Homeರಾಜಕೀಯಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ...

ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

- Advertisement -
- Advertisement -

ಪಕ್ಷಕ್ಕೆ ಹೊಸ ಮುಖಗಳನ್ನು ನಾಯಕತ್ವದ ಮಟ್ಟಕ್ಕೆ ತರುವ ಆಮೂಲಾಗ್ರ ಚಿಂತನೆಯನ್ನು ಕಾಂಗ್ರೆಸ್ ಉನ್ನತ ನಾಯಕರು ಪರಿಗಣಿಸುತ್ತಿರುವುದಾಗಿ ವರದಿಯಾಗಿದೆ. ಒಂದು ಕುಟುಂಬಕ್ಕೆ ಒಂದು ಟಿಕೆಟ್‌‌, ರಾಜ್ಯಸಭಾ ಸದಸ್ಯರ ಅವಧಿಗೆ ಮಿತಿ ಹೇರುವುದು, ಜೊತೆಗೆ ಸಂಘಟನೆಯ ಎಲ್ಲಾ ಹಂತಗಳಲ್ಲಿ ಸ್ಥಾನಮಾನಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನಾಯಕರಿಗೆ ವಯಸ್ಸಿನ ಮಿತಿಯನ್ನು ವಿಧಿಸಲು ಪಕ್ಷವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಉದಯಪುರದಲ್ಲಿ ಶುಕ್ರವಾರ ಪ್ರಾರಂಭವಾಗುವ ‘‘ಕಾಂಗ್ರೆಸ್ ಚಿಂತನ್ ಶಿಬಿರ್‌”ನಲ್ಲಿ ಈ ಬಗ್ಗೆ ಪಕ್ಷವು “ಗಂಭೀರವಾಗಿ ಯೋಚಿಸುತ್ತಿದೆ” ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್‌ ಹೇಳಿದ್ದು, ಆದರೆ ಈ ಪ್ರಸ್ತಾಪಗಳು ಯಾವ ರೂಪವನ್ನು ಪಡೆಯುತ್ತದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ ಎಂದು ವರದಿ ಮಾಡಿದೆ. ಕಾಂಗ್ರೆಸ್‌ನ ಈ ಚಿಂತನೆಯು ಪಕ್ಷಕ್ಕೆ “ಯುವತ್ವವನ್ನು” ನೀಡುವ ಪ್ರಯತ್ನದ ಭಾಗವಾಗಿದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ದಿಕ್ಕಿನಲ್ಲಿ ಖಂಡಿತವಾಗಿಯೂ ಚಿಂತನೆ ಇದೆ ಎಂದು ನಾನು ನಿಮಗೆ ಹೇಳಬಲ್ಲೆ… ಈ ಬಗ್ಗೆ ನಾವು ಗಂಭೀರವಾಗಿ ಯೋಚಿಸುತ್ತಿದ್ದೇವೆ, ಆದರೆ ಅದು ಹೇಗೆ ಚರ್ಚೆಯಾಗುತ್ತದೆ ಎಂದು ನಾನು ಈಗ ಹೇಳಲಾರೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ಪಕ್ಷದ ಚುನಾವಣಾ ಪುನರುಜ್ಜೀವನಕ್ಕೆ ಉದ್ದೇಶಪೂರ್ವಕವಾಗಿ ಮತ್ತು ಮಾರ್ಗಸೂಚಿಯನ್ನು ಕಂಡುಕೊಳ್ಳಲು ನಡೆಯುತ್ತಿರುವ ಚಿಂತನ ಶಿಬಿರದಲ್ಲಿ ಈ ವಿಚಾರಗಳು ಚರ್ಚೆಗೆ ಬರುತ್ತವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಸುಮಾರು 430 ಕಾಂಗ್ರೆಸ್ ನಾಯಕರು ಶಿಬಿರದಲ್ಲಿ ಒಟ್ಟುಗೂಡಲಿದ್ದಾರೆ ಎಂದು ವರದಿಯಾಗಿದ್ದು, 2014 ರಲ್ಲಿ ಪಕ್ಷದ ಚುನಾವಣಾ ಹಿನ್ನಡೆ ಪ್ರಾರಂಭವಾದ ನಂತರ ಕಾಂಗ್ರೆಸ್‌ ಸೇರುತ್ತಿರುವ ಮೊದಲ ಚಿಂತನಾ ಅಧಿವೇಶನವಾಗಿದೆ.

ಶಿಬಿರದಲ್ಲಿ ಎರಡು ಪ್ರಸ್ತಾವನೆಗಳ ಕುರಿತು ಅಂತಿಮ ರೂಪುರೇಷೆ ಹೊರಬೀಳಬೇಕಿದೆ ಎಂದು ಮೂಲಗಳು ತಿಳಿಸಿವೆ. ವಯಸ್ಸಿನ ಮಿತಿ ಏನಾಗಿರಬೇಕು: 70 ಅಥವಾ 75? ಮತ್ತು ರಾಜ್ಯಸಭೆಯ ಅವಧಿಯನ್ನು 2 ಅಥವಾ 3 ಕ್ಕೆ ಸೀಮಿತಗೊಳಿಸಬೇಕೇ? ಮುಂತಾದ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

