Homeಮುಖಪುಟಇಂದೋರ್: ನೋಟಾ ಮತ ಚಲಾಯಿಸುವಂತೆ ಕಾಂಗ್ರೆಸ್‌ ಆಗ್ರಹ

ಇಂದೋರ್: ನೋಟಾ ಮತ ಚಲಾಯಿಸುವಂತೆ ಕಾಂಗ್ರೆಸ್‌ ಆಗ್ರಹ

- Advertisement -
- Advertisement -

ಇಂದೋರ್ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರವನ್ನು ಹಿಂಪಡೆದು ಬಿಜೆಪಿಗೆ ಸೇರ್ಪಡೆಗೊಂಡ  ಹಿನ್ನೆಲೆ ಬಿಜೆಪಿಗೆ ತಕ್ಕ ಪಾಠ ಕಲಿಸಲು ಮತದಾರರಿಗೆ ನೋಟಾ ಬಟನ್ ಒತ್ತುವಂತೆ ಕಾಂಗ್ರೆಸ್‌ ಆಗ್ರಹಿಸಿದೆ.

ಅಕ್ಷಯ್ ಕಾಂತಿ ಬಾಮ್ ಇಂದೋರ್ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಟಿಕೆಟ್ ಗಳಿಸಿದ್ದರು, ಆದರೆ ಕೆಲವು ಹಳೆಯ ಪ್ರಕರಣಗಳಲ್ಲಿ ಪೋಲೀಸರು ಸಮನ್ಸ್ ನೀಡಿದ್ದಾರೆಂದು ತಮ್ಮ ನಾಮಪತ್ರವನ್ನು ಅವರು  ಹಿಂತೆಗೆದುಕೊಂಡಿದ್ದರು. ಆ ಬಳಿಕ ಬಿಜೆಪಿಯ ಹಿರಿಯ ನಾಯಕರು ಮತ್ತು ಮಧ್ಯಪ್ರದೇಶ ಸಂಪುಟ ಸಚಿವರ ಸಮ್ಮುಖದಲ್ಲಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಈ ಬೆಳವಣಿಗೆಗಳು ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಶಂಕರ್ ಲಾಲ್ವಾನಿ ಅವರಿಗೆ ಚುನಾವಣೆಯಲ್ಲಿ ಗೆಲುವನ್ನು ಸುಲಭವಾಗಿಸಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಬದಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಹೈಕೋರ್ಟ್ ಈ ಕುರಿತ ಮನವಿಯನ್ನು ತಿರಸ್ಕರಿಸಿದ ನಂತರ ‘ಕಾಂಗ್ರೆಸ್’ ನೋಟಾ ಬಟನ್ ಒತ್ತಿ ಮತ್ತು ಪ್ರಜಾಪ್ರಭುತ್ವವನ್ನು ಕೊಂದ ಬಿಜೆಪಿಗೆ ತಕ್ಕ ಪಾಠವನ್ನು ಕಲಿಸುವಂತೆ ಆಗ್ರಹಿಸಿದೆ.

ಕಳೆದ ಮುನ್ಸಿಪಲ್ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಇಂದೋರ್‌ನ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಹೀಗಿದ್ದರೂ, ಬಿಜೆಪಿಯು ಅನ್ಯಾಯವಾಗಿ ಆಮಿಷವೊಡ್ಡುವ ಮೂಲಕ ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದೆ. ಮತದಾರರು ನೋಟಾ ಆಯ್ಕೆಯನ್ನು ಆರಿಸುವ ಮೂಲಕ ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕಿ ಶೋಭಾ ಓಜಾ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ಸಜ್ಜನ್ ವರ್ಮಾ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಇಂದೋರ್ ಜನತೆಯಲ್ಲಿ ನಾನು ಮನವಿ ಮಾಡುತ್ತೇನೆ. ನಿಮ್ಮ ಮತದಾನದ ಹಕ್ಕನ್ನು ಕಸಿದುಕೊಂಡಿರುವ ಕೆಲವರು ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಕಳ್ಳತನ ಮಾಡಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಬೇಕಾದರೆ ನೋಟಾ ಬಟನ್ ಒತ್ತಿ ಪ್ರಜಾಪ್ರಭುತ್ವ ಉಳಿಸಿ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ನಾಲ್ಕನೇ ಹಂತದ ಮತದಾನ ಮೇ.13ರಂದು ನಡೆಯಲಿದ್ದು, 2013ರಲ್ಲಿ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ನಂತರ ಭಾರತೀಯ ಮತದಾರರಿಗೆ ಪರ್ಯಾಯ ಆಯ್ಕೆಯಾಗಿ ನೋಟಾ ಆಯ್ಕೆಗಳನ್ನು ಸೇರಿಸಲಾಯಿತು. ಚುನಾವಣಾ ಕಣದಲ್ಲಿ ನಿಂತಿರುವ ಎಲ್ಲಾ ಅಭ್ಯರ್ಥಿಗಳೊಂದಿಗೆ ಮತದಾರರು ಅಸಮ್ಮತಿಯನ್ನು ದಾಖಲಿಸಲು ನೋಟಾ ಬಟನ್‌ ಮೂಲಕ ಅವಕಾಶವನ್ನು ನೀಡಲಾಗಿದೆ.

ಇದನ್ನು ಓದಿ: ಎನ್‌ಡಿಎ ಪ್ರಚಾರ ಸಭೆಗೆ 500ರೂ. ಹಣದ ಆಮಿಷ ನೀಡಿ ಕರೆದುಕೊಂಡು ಬಂದು ವಂಚನೆ: ಮಹಿಳೆಯರ ಆರೋಪ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...