Homeಮುಖಪುಟ‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

- Advertisement -
- Advertisement -

ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ 150 ದಿನಗಳ ಭಾರತ್‌ ಜೋಡೋ ಯಾತ್ರೆಯ ಮಧ್ಯೆಯೆ ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿರುವ ಘಟನೆ ಬುಧವಾರ ನಡೆದಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಶಾಸಕ ಮೈಕೆಲ್ ಲೋಬೋ ಹೇಳಿದ್ದಾರೆ.

ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದು, ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಈ ಹಿಂದೆ ಅಲ್ಲಿ ಪಕ್ಷಕ್ಕೆ 11 ಶಾಸಕರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ನಾವು ಬಿಜೆಪಿ ಸೇರಿದ್ದೇವೆ… ಕಾಂಗ್ರೆಸ್ ಬಿಟ್ಟು, ಬಿಜೆಪಿ ಒಗ್ಗೂಡಿಸಿ (ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ)” ಎಂದು ಕಾಂಗ್ರೆಸ್ ಮಾಜಿ ಶಾಸಕ ಮೈಕಲ್ ಲೋಬೋ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಗೋವಾ ಕಾಂಗ್ರೆಸ್ ಶಾಸಕರು ರಾಜ್ಯದ ಆಡಳಿತರೂಢ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಚಿತ್ರದೊಂದಿಗೆ “ಗೋ ಗೋವಾ ಗಾನ್” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಸೇರಿದ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಈ ಎಲ್ಲಾ ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

“ಇಂದು ಬಿಜೆಪಿಗೆ ಸೇರ್ಪಡೆಗೊಂಡ 8 ಶಾಸಕರನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದೆ. ಆದರೆ ನನ್ನ ಪ್ರಕಾರ ‘ಕಾಂಗ್ರೆಸ್ ಛೋಡೋ ಯಾತ್ರೆ’ ಗೋವಾದಲ್ಲಿ ಪ್ರಾರಂಭವಾಗಿದೆ. ದೇಶಾದ್ಯಂತ ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ” ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ರಾಘವ್ ಚಡ್ಡಾ, “ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪರೇಷನ್ ಕಮಲ ವಿಫಲವಾಗಿದೆ, ಗೋವಾದಲ್ಲಿ ಯಶಸ್ವಿಯಾಗಿದೆ” ಎಂದು ಹೇಳಿದ್ದಾರೆ.

ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿಯ ಗೆಲುವಿನ ಓಟ ಮುಂದುವರಿಯುತ್ತಿರುವುದು ಹೇಗೆ?

ಏಳು ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷದ ನಾಯಕ ಮೈಕೆಲ್ ಲೋಬೊ ನಿರ್ಣಯ ಮಂಡಿಸಿದ್ದು, ಈ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ದಿಗಂಬರ್ ಕಾಮತ್ ಅನುಮೋದಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿವೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. 2019ರ ಜುಲೈ ತಿಂಗಳಲ್ಲಿ ಕೂಡಾ ಇದೇ ರೀತಿಯಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೊ ಅವರು ಪಕ್ಷದಲ್ಲಿ ಮೂರನೇ ಎರಡರಷ್ಟು ವಿಭಜನೆಗೆ ಪ್ರಯತ್ನಿಸಿದ್ದಾರೆ ಎಂದು ಜುಲೈನಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಬಿಜೆಪಿ ಸೇರಿರುವ ಪಕ್ಷದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, “ಬಿಜೆಪಿ ಪಕ್ಷದ ಶಾಸಕರಿಗೆ 25 ಕೋಟಿ ರೂ. ಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

ಪಕ್ಷದಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಕ್ಕಾಗಿ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಅವರನ್ನು ಕಾಂಗ್ರೆಸ್ ಪದಚ್ಯುತಗೊಳಿಸಿದೆ. ಪಕ್ಷದಲ್ಲಿ ಒಡಕು ಮೂಡಿಸಲು ಯತ್ನಿಸಿದ ಶಾಸಕರಾದ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...