“ಸಾಂಸ್ಥಿಕ ಪುನರುಜ್ಜೀವನ ನಡೆದಾಗ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಕೇಂದ್ರ ಚುನಾವಣಾ ಸಮಿತಿಯಲ್ಲಿ ನಿರ್ದಿಷ್ಟ ಶೇಕಡಾವಾರು ಯುವ ನಾಯಕರಿಗೆ ಸ್ಥಾನ ಸಿಗುವಂತೆ ನೋಡಿಕೊಳ್ಳಲಾಗುತ್ತದೆ. ಇದು ಪಿಸಿಸಿ (ರಾಜ್ಯ ಘಟಕಗಳು) ಮತ್ತು ಜಿಲ್ಲಾ ಸಮಿತಿಗಳಿಗೂ ಅನ್ವಯಿಸುತ್ತದೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಮಲ್ ನಾಥ್ ರಾಜೀನಾಮೆ

70 ಮತ್ತು 75 ವರ್ಷ ಮೇಲ್ಪಟ್ಟ ನಾಯಕರು ಪಕ್ಷದಲ್ಲಿ ಹಲವು ಹಂತಗಳಲ್ಲಿ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅವರು ಕೆಳಗಿಳಿಯುವಂತೆ ಕೇಳುವ ಸಾಧ್ಯತೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಇದು “ಕ್ರಮೇಣ ಹಂತ-ಹಂತ ಆಗಬಹುದು” ಎಂದು ತಿಳಿಸಿದೆ.

ಸೋನಿಯಾ ಗಾಂಧಿ ಅವರಿಗೆ ವಯಸ್ಸು 75. 2024ರ ಲೋಕಸಭೆ ಚುನಾವಣೆವರೆಗೂ ಅವರನ್ನು ಮುಂದುವರಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಒತ್ತಾಯಿಸದ ಹೊರತು ಅವರು ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡುವ ಸೂಚನೆಗಳಿವೆ.

ಉದಯಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ, “ಕಾಂಗ್ರೆಸ್ ಜನ (ಜನರು) ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ಬಯಸುತ್ತಾರೆ” ಎಂದು ಪುನರುಚ್ಚರಿಸಿದ್ದು, ಆದರೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯು ನಡೆಯುತ್ತಿದೆ ಮತ್ತು ಇದು ಆಗಸ್ಟ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಯಸ್ಸು 79. ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಮ್ಮನ್ ಚಾಂಡಿ ಅವರ ವಯಸ್ಸು 78, ಸಿಡಬ್ಲ್ಯುಸಿ ಸದಸ್ಯರಾದ ಮನಮೋಹನ್ ಸಿಂಗ್ ಮತ್ತು ಎ.ಕೆ. ಆಂಟನಿ 80 ಮತ್ತು ಅಂಬಿಕಾ ಸೋನಿ, ಹರೀಶ್ ರಾವತ್, ಪಿ. ಚಿದಂಬರಂ, ಗುಲಾಂ ನಬಿ ಆಜಾದ್ 70 ವರ್ಷಕ್ಕಿಂತ ಮೇಲ್ಪಟ್ಟವರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ 71 ವರ್ಷ.

ಕಾಂಗ್ರೆಸ್‌ನ ರಾಜ್ಯ ನಾಯಕರುಗಳಲ್ಲಿ, ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ವಯಸ್ಸು 75. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದರೆ, ಅವರು ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿರುವ ಸಾಧ್ಯತೆಯಿದೆ. ಹರಿಯಾಣದಲ್ಲಿ ಭೂಪಿಂದರ್ ಸಿಂಗ್ ಹೂಡಾ ಪ್ರಕರಣವೂ ಇದೇ ಆಗಿದೆ. ಹಾಗಾದರೆ ಇವರುಗಳ ವಿಷಯದಲ್ಲಿ ಪಕ್ಷವೂ ವಿನಾಯಿತಿ ನೀಡಲಿವೆಯೇ? ಎಂಬ ಅಂಶಗಳ ಬಗ್ಗೆ ಇನ್ನೂ ಸ್ಪಷ್ಟತೆ ಹೊರಬರಬೇಕಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಚಿಂತನ್ ಶಿಬಿರ್‌ದ ಅರ್ಧದಷ್ಟು ಪ್ರತಿನಿಧಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕತ್ವ ಖಚಿತಪಡಿಸಿದೆ.

ಇದನ್ನೂ ಓದಿ: ತನ್ನ ಹಳ್ಳಿಗೆ ಉತ್ತಮ ರಸ್ತೆ ಕೇಳಿದ ಯುವಕನ ಮೇಲೆ ಹಲ್ಲೆ ನಡೆಸಿದ ಪಾವಗಡ ಕಾಂಗ್ರೆಸ್‌ ಶಾಸಕ ವೆಂಕಟರಮಣಪ್ಪ

ಸಂಘಟನೆಯಲ್ಲಿ ಹುದ್ದೆಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಈಗಾಗಲೇ 75 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಿದೆ. ಸಿಪಿಎಂ ಪಾಲಿಟ್‌ಬ್ಯೂರೊ ಮತ್ತು ಕೇಂದ್ರ ಸಮಿತಿ ಸೇರಿದಂತೆ ಎಲ್ಲಾ ತಮ್ಮ ಎಲ್ಲಾ ಸಂಸ್ಥೆಗಳಲ್ಲಿ ಸದಸ್ಯರಿಗೆ 75 ರ ನಿವೃತ್ತಿ ವಯಸ್ಸನ್ನು ಜಾರಿಗೆ ತಂದಿದೆ. ಜೊತೆಗೆ ಸದಸ್ಯರೊಬ್ಬರು ಮೂರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗುವುದನ್ನು ತಡೆಯುವ ನಿಯಮವನ್ನು ಜಾರಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...