Homeಮುಖಪುಟಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಪಕ್ಷದ ಉನ್ನತ ಮಟ್ಟದ ನಾಯಕರೊಂದಿಗೆ ನಿರ್ಣಾಯಕ ಸಭೆ ಆರಂಭಿಸುತ್ತಿದ್ದಂತೆಯೇ ಇತ್ತ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯುಐನ ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗ ವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆ ಬೆನ್ನಲ್ಲೇ ಎನ್ಎಸ್‌‌ಯುಐನ ರಾಷ್ಟ್ರೀಯ ಉಸ್ತುವಾರಿ ಮತ್ತು ರಾಹುಲ್ ಗಾಂಧಿ ಬಳಗದಲ್ಲಿ ಗುರುತಿಸಿ ಕೊಂಡಿದ್ದ ರುಚಿಗುಪ್ತ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕೆ.ಸಿ.ವೇಣುಗೋಪಾಲ್ ರಾಜ್ಯ ಘಟಕಗಳನ್ನು ಮರುಸಂಘಟಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುತ್ತಿದ್ದಾರೆ…ಸಂಘಟನೆಯಲ್ಲಿ ಹೊಸ ನಾಯಕತ್ವವನ್ನು ತರಲು ಯತ್ನಿಸಿದರೆ ಅದಕ್ಕೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಎನ್ಎಸ್‌ಯುಐ ಪದಾಧಿಕಾರಿಗಳುಳ್ಳ ವಾಟ್ಸಪ್ ಗುಂಪಿನೊಂದಿಗೆ ಮಾಹಿತಿ ಹಂಚಿಕೊಂಡಿರುವ ರುಚಿಗುಪ್ತ, “ನಾನು ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಲು ಬರೆಯುತ್ತಿದ್ದೇನೆ. ನಿಮಗೆ ತಿಳಿದಿರುವಂತೆ ಪ್ರಮುಖ ಸಾಂಸ್ಥಿಕ ಬದಲಾವಣೆಗಳು ಬಹಳ ಕಾಲದಿಂದಲೂ ಬಾಕಿ ಉಳಿದಿವೆ. ರಾಷ್ಟ್ರೀಯ ಸಮಿತಿ ಒಂದು ವರ್ಷ ಮತ್ತು ಮೂರು ತಿಂಗಳು ತೆಗೆದುಕೊಂಡಿತು. ರಾಜ್ಯ ಅಧ್ಯಕ್ಷರ ಆದೇಶಗಳು ತಿಂಗಳುಗಳಿಂದ ಬಾಕಿ ಉಳಿದಿವೆ. ಹೊಸ ಕಾರ್ಯಕರ್ತರಿಗೆ ಸ್ಥಳಾವಕಾಶ ಕಲ್ಪಿಸಲು ಮರುಸಂಘಟನೆಗಾಗಿ ಇನ್ನೂ ಅನೇಕ ರಾಜ್ಯ ಘಟಕಗಳು ಕಾಯುತ್ತಿವೆ. ಈ ನಿರಂತರ ವಿಳಂಬಗಳು ಸಂಸ್ಥೆಯನ್ನು ಹಾನಿಗೊಳಿಸುತ್ತಿವೆ ಆದರೆ ಪ್ರಸ್ತುತ ಸಂದರ್ಭಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಪದೇ ಪದೇ ಹೇಳಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿ ಒಪ್ಪಲಾಗದು” ಎಂದು ಅವರು ಬರೆದಿದ್ದಾರೆ.

ಈ ವಾಟ್ಸಪ್ ಗುಂಪಿನ ಬಹುತೇಕ ನಾಯಕರು ಸೋನಿಯಾ ಗಾಂಧಿಗೆ ಹತ್ತಿರದವರೆಂದು ಪರಿಗಣಿಸಲ್ಪಟ್ಟಿರುವ ವೇಣುಗೋಪಾಲ್ ಅವರೊಂದಿಗೆ ಅಸಮಾಧಾನ ಹೊಂದಿದ್ದರು. ವೇಣುಗೋಪಾಲ್ ಎನ್‌ಎಸ್‌ಯುಐಗೆ ಸಂಬಂಧಿಸಿದ ಸಾಂಸ್ಥಿಕ ನೇಮಕಾತಿಗಳನ್ನು ದೀರ್ಘಕಾಲದಿಂದ ತಡೆಹಿಡಿದಿದ್ದಾರೆ ಎಂದು ಎನ್‌ಎಸ್‌ಯುಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...