಣತಿ ಘೋಷಣೆ: ಕಾರ್ಯಕಾರಿಣಿ ಸಭೆ ಕರೆದ ಕಾಂಗ್ರೆಸ್

ಕೇಂದ್ರದಿಂದ ಜಾತಿ ಗಣತಿ ಘೋಷಣೆ: ಕಾರ್ಯಕಾರಿಣಿ ಸಭೆ ಕರೆದ ಕಾಂಗ್ರೆಸ್

- Advertisement -
- Advertisement -

ದೇಶದಲ್ಲಿ ಜಾತಿ ಸಮೀಕ್ಷೆ ಅಥವಾ ಜಾತಿ ಜನಗಣತಿ ನಡೆಸಬೇಕು ಎಂಬುವುದು ಕಾಂಗ್ರೆಸ್‌ನ ಬಹುಕಾಲದ ಬೇಡಿಕೆಯಾಗಿತ್ತು. ತೆಲಂಗಾಣ, ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಈಗಾಗಲೇ ಜಾತಿ,  ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ.

ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಜಾತಿ ಜನಗಣತಿ ನಡೆಸುತ್ತೇವೆ ಎಂದೂ ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ ಹೇಳಿಕೊಂಡು ಬಂದಿದೆ. ಜಾತಿ ಗಣತಿಯ ವಿಷಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಂತೂ ದೃಢವಾಗಿ ನಿಂತಿದ್ದರು.

ಈ ನಡುವೆ ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ, ಮುಂದಿನ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನು ನಡೆಸುತ್ತೇವೆ ಎಂದು ಬುಧವಾರ (ಏ.29) ಘೋಷಣೆ ಮಾಡಿದೆ. ಈ ಮೂಲಕ ಒಂದು ರೀತಿಯಲ್ಲಿ ಕಾಂಗ್ರೆಸ್‌ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ಕೇಂದ್ರ ಸರ್ಕಾರ ಜಾತಿ ಗಣತಿಯ ಬಗ್ಗೆ ಘೋಷಣೆ ಮಾಡಿದ ಹಿನ್ನೆಲೆ, ಮುಂದಿನ ನಡೆಯ ಬಗ್ಗೆ ಚರ್ಚಿಸಲು ನಾಳೆ (ಮೇ.2 ಶುಕ್ರವಾರ) ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ) ಸಭೆ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ನಾಳೆ ಸಂಜೆ 4 ಗಂಟೆಗೆ ಸಿಡಬ್ಲ್ಯುಸಿ ಸಭೆ ನಡೆಸಲಿದ್ದೇವೆ. ಸರ್ಕಾರ ಜಾತಿ ಗಣತಿ ಬಗ್ಗೆ ಘೋಷಣೆ ಮಾಡಿದೆ. ಈ ವಿಚಾರದಲ್ಲಿ ನಮ್ಮ ನಿಲುವೇನು, ಮುಂದಿನ ನಡೆಯೇನು ಎಂಬುವುದರ ಬಗ್ಗೆ ಚರ್ಚಿಸಬೇಕಿದೆ. ಜಾತಿ ಗಣತಿಯ ಬಜೆಟ್, ಅವಧಿ, ಶೇ,50 ಮೀಸಲಾತಿ ಮಿತಿ ತೆರವು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ನಮಗೆ ಸರ್ಕಾರದಿಂದ ಉತ್ತರ ಬೇಕಿದೆ. ಈ ಕುರಿತು ಚರ್ಚೆ ನಡೆಸಲಿದ್ದೇವೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಾತಿ ಗಣತಿಯ ಕುರಿತು ಕೇಂದ್ರದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ನಿರ್ಧಾರದ ನಂತರ, ಜಾತಿ ಜನಗಣತಿಯ ಅತ್ಯಂತ ಗಟ್ಟಿ ಪ್ರತಿಪಾದಕರಲ್ಲಿ ಒಬ್ಬರಾಗಿರುವ ಲೋಕಸಭಾ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ, “ಇದು ನಮ್ಮ ದೃಷ್ಟಿಕೋನ ಮತ್ತು ಹೊಸ ಅಭಿವೃದ್ಧಿ ಮಾದರಿಯತ್ತ ಮೊದಲ ಹೆಜ್ಜೆ ಎಂದು ಹೇಳಿದ್ದಾರೆ. ಮುಂದಿನ ಹಂತಗಳಲ್ಲಿ ಮೀಸಲಾತಿಯ ಮೇಲಿನ ಶೇ.50 ಮಿತಿಯನ್ನು ತೆಗೆದುಹಾಕುವುದು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಜಾರಿಗೆ ತರುವುದು ಸೇರಿದೆ ಎಂದಿದ್ದಾರೆ.

ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಾವು ಸಂಸತ್ತಿನಲ್ಲಿ ಜಾತಿ ಜನಗಣತಿಯನ್ನು ಮಾಡುತ್ತೇವೆ ಎಂದು ಹೇಳಿದ್ದೆವು ಮತ್ತು ಮೀಸಲಾತಿಯ ಮೇಲಿನ ಶೇ.50 ಮಿತಿ ತೆರವುಗೊಳಿಸುತ್ತೇವೆ ಎಂದಿದ್ದೆವು. ಕೇವಲ ನಾಲ್ಕು ಜಾತಿಗಳಿವೆ ಎಂದು ಹೇಳುತ್ತಿದ್ದ ನರೇಂದ್ರ ಮೋದಿ ಇದ್ದಕ್ಕಿದ್ದಂತೆ ಜಾತಿ ಜನಗಣತಿಯನ್ನು ಘೋಷಿಸಿದ್ದಾರೆ. ನಾವು ಇದನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಆದರೆ, ನಮಗೆ ಜಾತಿ ಗಣತಿಯ ಅವಧಿ ಗೊತ್ತಾಗಬೇಕು. ಅದನ್ನು ಯಾವಾಗ ಮಾಡಲಾಗುತ್ತದೆ ಎಂಬ ಮಾಹಿತಿ ಬೇಕು.ಇದು ನಮ್ಮ ಮೊದಲ ಹೆಜ್ಜೆ. ತೆಲಂಗಾಣ ಜಾತಿ ಜನಗಣತಿ ಮಾದರಿಯಾಗಿದೆ” ಎಂದು ಹೇಳಿದ್ದಾರೆ.

“ತೆಲಂಗಾಣ ಜಾತಿಗಣತಿಯನ್ನು ‘ವಿವರವಾದ ಮತ್ತು ಸೂಕ್ಷ್ಮ’ ಎಂದು ಬಣ್ಣಿಸಿದ ರಾಹುಲ್ ಗಾಂಧಿ, ಅದನ್ನು ‘ಮುಕ್ತ ಪ್ರಕ್ರಿಯೆಯ ಮೂಲಕ ಕೈಗೊಳ್ಳಲಾಗಿದೆ’ ಎಂದಿದ್ದಾರೆ. ರಾಷ್ಟ್ರೀಯ ಜನಗಣತಿಯ ವೇಳೆ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ನಡೆದ ಕೆಲವು ವಿಚಾರಗಳನ್ನು ಅನುಸರಿಸಬೇಕು. ಅದಕ್ಕೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ” ಎಂದಿದ್ದಾರೆ.

ಜಾತಿ ಗಣತಿ ವಿಚಾರದಲ್ಲಿ ಕ್ರೆಡಿಟ್ ವಾರ್ ಶುರುವಾಗಿದೆ. ಜಾತಿ ಗಣತಿಯನ್ನು ಬಲವಾಗಿ ಪ್ರತಿಪಾದಿಸಿದ್ದು ನಾವು. ನಮ್ಮ ಬೇಡಿಕೆಗೆ ಸರ್ಕಾರ ಮಣಿದಿದೆ ಎಂದು ಜನವರಿಗೆ ಮನವರಿಗೆ ಮಾಡುವ ಸವಾಲು ಮತ್ತು ನರೇಂದ್ರ ಮೋದಿ ಹಠಾತ್ ಜಾತಿ ಗಣತಿ ಘೋಷಣೆ ಮಾಡಿ, ಅದರ ಕ್ರೆಡಿಟ್ ಅನ್ನು ಚುನಾವಣೆಯ ಅಸ್ತ್ರವಾಗಿ ಬಳಸುವ ಆತಂಕ ಕಾಂಗ್ರೆಸ್‌ ನಾಯಕರಲ್ಲಿದೆ.

ಪಹಲ್ಗಾಮ್ ದಾಳಿ ಗಮನ ಬೇರೆಡೆ ಸೆಳೆಯಲು ಮೋದಿ ಸರ್ಕಾರದಿಂದ ಜಾತಿ ಜನಗಣತಿ ಮುನ್ನೆಲೆಗೆ: ಸಂಜಯ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...