Homeಮುಖಪುಟ‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

- Advertisement -
- Advertisement -

ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ 150 ದಿನಗಳ ಭಾರತ್‌ ಜೋಡೋ ಯಾತ್ರೆಯ ಮಧ್ಯೆಯೆ ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿರುವ ಘಟನೆ ಬುಧವಾರ ನಡೆದಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಶಾಸಕ ಮೈಕೆಲ್ ಲೋಬೋ ಹೇಳಿದ್ದಾರೆ.

ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದು, ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಈ ಹಿಂದೆ ಅಲ್ಲಿ ಪಕ್ಷಕ್ಕೆ 11 ಶಾಸಕರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ನಾವು ಬಿಜೆಪಿ ಸೇರಿದ್ದೇವೆ… ಕಾಂಗ್ರೆಸ್ ಬಿಟ್ಟು, ಬಿಜೆಪಿ ಒಗ್ಗೂಡಿಸಿ (ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ)” ಎಂದು ಕಾಂಗ್ರೆಸ್ ಮಾಜಿ ಶಾಸಕ ಮೈಕಲ್ ಲೋಬೋ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಗೋವಾ ಕಾಂಗ್ರೆಸ್ ಶಾಸಕರು ರಾಜ್ಯದ ಆಡಳಿತರೂಢ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಚಿತ್ರದೊಂದಿಗೆ “ಗೋ ಗೋವಾ ಗಾನ್” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಸೇರಿದ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಈ ಎಲ್ಲಾ ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

“ಇಂದು ಬಿಜೆಪಿಗೆ ಸೇರ್ಪಡೆಗೊಂಡ 8 ಶಾಸಕರನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದೆ. ಆದರೆ ನನ್ನ ಪ್ರಕಾರ ‘ಕಾಂಗ್ರೆಸ್ ಛೋಡೋ ಯಾತ್ರೆ’ ಗೋವಾದಲ್ಲಿ ಪ್ರಾರಂಭವಾಗಿದೆ. ದೇಶಾದ್ಯಂತ ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ” ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ರಾಘವ್ ಚಡ್ಡಾ, “ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪರೇಷನ್ ಕಮಲ ವಿಫಲವಾಗಿದೆ, ಗೋವಾದಲ್ಲಿ ಯಶಸ್ವಿಯಾಗಿದೆ” ಎಂದು ಹೇಳಿದ್ದಾರೆ.

ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿಯ ಗೆಲುವಿನ ಓಟ ಮುಂದುವರಿಯುತ್ತಿರುವುದು ಹೇಗೆ?

ಏಳು ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷದ ನಾಯಕ ಮೈಕೆಲ್ ಲೋಬೊ ನಿರ್ಣಯ ಮಂಡಿಸಿದ್ದು, ಈ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ದಿಗಂಬರ್ ಕಾಮತ್ ಅನುಮೋದಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿವೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. 2019ರ ಜುಲೈ ತಿಂಗಳಲ್ಲಿ ಕೂಡಾ ಇದೇ ರೀತಿಯಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೊ ಅವರು ಪಕ್ಷದಲ್ಲಿ ಮೂರನೇ ಎರಡರಷ್ಟು ವಿಭಜನೆಗೆ ಪ್ರಯತ್ನಿಸಿದ್ದಾರೆ ಎಂದು ಜುಲೈನಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಬಿಜೆಪಿ ಸೇರಿರುವ ಪಕ್ಷದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, “ಬಿಜೆಪಿ ಪಕ್ಷದ ಶಾಸಕರಿಗೆ 25 ಕೋಟಿ ರೂ. ಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

ಪಕ್ಷದಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಕ್ಕಾಗಿ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಅವರನ್ನು ಕಾಂಗ್ರೆಸ್ ಪದಚ್ಯುತಗೊಳಿಸಿದೆ. ಪಕ್ಷದಲ್ಲಿ ಒಡಕು ಮೂಡಿಸಲು ಯತ್ನಿಸಿದ ಶಾಸಕರಾದ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...