Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ...

ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ ಖರ್ಗೆ

- Advertisement -
- Advertisement -

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಗೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎದುರಿಸುತ್ತಿರುವ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಖರ್ಗೆ ಅವರು ಅಮಿತ್‌ ಶಾಗೆ ಬರೆದ ಪತ್ರದ ಪ್ರತಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅಸ್ಸಾಂ ಸರ್ಕಾರವು ಸೃಷ್ಟಿಸಿದೆ ಎಂದು ಹೇಳಲಾದ ಭಯ ಮತ್ತು ಬೆದರಿಕೆಯ ವಾತಾವರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಅಶಾಂತಿ ಸೃಷ್ಟಿಸಲು ಪೊಲೀಸರು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಪತ್ರದಲ್ಲಿ ಅಮಿತ್‌ ಶಾ ಮಧ್ಯಪ್ರವೇಶಕ್ಕೆ ಮತ್ತು ಯಾತ್ರೆಯಲ್ಲಿ ಭಾಗವಹಿಸುವವರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಒತ್ತಾಯಿಸಲಾಗಿದೆ. ದೈಹಿಕ ಹಾನಿಗೆ ಕಾರಣವಾಗುವ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಮತ್ತು ಅಸ್ಸಾಂನ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸುವಂತೆ ಆಗ್ರಹಿಸಲಾಗಿದೆ.

ಮಂಗಳವಾರದಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಸ್ಸಾಂ ಪೊಲೀಸರ ನಡುವೆ ಘರ್ಷಣೆ ಸಂಭವಿಸಿತ್ತು. ಭದ್ರತಾ ಸಿಬ್ಬಂದಿ ರ್ಯಾಲಿಯನ್ನು ಗುವಾಹಟಿ ರಸ್ತೆಗಳಲ್ಲಿ ತೆರಳುವುದನ್ನು ತಡೆಯಲು ಪ್ರಯತ್ನಿಸಿದ್ದರು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ಮಧ್ಯೆ ಮಲ್ಲಿಕಾರ್ಜುನ  ಖರ್ಗೆ ಅವರು ಬೆರೆದು ಪತ್ರದಲ್ಲಿ ರಾಹುಲ್‌ ಗಾಂಧಿಯ ಭದ್ರತೆಯ ಬಗ್ಗೆ ಆತಂಕವನ್ನು ಹೆಚ್ಚಿಸುವ ನಿರ್ದಿಷ್ಟ ಘಟನೆಗಳನ್ನು ಉಲ್ಲೇಖಿಸಿದ್ದಾರೆ.

Z+ ರಕ್ಷಣೆ ಹೊಂದಿರುವ ರಾಹುಲ್‌ ಗಾಂಧಿಗೆ ಸಮರ್ಪಕ ಭದ್ರತೆ ಒದಗಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪೋಸ್ಟರ್‌ಗಳನ್ನು ವಿರೂಪಗೊಳಿಸುವುದು ಮತ್ತು ಬಿಜೆಪಿ ಕಾರ್ಯಕರ್ತರು ಜನವರಿ 21ರಂದು ಕಾಂಗ್ರೆಸ್‌ನ ಯಾತ್ರೆಯನ್ನು ಹೇಗೆ ತಡೆದರು ಎಂದು ಪ್ರಸ್ತಾಪಿಸಿದರು. ಕಾಂಗ್ರೆಸ್‌ ರಾಜ್ಯ ಮುಖ್ಯಸ್ಥ ಭೂಪೇನ್ ಬೋರಾ ಮೇಲೆ ಹಲ್ಲೆ ಬಗ್ಗೆ ಕೂಡ ಖರ್ಗೆ ತಮ್ಮ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಅಸ್ಸಾಂ ಪೊಲೀಸರು ರಾಹುಲ್‌ ಗಾಂಧಿ ಅವರ ಬೆಂಗಾವಲು ಪಡೆಗೆ ಹತ್ತಿರವಾಗಲು ಬಿಜೆಪಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದರಿಂದ ರಾಹುಲ್‌ ಅವರ ಭದ್ರತೆಗೆ ತೊಂದರೆ ಉಂಟಾಗಿದೆ. ಪೊಲೀಸರು ಉದ್ದೇಶ ಪೂರ್ವಕವಾಗಿ ಈ ರೀತಿ ಮಾಡಿದ್ದಾರೆ. ಈ ಘಟನೆಯಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಪುರಾವೆಗಳು ಇದ್ದರೂ ಪೊಲೀಸರು ಇಲ್ಲಿಯವರೆಗೂ ಯಾರನ್ನು ಬಂಧಿಸಿಲ್ಲ. ಅಪಾಯ ಹೆಚ್ಚಾಗುತ್ತಿದೆ ಮತ್ತು ಯಾತ್ರೆಯು ಮುಂದುವರಿಯುತ್ತಿದೆ, ಅಸ್ಸಾಂನ ಮುಖ್ಯಮಂತ್ರಿ ಮತ್ತು ಅಸ್ಸಾಂನ ಪೊಲೀಸ್ ಮಹಾನಿರ್ದೇಶಕರು, ರಾಹುಲ್ ಗಾಂಧಿ ಮತ್ತು ಭಾರತ್ ಜೋಡೋ ನ್ಯಾಯ ಯಾತ್ರೆಯ ಸದಸ್ಯರಿಗೆ ಗಂಭೀರವಾದ ವೈಯಕ್ತಿಕ ಗಾಯಕ್ಕೆ ಕಾರಣವಾಗುವ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಿಮ್ಮ ಮಧ್ಯಸ್ಥಿಕೆಯನ್ನು ನಾವು ಕೋರುತ್ತೇವೆ ಎಂದು ಅಮಿತ್‌ ಶಾ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಾಗುತ್ತಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಪಕ್ಷದ ಇತರ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಹಿಂಸಾಚಾರ, ಪ್ರಚೋದನೆ, ಹಲ್ಲೆ ಕುರಿತು ಅಸ್ಸಾಂ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ 14ರಂದು ಮಣಿಪುರದ ಇಂಫಾಲ್‌ನಿಂದ ಪ್ರಾರಂಭವಾಯಿತು, ಯಾತ್ರೆ 6,700 ಕಿಲೋಮೀಟರ್‌ಗಳ ಪ್ರಯಾಣದ ಬಳಿಕ ಮುಂಬೈನಲ್ಲಿ ಸಮಾಪ್ತಿಯಾಗಲಿದೆ. ಯಾತ್ರೆ ಮಣಿಪುರ, ನಾಗಾಲ್ಯಾಂಡ್‌ ಮೂಲಕ ಇದೀಗ ಅಸ್ಸಾಂನಲ್ಲಿ ಸಾಗುತ್ತಿದೆ. ಅಸ್ಸಾಂನಲ್ಲಿ ಯಾತ್ರೆಗೆ ಅಲ್ಲಿನ ಬಿಜೆಪಿ ಸರಕಾರ ಅಡ್ಡಿಯನ್ನುಂಟು ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪ ಮಾಡುತ್ತಿದೆ.

ಇದನ್ನು ಓದಿ: ಅಸ್ಸಾಂನಲ್ಲಿ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...