Homeಮುಖಪುಟಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಪಕ್ಷದ ಉನ್ನತ ಮಟ್ಟದ ನಾಯಕರೊಂದಿಗೆ ನಿರ್ಣಾಯಕ ಸಭೆ ಆರಂಭಿಸುತ್ತಿದ್ದಂತೆಯೇ ಇತ್ತ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯುಐನ ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗ ವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆ ಬೆನ್ನಲ್ಲೇ ಎನ್ಎಸ್‌‌ಯುಐನ ರಾಷ್ಟ್ರೀಯ ಉಸ್ತುವಾರಿ ಮತ್ತು ರಾಹುಲ್ ಗಾಂಧಿ ಬಳಗದಲ್ಲಿ ಗುರುತಿಸಿ ಕೊಂಡಿದ್ದ ರುಚಿಗುಪ್ತ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕೆ.ಸಿ.ವೇಣುಗೋಪಾಲ್ ರಾಜ್ಯ ಘಟಕಗಳನ್ನು ಮರುಸಂಘಟಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುತ್ತಿದ್ದಾರೆ…ಸಂಘಟನೆಯಲ್ಲಿ ಹೊಸ ನಾಯಕತ್ವವನ್ನು ತರಲು ಯತ್ನಿಸಿದರೆ ಅದಕ್ಕೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಎನ್ಎಸ್‌ಯುಐ ಪದಾಧಿಕಾರಿಗಳುಳ್ಳ ವಾಟ್ಸಪ್ ಗುಂಪಿನೊಂದಿಗೆ ಮಾಹಿತಿ ಹಂಚಿಕೊಂಡಿರುವ ರುಚಿಗುಪ್ತ, “ನಾನು ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಲು ಬರೆಯುತ್ತಿದ್ದೇನೆ. ನಿಮಗೆ ತಿಳಿದಿರುವಂತೆ ಪ್ರಮುಖ ಸಾಂಸ್ಥಿಕ ಬದಲಾವಣೆಗಳು ಬಹಳ ಕಾಲದಿಂದಲೂ ಬಾಕಿ ಉಳಿದಿವೆ. ರಾಷ್ಟ್ರೀಯ ಸಮಿತಿ ಒಂದು ವರ್ಷ ಮತ್ತು ಮೂರು ತಿಂಗಳು ತೆಗೆದುಕೊಂಡಿತು. ರಾಜ್ಯ ಅಧ್ಯಕ್ಷರ ಆದೇಶಗಳು ತಿಂಗಳುಗಳಿಂದ ಬಾಕಿ ಉಳಿದಿವೆ. ಹೊಸ ಕಾರ್ಯಕರ್ತರಿಗೆ ಸ್ಥಳಾವಕಾಶ ಕಲ್ಪಿಸಲು ಮರುಸಂಘಟನೆಗಾಗಿ ಇನ್ನೂ ಅನೇಕ ರಾಜ್ಯ ಘಟಕಗಳು ಕಾಯುತ್ತಿವೆ. ಈ ನಿರಂತರ ವಿಳಂಬಗಳು ಸಂಸ್ಥೆಯನ್ನು ಹಾನಿಗೊಳಿಸುತ್ತಿವೆ ಆದರೆ ಪ್ರಸ್ತುತ ಸಂದರ್ಭಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಪದೇ ಪದೇ ಹೇಳಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿ ಒಪ್ಪಲಾಗದು” ಎಂದು ಅವರು ಬರೆದಿದ್ದಾರೆ.

ಈ ವಾಟ್ಸಪ್ ಗುಂಪಿನ ಬಹುತೇಕ ನಾಯಕರು ಸೋನಿಯಾ ಗಾಂಧಿಗೆ ಹತ್ತಿರದವರೆಂದು ಪರಿಗಣಿಸಲ್ಪಟ್ಟಿರುವ ವೇಣುಗೋಪಾಲ್ ಅವರೊಂದಿಗೆ ಅಸಮಾಧಾನ ಹೊಂದಿದ್ದರು. ವೇಣುಗೋಪಾಲ್ ಎನ್‌ಎಸ್‌ಯುಐಗೆ ಸಂಬಂಧಿಸಿದ ಸಾಂಸ್ಥಿಕ ನೇಮಕಾತಿಗಳನ್ನು ದೀರ್ಘಕಾಲದಿಂದ ತಡೆಹಿಡಿದಿದ್ದಾರೆ ಎಂದು ಎನ್‌ಎಸ್‌ಯುಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...