Homeಮುಖಪುಟ‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

- Advertisement -
- Advertisement -

ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ 150 ದಿನಗಳ ಭಾರತ್‌ ಜೋಡೋ ಯಾತ್ರೆಯ ಮಧ್ಯೆಯೆ ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿರುವ ಘಟನೆ ಬುಧವಾರ ನಡೆದಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಶಾಸಕ ಮೈಕೆಲ್ ಲೋಬೋ ಹೇಳಿದ್ದಾರೆ.

ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದು, ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಈ ಹಿಂದೆ ಅಲ್ಲಿ ಪಕ್ಷಕ್ಕೆ 11 ಶಾಸಕರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ನಾವು ಬಿಜೆಪಿ ಸೇರಿದ್ದೇವೆ… ಕಾಂಗ್ರೆಸ್ ಬಿಟ್ಟು, ಬಿಜೆಪಿ ಒಗ್ಗೂಡಿಸಿ (ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ)” ಎಂದು ಕಾಂಗ್ರೆಸ್ ಮಾಜಿ ಶಾಸಕ ಮೈಕಲ್ ಲೋಬೋ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಗೋವಾ ಕಾಂಗ್ರೆಸ್ ಶಾಸಕರು ರಾಜ್ಯದ ಆಡಳಿತರೂಢ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಚಿತ್ರದೊಂದಿಗೆ “ಗೋ ಗೋವಾ ಗಾನ್” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಸೇರಿದ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಈ ಎಲ್ಲಾ ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

“ಇಂದು ಬಿಜೆಪಿಗೆ ಸೇರ್ಪಡೆಗೊಂಡ 8 ಶಾಸಕರನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದೆ. ಆದರೆ ನನ್ನ ಪ್ರಕಾರ ‘ಕಾಂಗ್ರೆಸ್ ಛೋಡೋ ಯಾತ್ರೆ’ ಗೋವಾದಲ್ಲಿ ಪ್ರಾರಂಭವಾಗಿದೆ. ದೇಶಾದ್ಯಂತ ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ” ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ರಾಘವ್ ಚಡ್ಡಾ, “ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪರೇಷನ್ ಕಮಲ ವಿಫಲವಾಗಿದೆ, ಗೋವಾದಲ್ಲಿ ಯಶಸ್ವಿಯಾಗಿದೆ” ಎಂದು ಹೇಳಿದ್ದಾರೆ.

ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿಯ ಗೆಲುವಿನ ಓಟ ಮುಂದುವರಿಯುತ್ತಿರುವುದು ಹೇಗೆ?

ಏಳು ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷದ ನಾಯಕ ಮೈಕೆಲ್ ಲೋಬೊ ನಿರ್ಣಯ ಮಂಡಿಸಿದ್ದು, ಈ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ದಿಗಂಬರ್ ಕಾಮತ್ ಅನುಮೋದಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿವೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. 2019ರ ಜುಲೈ ತಿಂಗಳಲ್ಲಿ ಕೂಡಾ ಇದೇ ರೀತಿಯಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೊ ಅವರು ಪಕ್ಷದಲ್ಲಿ ಮೂರನೇ ಎರಡರಷ್ಟು ವಿಭಜನೆಗೆ ಪ್ರಯತ್ನಿಸಿದ್ದಾರೆ ಎಂದು ಜುಲೈನಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಬಿಜೆಪಿ ಸೇರಿರುವ ಪಕ್ಷದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, “ಬಿಜೆಪಿ ಪಕ್ಷದ ಶಾಸಕರಿಗೆ 25 ಕೋಟಿ ರೂ. ಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

ಪಕ್ಷದಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಕ್ಕಾಗಿ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಅವರನ್ನು ಕಾಂಗ್ರೆಸ್ ಪದಚ್ಯುತಗೊಳಿಸಿದೆ. ಪಕ್ಷದಲ್ಲಿ ಒಡಕು ಮೂಡಿಸಲು ಯತ್ನಿಸಿದ ಶಾಸಕರಾದ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...