Homeಮುಖಪುಟಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ...

ಪೆಗಾಸಸ್ ದಾಳಿ ಕುರಿತು ಯುಎಸ್ ಕೋರ್ಟ್ ತೀರ್ಪು : ಭಾರತದ ಹ್ಯಾಕಿಂಗ್ ಬಗ್ಗೆ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಬಳಕೆದಾರರ ಮೇಲೆ ಕಣ್ಗಾವಲಿಟ್ಟಿರುವುದಕ್ಕೆ ಸಂಬಂಧಿಸಿದಂತೆ ಯುಎಸ್‌ನ ನ್ಯಾಯಾಲಯ ನೀಡಿರುವ ತೀರ್ಪು, 2019ರಲ್ಲಿ 300 ಜನ ಭಾರತೀಯರ ವಾಟ್ಸಾಪ್ ಹ್ಯಾಕ್ ಮಾಡಿರುವುದನ್ನು ರುಜುವಾತು ಮಾಡಿದೆ. ಹಾಗಾಗಿ, ಈ ಕುರಿತು ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ.

ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು ಬಳಸಲಾಗಿದೆ ಎಂದು ವಾಟ್ಸಾಪ್ ಆರೋಪಿಸಿದೆ.

ಪೆಗಾಸಸ್ ಸ್ಪೈವೇರ್ ಬಳಸಿಕೊಂಡು ಭಾರತದ ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಸೇರಿದಂತೆ ಸರ್ಕಾರದ ವಿರುದ್ದ ಇರುವವರ ಮೊಬೈಲ್ ಫೋನ್‌ಗಳನ್ನು (ವಾಟ್ಸಾಪ್‌) ಹ್ಯಾಕ್ ಮಾಡಲಾಗಿದೆ ಎಂಬ ಆರೋಪ 2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕೇಳಿ ಬಂದಿತ್ತು. ಸುಮಾರು 300 ಜನರ ಮೊಬೈಲ್ ಹ್ಯಾಕ್ ಮಾಡಿ ಸರ್ಕಾರ ಅವರ ಚಟುವಟಿಕೆ, ಚಲನವಲನಗಳ ಮೇಲೆ ಕಣ್ಣಿಟ್ಟಿದೆ ಎಂದು ಆರೋಪಿಸಲಾಗಿತ್ತು. ಆದರೆ, ಸರ್ಕಾರ ಅದನ್ನು ತಳ್ಳಿ ಹಾಕಿತ್ತು.

ಎಕ್ಸ್‌ ಪೋಸ್ಟ್ ಮೂಲಕ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರು ” ಯುಎಸ್ ನ್ಯಾಯಾಲಯ ಪೆಗಾಸಸ್ ಕುರಿತು ತೀರ್ಪು ನೀಡಿರುವ ಹಿನ್ನೆಲೆ, 2019ರಲ್ಲಿ ಮೊಬೈಲ್ ಹ್ಯಾಕ್ ಮಾಡಿ ಕಣ್ಗಾವಲಿಟ್ಟಿದ್ದ 300 ಜನ ಭಾರತೀಯರ ಮಾಹಿತಿಯನ್ನು ಬಹಿರಂಗಪಡಿಸುವ ಸಮಯ ನರೇಂದ್ರ ಮೋದಿ ಸರ್ಕಾರಕ್ಕೆ ಬಂದಿದೆ” ಎಂದಿದ್ದಾರೆ.

“ಬಿಜೆಪಿ ಮತ್ತು ಸರ್ಕಾರದ ಸಂಸ್ಥೆಗಳು ಮೊಬೈಲ್ ಹ್ಯಾಕ್ ಮಾಡಿ ಯಾವೆಲ್ಲ ಮಾಹಿತಿಗಳನ್ನು ಪಡೆದುಕೊಂಡಿವೆ? ಅದನ್ನು ಹೇಗೆ ದುರುಪಯೋಗ ಮಾಡಿಕೊಳ್ಳಲಾಗಿದೆ? ಯಾವುದಕ್ಕೆಲ್ಲ ಬಳಸಲಾಗಿದೆ? “ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಈ ದುಷ್ಕೃತ್ಯದಲ್ಲಿ ಭಾಗಿಯಾಗಿರುವ ಬಿಜೆಪಿ ಸರ್ಕಾರದ ಪ್ರಮುಖರು, ಅಧಿಕಾರಿಗಳು ಮತ್ತು ಎನ್‌ಎಸ್‌ಒ ಗ್ರೂಪ್ ವಿರುದ್ಧ ಸೂಕ್ತ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬಹುದೇ? ಎಂದು ಸುರ್ಜೇವಾಲಾ ಕೇಳಿದ್ದಾರೆ.

ಯುಎಸ್ ಕೋರ್ಟ್ ಪೆಗಾಸಸ್ ಕುರಿತು ನೀಡಿರುವ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಿಸಿದೆಯಾ? ಪೆಗಾಸಸ್ ಬಳಸಿ ಹ್ಯಾಕ್ ಸಂಬಂಧ 2021-22ರಲ್ಲಿ ತಾಂತ್ರಿಕ ತಜ್ಞರ ಸಮಿತಿ ನೀಡಿದ ವರದಿಯನ್ನು ಬಹಿರಂಗಗೊಳಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಂದುವರಿಯುತ್ತದಾ? ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

ಭಾರತದ 300 ಸೇರಿದಂತೆ ಒಟ್ಟು 1,400 ವಾಟ್ಸಾಪ್ ಬಳಕೆದಾರರ ಮೇಲೆ ಪೆಗಾಸಸ್ ಬಳಸಿ ಕಣ್ಗಾವಲಿಟ್ಟ ಬಗ್ಗೆ ಹೆಚ್ಚಿನ ತನಿಖೆಗೆ ಸುಪ್ರೀಂ ಕೋರ್ಟ್ ಮುಂದಾಗಲಿದೆಯಾ? ಎಂದು ಸುರ್ಜೇವಾಲ ಕೇಳಿದ್ದಾರೆ.

ಇದನ್ನೂ ಓದಿ : ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...