Homeಮುಖಪುಟ‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

- Advertisement -
- Advertisement -

ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ 150 ದಿನಗಳ ಭಾರತ್‌ ಜೋಡೋ ಯಾತ್ರೆಯ ಮಧ್ಯೆಯೆ ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿರುವ ಘಟನೆ ಬುಧವಾರ ನಡೆದಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಶಾಸಕ ಮೈಕೆಲ್ ಲೋಬೋ ಹೇಳಿದ್ದಾರೆ.

ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದು, ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಈ ಹಿಂದೆ ಅಲ್ಲಿ ಪಕ್ಷಕ್ಕೆ 11 ಶಾಸಕರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ನಾವು ಬಿಜೆಪಿ ಸೇರಿದ್ದೇವೆ… ಕಾಂಗ್ರೆಸ್ ಬಿಟ್ಟು, ಬಿಜೆಪಿ ಒಗ್ಗೂಡಿಸಿ (ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ)” ಎಂದು ಕಾಂಗ್ರೆಸ್ ಮಾಜಿ ಶಾಸಕ ಮೈಕಲ್ ಲೋಬೋ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಗೋವಾ ಕಾಂಗ್ರೆಸ್ ಶಾಸಕರು ರಾಜ್ಯದ ಆಡಳಿತರೂಢ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಚಿತ್ರದೊಂದಿಗೆ “ಗೋ ಗೋವಾ ಗಾನ್” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಸೇರಿದ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಈ ಎಲ್ಲಾ ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

“ಇಂದು ಬಿಜೆಪಿಗೆ ಸೇರ್ಪಡೆಗೊಂಡ 8 ಶಾಸಕರನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದೆ. ಆದರೆ ನನ್ನ ಪ್ರಕಾರ ‘ಕಾಂಗ್ರೆಸ್ ಛೋಡೋ ಯಾತ್ರೆ’ ಗೋವಾದಲ್ಲಿ ಪ್ರಾರಂಭವಾಗಿದೆ. ದೇಶಾದ್ಯಂತ ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ” ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ರಾಘವ್ ಚಡ್ಡಾ, “ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪರೇಷನ್ ಕಮಲ ವಿಫಲವಾಗಿದೆ, ಗೋವಾದಲ್ಲಿ ಯಶಸ್ವಿಯಾಗಿದೆ” ಎಂದು ಹೇಳಿದ್ದಾರೆ.

ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿಯ ಗೆಲುವಿನ ಓಟ ಮುಂದುವರಿಯುತ್ತಿರುವುದು ಹೇಗೆ?

ಏಳು ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷದ ನಾಯಕ ಮೈಕೆಲ್ ಲೋಬೊ ನಿರ್ಣಯ ಮಂಡಿಸಿದ್ದು, ಈ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ದಿಗಂಬರ್ ಕಾಮತ್ ಅನುಮೋದಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿವೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. 2019ರ ಜುಲೈ ತಿಂಗಳಲ್ಲಿ ಕೂಡಾ ಇದೇ ರೀತಿಯಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೊ ಅವರು ಪಕ್ಷದಲ್ಲಿ ಮೂರನೇ ಎರಡರಷ್ಟು ವಿಭಜನೆಗೆ ಪ್ರಯತ್ನಿಸಿದ್ದಾರೆ ಎಂದು ಜುಲೈನಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಬಿಜೆಪಿ ಸೇರಿರುವ ಪಕ್ಷದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, “ಬಿಜೆಪಿ ಪಕ್ಷದ ಶಾಸಕರಿಗೆ 25 ಕೋಟಿ ರೂ. ಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

ಪಕ್ಷದಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಕ್ಕಾಗಿ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಅವರನ್ನು ಕಾಂಗ್ರೆಸ್ ಪದಚ್ಯುತಗೊಳಿಸಿದೆ. ಪಕ್ಷದಲ್ಲಿ ಒಡಕು ಮೂಡಿಸಲು ಯತ್ನಿಸಿದ ಶಾಸಕರಾದ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...