Homeಮುಖಪುಟ‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

- Advertisement -
- Advertisement -

ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ 150 ದಿನಗಳ ಭಾರತ್‌ ಜೋಡೋ ಯಾತ್ರೆಯ ಮಧ್ಯೆಯೆ ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿರುವ ಘಟನೆ ಬುಧವಾರ ನಡೆದಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಶಾಸಕ ಮೈಕೆಲ್ ಲೋಬೋ ಹೇಳಿದ್ದಾರೆ.

ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದು, ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಈ ಹಿಂದೆ ಅಲ್ಲಿ ಪಕ್ಷಕ್ಕೆ 11 ಶಾಸಕರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ನಾವು ಬಿಜೆಪಿ ಸೇರಿದ್ದೇವೆ… ಕಾಂಗ್ರೆಸ್ ಬಿಟ್ಟು, ಬಿಜೆಪಿ ಒಗ್ಗೂಡಿಸಿ (ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ)” ಎಂದು ಕಾಂಗ್ರೆಸ್ ಮಾಜಿ ಶಾಸಕ ಮೈಕಲ್ ಲೋಬೋ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಗೋವಾ ಕಾಂಗ್ರೆಸ್ ಶಾಸಕರು ರಾಜ್ಯದ ಆಡಳಿತರೂಢ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಚಿತ್ರದೊಂದಿಗೆ “ಗೋ ಗೋವಾ ಗಾನ್” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಸೇರಿದ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಈ ಎಲ್ಲಾ ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

“ಇಂದು ಬಿಜೆಪಿಗೆ ಸೇರ್ಪಡೆಗೊಂಡ 8 ಶಾಸಕರನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದೆ. ಆದರೆ ನನ್ನ ಪ್ರಕಾರ ‘ಕಾಂಗ್ರೆಸ್ ಛೋಡೋ ಯಾತ್ರೆ’ ಗೋವಾದಲ್ಲಿ ಪ್ರಾರಂಭವಾಗಿದೆ. ದೇಶಾದ್ಯಂತ ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ” ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ರಾಘವ್ ಚಡ್ಡಾ, “ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪರೇಷನ್ ಕಮಲ ವಿಫಲವಾಗಿದೆ, ಗೋವಾದಲ್ಲಿ ಯಶಸ್ವಿಯಾಗಿದೆ” ಎಂದು ಹೇಳಿದ್ದಾರೆ.

ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿಯ ಗೆಲುವಿನ ಓಟ ಮುಂದುವರಿಯುತ್ತಿರುವುದು ಹೇಗೆ?

ಏಳು ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷದ ನಾಯಕ ಮೈಕೆಲ್ ಲೋಬೊ ನಿರ್ಣಯ ಮಂಡಿಸಿದ್ದು, ಈ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ದಿಗಂಬರ್ ಕಾಮತ್ ಅನುಮೋದಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿವೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. 2019ರ ಜುಲೈ ತಿಂಗಳಲ್ಲಿ ಕೂಡಾ ಇದೇ ರೀತಿಯಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೊ ಅವರು ಪಕ್ಷದಲ್ಲಿ ಮೂರನೇ ಎರಡರಷ್ಟು ವಿಭಜನೆಗೆ ಪ್ರಯತ್ನಿಸಿದ್ದಾರೆ ಎಂದು ಜುಲೈನಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಬಿಜೆಪಿ ಸೇರಿರುವ ಪಕ್ಷದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, “ಬಿಜೆಪಿ ಪಕ್ಷದ ಶಾಸಕರಿಗೆ 25 ಕೋಟಿ ರೂ. ಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

ಪಕ್ಷದಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಕ್ಕಾಗಿ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಅವರನ್ನು ಕಾಂಗ್ರೆಸ್ ಪದಚ್ಯುತಗೊಳಿಸಿದೆ. ಪಕ್ಷದಲ್ಲಿ ಒಡಕು ಮೂಡಿಸಲು ಯತ್ನಿಸಿದ ಶಾಸಕರಾದ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...