Homeಮುಖಪುಟಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಪಕ್ಷದ ಉನ್ನತ ಮಟ್ಟದ ನಾಯಕರೊಂದಿಗೆ ನಿರ್ಣಾಯಕ ಸಭೆ ಆರಂಭಿಸುತ್ತಿದ್ದಂತೆಯೇ ಇತ್ತ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯುಐನ ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗ ವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆ ಬೆನ್ನಲ್ಲೇ ಎನ್ಎಸ್‌‌ಯುಐನ ರಾಷ್ಟ್ರೀಯ ಉಸ್ತುವಾರಿ ಮತ್ತು ರಾಹುಲ್ ಗಾಂಧಿ ಬಳಗದಲ್ಲಿ ಗುರುತಿಸಿ ಕೊಂಡಿದ್ದ ರುಚಿಗುಪ್ತ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕೆ.ಸಿ.ವೇಣುಗೋಪಾಲ್ ರಾಜ್ಯ ಘಟಕಗಳನ್ನು ಮರುಸಂಘಟಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುತ್ತಿದ್ದಾರೆ…ಸಂಘಟನೆಯಲ್ಲಿ ಹೊಸ ನಾಯಕತ್ವವನ್ನು ತರಲು ಯತ್ನಿಸಿದರೆ ಅದಕ್ಕೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಎನ್ಎಸ್‌ಯುಐ ಪದಾಧಿಕಾರಿಗಳುಳ್ಳ ವಾಟ್ಸಪ್ ಗುಂಪಿನೊಂದಿಗೆ ಮಾಹಿತಿ ಹಂಚಿಕೊಂಡಿರುವ ರುಚಿಗುಪ್ತ, “ನಾನು ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಲು ಬರೆಯುತ್ತಿದ್ದೇನೆ. ನಿಮಗೆ ತಿಳಿದಿರುವಂತೆ ಪ್ರಮುಖ ಸಾಂಸ್ಥಿಕ ಬದಲಾವಣೆಗಳು ಬಹಳ ಕಾಲದಿಂದಲೂ ಬಾಕಿ ಉಳಿದಿವೆ. ರಾಷ್ಟ್ರೀಯ ಸಮಿತಿ ಒಂದು ವರ್ಷ ಮತ್ತು ಮೂರು ತಿಂಗಳು ತೆಗೆದುಕೊಂಡಿತು. ರಾಜ್ಯ ಅಧ್ಯಕ್ಷರ ಆದೇಶಗಳು ತಿಂಗಳುಗಳಿಂದ ಬಾಕಿ ಉಳಿದಿವೆ. ಹೊಸ ಕಾರ್ಯಕರ್ತರಿಗೆ ಸ್ಥಳಾವಕಾಶ ಕಲ್ಪಿಸಲು ಮರುಸಂಘಟನೆಗಾಗಿ ಇನ್ನೂ ಅನೇಕ ರಾಜ್ಯ ಘಟಕಗಳು ಕಾಯುತ್ತಿವೆ. ಈ ನಿರಂತರ ವಿಳಂಬಗಳು ಸಂಸ್ಥೆಯನ್ನು ಹಾನಿಗೊಳಿಸುತ್ತಿವೆ ಆದರೆ ಪ್ರಸ್ತುತ ಸಂದರ್ಭಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಪದೇ ಪದೇ ಹೇಳಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿ ಒಪ್ಪಲಾಗದು” ಎಂದು ಅವರು ಬರೆದಿದ್ದಾರೆ.

ಈ ವಾಟ್ಸಪ್ ಗುಂಪಿನ ಬಹುತೇಕ ನಾಯಕರು ಸೋನಿಯಾ ಗಾಂಧಿಗೆ ಹತ್ತಿರದವರೆಂದು ಪರಿಗಣಿಸಲ್ಪಟ್ಟಿರುವ ವೇಣುಗೋಪಾಲ್ ಅವರೊಂದಿಗೆ ಅಸಮಾಧಾನ ಹೊಂದಿದ್ದರು. ವೇಣುಗೋಪಾಲ್ ಎನ್‌ಎಸ್‌ಯುಐಗೆ ಸಂಬಂಧಿಸಿದ ಸಾಂಸ್ಥಿಕ ನೇಮಕಾತಿಗಳನ್ನು ದೀರ್ಘಕಾಲದಿಂದ ತಡೆಹಿಡಿದಿದ್ದಾರೆ ಎಂದು ಎನ್‌ಎಸ್‌ಯುಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...