Homeಮುಖಪುಟಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ...

ಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಬಳಕೆದಾರರ ಮೇಲೆ ಕಣ್ಗಾವಲಿಟ್ಟಿರುವುದಕ್ಕೆ ಸಂಬಂಧಿಸಿದಂತೆ ಯುಎಸ್‌ನ ನ್ಯಾಯಾಲಯ ನೀಡಿರುವ ತೀರ್ಪು, 2019ರಲ್ಲಿ 300 ಜನ ಭಾರತೀಯರ ವಾಟ್ಸಾಪ್ ಹ್ಯಾಕ್ ಮಾಡಿರುವುದನ್ನು ರುಜುವಾತು ಮಾಡಿದೆ. ಹಾಗಾಗಿ, ಈ ಕುರಿತು ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಪೆಗಾಸಸ್ ಸ್ಪೈವೇರ್ ಬಳಸಿಕೊಂಡು ಭಾರತದ ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು (ವಾಟ್ಸಾಪ್‌) ಹ್ಯಾಕ್ ಮಾಡಲಾಗಿದೆ ಎಂಬ ಆರೋಪ 2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು. ಸುಮಾರು 300 ಜನರ ಮೊಬೈಲ್ ಹ್ಯಾಕ್ ಮಾಡಿ ಸರ್ಕಾರ ಅವರ ಚಟುವಟಿಕೆ, ಚಲನವಲನಗಳ ಮೇಲೆ ಕಣ್ಣಿಟ್ಟಿದೆ ಎಂದು ಆರೋಪಿಸಲಾಗಿತ್ತು. ಆದರೆ, ಸರ್ಕಾರ ಅದನ್ನು ತಳ್ಳಿ ಹಾಕಿತ್ತು.

ಎಕ್ಸ್‌ ಪೋಸ್ಟ್ ಮೂಲಕ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು ” ಯುಎಸ್ ನ್ಯಾಯಾಲಯ ಪೆಗಾಸಸ್ ಕುರಿತು ತೀರ್ಪು ನೀಡಿರುವ ಹಿನ್ನೆಲೆ, 2019ರಲ್ಲಿ ಮೊಬೈಲ್ ಹ್ಯಾಕ್ ಮಾಡಿ ಕಣ್ಗಾವಲಿಟ್ಟಿದ್ದ 300 ಜನ ಭಾರತೀಯರ ಮಾಹಿತಿಯನ್ನು ಬಹಿರಂಗಪಡಿಸುವ ಸಮಯ ನರೇಂದ್ರ ಮೋದಿ ಸರ್ಕಾರಕ್ಕೆ ಬಂದಿದೆ” ಎಂದಿದ್ದಾರೆ.

“ಬಿಜೆಪಿ ಮತ್ತು ಸರ್ಕಾರದ ಸಂಸ್ಥೆಗಳು ಮೊಬೈಲ್ ಹ್ಯಾಕ್ ಮಾಡಿ ಯಾವೆಲ್ಲ ಮಾಹಿತಿಗಳನ್ನು ಪಡೆದುಕೊಂಡಿವೆ? ಅದನ್ನು ಹೇಗೆ ದುರುಪಯೋಗ ಮಾಡಿಕೊಳ್ಳಲಾಗಿದೆ? ಯಾವುದಕ್ಕೆಲ್ಲ ಬಳಸಲಾಗಿದೆ? “ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಬಿಜೆಪಿ ಸರ್ಕಾರದ ಪ್ರಮುಖರು, ಅಧಿಕಾರಿಗಳು ಮತ್ತು ಎನ್‌ಎಸ್‌ಒ ಗ್ರೂಪ್ ವಿರುದ್ಧ ಸೂಕ್ತ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬಹುದೇ? ಎಂದು ಸುರ್ಜೇವಾಲಾ ಕೇಳಿದ್ದಾರೆ.

ಯುಎಸ್ ಕೋರ್ಟ್ ಪೆಗಾಸಸ್ ಕುರಿತು ನೀಡಿರುವ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಿಸಿದೆಯಾ? ಪೆಗಾಸಸ್ ಬಳಸಿ ಹ್ಯಾಕ್ ಸಂಬಂಧ 2021-22ರಲ್ಲಿ ತಾಂತ್ರಿಕ ತಜ್ಞರ ಸಮಿತಿ ನೀಡಿದ ವರದಿಯನ್ನು ಬಹಿರಂಗಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಂದುವರಿಯುತ್ತದಾ? ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಭಾರತದ 300 ಸೇರಿದಂತೆ ಒಟ್ಟು 1,400 ವಾಟ್ಸಾಪ್ ಬಳಕೆದಾರರ ಮೇಲೆ ಪೆಗಾಸಸ್ ಬಳಸಿ ಕಣ್ಗಾವಲಿಟ್ಟ ಬಗ್ಗೆ ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಮುಂದಾಗಲಿದೆಯಾ? ಎಂದು ಸುರ್ಜೇವಾಲ ಕೇಳಿದ್ದಾರೆ.

ಇದನ್ನೂ ಓದಿ : ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....