Homeಮುಖಪುಟಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ...

ಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಬಳಕೆದಾರರ ಮೇಲೆ ಕಣ್ಗಾವಲಿಟ್ಟಿರುವುದಕ್ಕೆ ಸಂಬಂಧಿಸಿದಂತೆ ಯುಎಸ್‌ನ ನ್ಯಾಯಾಲಯ ನೀಡಿರುವ ತೀರ್ಪು, 2019ರಲ್ಲಿ 300 ಜನ ಭಾರತೀಯರ ವಾಟ್ಸಾಪ್ ಹ್ಯಾಕ್ ಮಾಡಿರುವುದನ್ನು ರುಜುವಾತು ಮಾಡಿದೆ. ಹಾಗಾಗಿ, ಈ ಕುರಿತು ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಪೆಗಾಸಸ್ ಸ್ಪೈವೇರ್ ಬಳಸಿಕೊಂಡು ಭಾರತದ ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು (ವಾಟ್ಸಾಪ್‌) ಹ್ಯಾಕ್ ಮಾಡಲಾಗಿದೆ ಎಂಬ ಆರೋಪ 2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು. ಸುಮಾರು 300 ಜನರ ಮೊಬೈಲ್ ಹ್ಯಾಕ್ ಮಾಡಿ ಸರ್ಕಾರ ಅವರ ಚಟುವಟಿಕೆ, ಚಲನವಲನಗಳ ಮೇಲೆ ಕಣ್ಣಿಟ್ಟಿದೆ ಎಂದು ಆರೋಪಿಸಲಾಗಿತ್ತು. ಆದರೆ, ಸರ್ಕಾರ ಅದನ್ನು ತಳ್ಳಿ ಹಾಕಿತ್ತು.

ಎಕ್ಸ್‌ ಪೋಸ್ಟ್ ಮೂಲಕ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು ” ಯುಎಸ್ ನ್ಯಾಯಾಲಯ ಪೆಗಾಸಸ್ ಕುರಿತು ತೀರ್ಪು ನೀಡಿರುವ ಹಿನ್ನೆಲೆ, 2019ರಲ್ಲಿ ಮೊಬೈಲ್ ಹ್ಯಾಕ್ ಮಾಡಿ ಕಣ್ಗಾವಲಿಟ್ಟಿದ್ದ 300 ಜನ ಭಾರತೀಯರ ಮಾಹಿತಿಯನ್ನು ಬಹಿರಂಗಪಡಿಸುವ ಸಮಯ ನರೇಂದ್ರ ಮೋದಿ ಸರ್ಕಾರಕ್ಕೆ ಬಂದಿದೆ” ಎಂದಿದ್ದಾರೆ.

“ಬಿಜೆಪಿ ಮತ್ತು ಸರ್ಕಾರದ ಸಂಸ್ಥೆಗಳು ಮೊಬೈಲ್ ಹ್ಯಾಕ್ ಮಾಡಿ ಯಾವೆಲ್ಲ ಮಾಹಿತಿಗಳನ್ನು ಪಡೆದುಕೊಂಡಿವೆ? ಅದನ್ನು ಹೇಗೆ ದುರುಪಯೋಗ ಮಾಡಿಕೊಳ್ಳಲಾಗಿದೆ? ಯಾವುದಕ್ಕೆಲ್ಲ ಬಳಸಲಾಗಿದೆ? “ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಬಿಜೆಪಿ ಸರ್ಕಾರದ ಪ್ರಮುಖರು, ಅಧಿಕಾರಿಗಳು ಮತ್ತು ಎನ್‌ಎಸ್‌ಒ ಗ್ರೂಪ್ ವಿರುದ್ಧ ಸೂಕ್ತ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬಹುದೇ? ಎಂದು ಸುರ್ಜೇವಾಲಾ ಕೇಳಿದ್ದಾರೆ.

ಯುಎಸ್ ಕೋರ್ಟ್ ಪೆಗಾಸಸ್ ಕುರಿತು ನೀಡಿರುವ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಿಸಿದೆಯಾ? ಪೆಗಾಸಸ್ ಬಳಸಿ ಹ್ಯಾಕ್ ಸಂಬಂಧ 2021-22ರಲ್ಲಿ ತಾಂತ್ರಿಕ ತಜ್ಞರ ಸಮಿತಿ ನೀಡಿದ ವರದಿಯನ್ನು ಬಹಿರಂಗಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಂದುವರಿಯುತ್ತದಾ? ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಭಾರತದ 300 ಸೇರಿದಂತೆ ಒಟ್ಟು 1,400 ವಾಟ್ಸಾಪ್ ಬಳಕೆದಾರರ ಮೇಲೆ ಪೆಗಾಸಸ್ ಬಳಸಿ ಕಣ್ಗಾವಲಿಟ್ಟ ಬಗ್ಗೆ ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಮುಂದಾಗಲಿದೆಯಾ? ಎಂದು ಸುರ್ಜೇವಾಲ ಕೇಳಿದ್ದಾರೆ.

ಇದನ್ನೂ ಓದಿ : ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...