Homeಮುಖಪುಟಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಪಕ್ಷದ ಉನ್ನತ ಮಟ್ಟದ ನಾಯಕರೊಂದಿಗೆ ನಿರ್ಣಾಯಕ ಸಭೆ ಆರಂಭಿಸುತ್ತಿದ್ದಂತೆಯೇ ಇತ್ತ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯುಐನ ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗ ವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆ ಬೆನ್ನಲ್ಲೇ ಎನ್ಎಸ್‌‌ಯುಐನ ರಾಷ್ಟ್ರೀಯ ಉಸ್ತುವಾರಿ ಮತ್ತು ರಾಹುಲ್ ಗಾಂಧಿ ಬಳಗದಲ್ಲಿ ಗುರುತಿಸಿ ಕೊಂಡಿದ್ದ ರುಚಿಗುಪ್ತ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕೆ.ಸಿ.ವೇಣುಗೋಪಾಲ್ ರಾಜ್ಯ ಘಟಕಗಳನ್ನು ಮರುಸಂಘಟಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುತ್ತಿದ್ದಾರೆ…ಸಂಘಟನೆಯಲ್ಲಿ ಹೊಸ ನಾಯಕತ್ವವನ್ನು ತರಲು ಯತ್ನಿಸಿದರೆ ಅದಕ್ಕೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಎನ್ಎಸ್‌ಯುಐ ಪದಾಧಿಕಾರಿಗಳುಳ್ಳ ವಾಟ್ಸಪ್ ಗುಂಪಿನೊಂದಿಗೆ ಮಾಹಿತಿ ಹಂಚಿಕೊಂಡಿರುವ ರುಚಿಗುಪ್ತ, “ನಾನು ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಲು ಬರೆಯುತ್ತಿದ್ದೇನೆ. ನಿಮಗೆ ತಿಳಿದಿರುವಂತೆ ಪ್ರಮುಖ ಸಾಂಸ್ಥಿಕ ಬದಲಾವಣೆಗಳು ಬಹಳ ಕಾಲದಿಂದಲೂ ಬಾಕಿ ಉಳಿದಿವೆ. ರಾಷ್ಟ್ರೀಯ ಸಮಿತಿ ಒಂದು ವರ್ಷ ಮತ್ತು ಮೂರು ತಿಂಗಳು ತೆಗೆದುಕೊಂಡಿತು. ರಾಜ್ಯ ಅಧ್ಯಕ್ಷರ ಆದೇಶಗಳು ತಿಂಗಳುಗಳಿಂದ ಬಾಕಿ ಉಳಿದಿವೆ. ಹೊಸ ಕಾರ್ಯಕರ್ತರಿಗೆ ಸ್ಥಳಾವಕಾಶ ಕಲ್ಪಿಸಲು ಮರುಸಂಘಟನೆಗಾಗಿ ಇನ್ನೂ ಅನೇಕ ರಾಜ್ಯ ಘಟಕಗಳು ಕಾಯುತ್ತಿವೆ. ಈ ನಿರಂತರ ವಿಳಂಬಗಳು ಸಂಸ್ಥೆಯನ್ನು ಹಾನಿಗೊಳಿಸುತ್ತಿವೆ ಆದರೆ ಪ್ರಸ್ತುತ ಸಂದರ್ಭಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಪದೇ ಪದೇ ಹೇಳಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿ ಒಪ್ಪಲಾಗದು” ಎಂದು ಅವರು ಬರೆದಿದ್ದಾರೆ.

ಈ ವಾಟ್ಸಪ್ ಗುಂಪಿನ ಬಹುತೇಕ ನಾಯಕರು ಸೋನಿಯಾ ಗಾಂಧಿಗೆ ಹತ್ತಿರದವರೆಂದು ಪರಿಗಣಿಸಲ್ಪಟ್ಟಿರುವ ವೇಣುಗೋಪಾಲ್ ಅವರೊಂದಿಗೆ ಅಸಮಾಧಾನ ಹೊಂದಿದ್ದರು. ವೇಣುಗೋಪಾಲ್ ಎನ್‌ಎಸ್‌ಯುಐಗೆ ಸಂಬಂಧಿಸಿದ ಸಾಂಸ್ಥಿಕ ನೇಮಕಾತಿಗಳನ್ನು ದೀರ್ಘಕಾಲದಿಂದ ತಡೆಹಿಡಿದಿದ್ದಾರೆ ಎಂದು ಎನ್‌ಎಸ್‌ಯುಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...