Homeಮುಖಪುಟಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ...

ಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಬಳಕೆದಾರರ ಮೇಲೆ ಕಣ್ಗಾವಲಿಟ್ಟಿರುವುದಕ್ಕೆ ಸಂಬಂಧಿಸಿದಂತೆ ಯುಎಸ್‌ನ ನ್ಯಾಯಾಲಯ ನೀಡಿರುವ ತೀರ್ಪು, 2019ರಲ್ಲಿ 300 ಜನ ಭಾರತೀಯರ ವಾಟ್ಸಾಪ್ ಹ್ಯಾಕ್ ಮಾಡಿರುವುದನ್ನು ರುಜುವಾತು ಮಾಡಿದೆ. ಹಾಗಾಗಿ, ಈ ಕುರಿತು ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಪೆಗಾಸಸ್ ಸ್ಪೈವೇರ್ ಬಳಸಿಕೊಂಡು ಭಾರತದ ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು (ವಾಟ್ಸಾಪ್‌) ಹ್ಯಾಕ್ ಮಾಡಲಾಗಿದೆ ಎಂಬ ಆರೋಪ 2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು. ಸುಮಾರು 300 ಜನರ ಮೊಬೈಲ್ ಹ್ಯಾಕ್ ಮಾಡಿ ಸರ್ಕಾರ ಅವರ ಚಟುವಟಿಕೆ, ಚಲನವಲನಗಳ ಮೇಲೆ ಕಣ್ಣಿಟ್ಟಿದೆ ಎಂದು ಆರೋಪಿಸಲಾಗಿತ್ತು. ಆದರೆ, ಸರ್ಕಾರ ಅದನ್ನು ತಳ್ಳಿ ಹಾಕಿತ್ತು.

ಎಕ್ಸ್‌ ಪೋಸ್ಟ್ ಮೂಲಕ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು ” ಯುಎಸ್ ನ್ಯಾಯಾಲಯ ಪೆಗಾಸಸ್ ಕುರಿತು ತೀರ್ಪು ನೀಡಿರುವ ಹಿನ್ನೆಲೆ, 2019ರಲ್ಲಿ ಮೊಬೈಲ್ ಹ್ಯಾಕ್ ಮಾಡಿ ಕಣ್ಗಾವಲಿಟ್ಟಿದ್ದ 300 ಜನ ಭಾರತೀಯರ ಮಾಹಿತಿಯನ್ನು ಬಹಿರಂಗಪಡಿಸುವ ಸಮಯ ನರೇಂದ್ರ ಮೋದಿ ಸರ್ಕಾರಕ್ಕೆ ಬಂದಿದೆ” ಎಂದಿದ್ದಾರೆ.

“ಬಿಜೆಪಿ ಮತ್ತು ಸರ್ಕಾರದ ಸಂಸ್ಥೆಗಳು ಮೊಬೈಲ್ ಹ್ಯಾಕ್ ಮಾಡಿ ಯಾವೆಲ್ಲ ಮಾಹಿತಿಗಳನ್ನು ಪಡೆದುಕೊಂಡಿವೆ? ಅದನ್ನು ಹೇಗೆ ದುರುಪಯೋಗ ಮಾಡಿಕೊಳ್ಳಲಾಗಿದೆ? ಯಾವುದಕ್ಕೆಲ್ಲ ಬಳಸಲಾಗಿದೆ? “ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಬಿಜೆಪಿ ಸರ್ಕಾರದ ಪ್ರಮುಖರು, ಅಧಿಕಾರಿಗಳು ಮತ್ತು ಎನ್‌ಎಸ್‌ಒ ಗ್ರೂಪ್ ವಿರುದ್ಧ ಸೂಕ್ತ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬಹುದೇ? ಎಂದು ಸುರ್ಜೇವಾಲಾ ಕೇಳಿದ್ದಾರೆ.

ಯುಎಸ್ ಕೋರ್ಟ್ ಪೆಗಾಸಸ್ ಕುರಿತು ನೀಡಿರುವ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಿಸಿದೆಯಾ? ಪೆಗಾಸಸ್ ಬಳಸಿ ಹ್ಯಾಕ್ ಸಂಬಂಧ 2021-22ರಲ್ಲಿ ತಾಂತ್ರಿಕ ತಜ್ಞರ ಸಮಿತಿ ನೀಡಿದ ವರದಿಯನ್ನು ಬಹಿರಂಗಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಂದುವರಿಯುತ್ತದಾ? ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಭಾರತದ 300 ಸೇರಿದಂತೆ ಒಟ್ಟು 1,400 ವಾಟ್ಸಾಪ್ ಬಳಕೆದಾರರ ಮೇಲೆ ಪೆಗಾಸಸ್ ಬಳಸಿ ಕಣ್ಗಾವಲಿಟ್ಟ ಬಗ್ಗೆ ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಮುಂದಾಗಲಿದೆಯಾ? ಎಂದು ಸುರ್ಜೇವಾಲ ಕೇಳಿದ್ದಾರೆ.

ಇದನ್ನೂ ಓದಿ : ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...