Homeಮುಖಪುಟಇಂದೋರ್: ನೋಟಾ ಮತ ಚಲಾಯಿಸುವಂತೆ ಕಾಂಗ್ರೆಸ್‌ ಆಗ್ರಹ

ಇಂದೋರ್: ನೋಟಾ ಮತ ಚಲಾಯಿಸುವಂತೆ ಕಾಂಗ್ರೆಸ್‌ ಆಗ್ರಹ

- Advertisement -
- Advertisement -

ಇಂದೋರ್ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆದು ಬಿಜೆಪಿಗೆ ಸೇರ್ಪಡೆಗೊಂಡ  ಹಿನ್ನೆಲೆ ಬಿಜೆಪಿಗೆ ತಕ್ಕ ಪಾಠ ಕಲಿಸಲು ಮತದಾರರಿಗೆ ನೋಟಾ ಬಟನ್ ಒತ್ತುವಂತೆ ಕಾಂಗ್ರೆಸ್‌ ಆಗ್ರಹಿಸಿದೆ.

ಅಕ್ಷಯ್ ಕಾಂತಿ ಬಾಮ್ ಇಂದೋರ್ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಟಿಕೆಟ್ ಗಳಿಸಿದ್ದರು, ಆದರೆ ಕೆಲವು ಹಳೆಯ ಪ್ರಕರಣಗಳಲ್ಲಿ ಪೋಲೀಸರು ಸಮನ್ಸ್ ನೀಡಿದ್ದಾರೆಂದು ತಮ್ಮ ನಾಮಪತ್ರವನ್ನು ಅವರು  ಹಿಂತೆಗೆದುಕೊಂಡಿದ್ದರು. ಆ ಬಳಿಕ ಬಿಜೆಪಿಯ ಹಿರಿಯ ನಾಯಕರು ಮತ್ತು ಮಧ್ಯಪ್ರದೇಶ ಸಂಪುಟ ಸಚಿವರ ಸಮ್ಮುಖದಲ್ಲಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಈ ಬೆಳವಣಿಗೆಗಳು ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಶಂಕರ್ ಲಾಲ್ವಾನಿ ಅವರಿಗೆ ಚುನಾವಣೆಯಲ್ಲಿ ಗೆಲುವನ್ನು ಸುಲಭವಾಗಿಸಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಬದಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಹೈಕೋರ್ಟ್ ಈ ಕುರಿತ ಮನವಿಯನ್ನು ತಿರಸ್ಕರಿಸಿದ ನಂತರ ‘ಕಾಂಗ್ರೆಸ್’ ನೋಟಾ ಬಟನ್ ಒತ್ತಿ ಮತ್ತು ಪ್ರಜಾಪ್ರಭುತ್ವವನ್ನು ಕೊಂದ ಬಿಜೆಪಿಗೆ ತಕ್ಕ ಪಾಠವನ್ನು ಕಲಿಸುವಂತೆ ಆಗ್ರಹಿಸಿದೆ.

ಕಳೆದ ಮುನ್ಸಿಪಲ್ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಇಂದೋರ್‌ನ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಹೀಗಿದ್ದರೂ, ಬಿಜೆಪಿಯು ಅನ್ಯಾಯವಾಗಿ ಆಮಿಷವೊಡ್ಡುವ ಮೂಲಕ ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದೆ. ಮತದಾರರು ನೋಟಾ ಆಯ್ಕೆಯನ್ನು ಆರಿಸುವ ಮೂಲಕ ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕಿ ಶೋಭಾ ಓಜಾ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ಸಜ್ಜನ್ ವರ್ಮಾ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಇಂದೋರ್ ಜನತೆಯಲ್ಲಿ ನಾನು ಮನವಿ ಮಾಡುತ್ತೇನೆ. ನಿಮ್ಮ ಮತದಾನದ ಹಕ್ಕನ್ನು ಕಸಿದುಕೊಂಡಿರುವ ಕೆಲವರು ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಕಳ್ಳತನ ಮಾಡಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಬೇಕಾದರೆ ನೋಟಾ ಬಟನ್ ಒತ್ತಿ ಪ್ರಜಾಪ್ರಭುತ್ವ ಉಳಿಸಿ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ನಾಲ್ಕನೇ ಹಂತದ ಮತದಾನ ಮೇ.13ರಂದು ನಡೆಯಲಿದ್ದು, 2013ರಲ್ಲಿ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ನಂತರ ಭಾರತೀಯ ಮತದಾರರಿಗೆ ಪರ್ಯಾಯ ಆಯ್ಕೆಯಾಗಿ ನೋಟಾ ಆಯ್ಕೆಗಳನ್ನು ಸೇರಿಸಲಾಯಿತು. ಚುನಾವಣಾ ಕಣದಲ್ಲಿ ನಿಂತಿರುವ ಎಲ್ಲಾ ಅಭ್ಯರ್ಥಿಗಳೊಂದಿಗೆ ಮತದಾರರು ಅಸಮ್ಮತಿಯನ್ನು ದಾಖಲಿಸಲು ನೋಟಾ ಬಟನ್‌ ಮೂಲಕ ಅವಕಾಶವನ್ನು ನೀಡಲಾಗಿದೆ.

ಇದನ್ನು ಓದಿ: ಎನ್‌ಡಿಎ ಪ್ರಚಾರ ಸಭೆಗೆ 500ರೂ. ಹಣದ ಆಮಿಷ ನೀಡಿ ಕರೆದುಕೊಂಡು ಬಂದು ವಂಚನೆ: ಮಹಿಳೆಯರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...