Homeರಾಜಕೀಯಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ...

ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

- Advertisement -
- Advertisement -

ಪಕ್ಷಕ್ಕೆ ಹೊಸ ಮುಖಗಳನ್ನು ನಾಯಕತ್ವದ ಮಟ್ಟಕ್ಕೆ ತರುವ ಆಮೂಲಾಗ್ರ ಚಿಂತನೆಯನ್ನು ಕಾಂಗ್ರೆಸ್ ಉನ್ನತ ನಾಯಕರು ಪರಿಗಣಿಸುತ್ತಿರುವುದಾಗಿ ವರದಿಯಾಗಿದೆ. ಒಂದು ಕುಟುಂಬಕ್ಕೆ ಒಂದು ಟಿಕೆಟ್‌‌, ರಾಜ್ಯಸಭಾ ಸದಸ್ಯರ ಅವಧಿಗೆ ಮಿತಿ ಹೇರುವುದು, ಜೊತೆಗೆ ಸಂಘಟನೆಯ ಎಲ್ಲಾ ಹಂತಗಳಲ್ಲಿ ಸ್ಥಾನಮಾನಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನಾಯಕರಿಗೆ ವಯಸ್ಸಿನ ಮಿತಿಯನ್ನು ವಿಧಿಸಲು ಪಕ್ಷವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಉದಯಪುರದಲ್ಲಿ ಶುಕ್ರವಾರ ಪ್ರಾರಂಭವಾಗುವ ‘‘ಕಾಂಗ್ರೆಸ್ ಚಿಂತನ್ ಶಿಬಿರ್‌”ನಲ್ಲಿ ಈ ಬಗ್ಗೆ ಪಕ್ಷವು “ಗಂಭೀರವಾಗಿ ಯೋಚಿಸುತ್ತಿದೆ” ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್‌ ಹೇಳಿದ್ದು, ಆದರೆ ಈ ಪ್ರಸ್ತಾಪಗಳು ಯಾವ ರೂಪವನ್ನು ಪಡೆಯುತ್ತದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ ಎಂದು ವರದಿ ಮಾಡಿದೆ. ಕಾಂಗ್ರೆಸ್‌ನ ಈ ಚಿಂತನೆಯು ಪಕ್ಷಕ್ಕೆ “ಯುವತ್ವವನ್ನು” ನೀಡುವ ಪ್ರಯತ್ನದ ಭಾಗವಾಗಿದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ದಿಕ್ಕಿನಲ್ಲಿ ಖಂಡಿತವಾಗಿಯೂ ಚಿಂತನೆ ಇದೆ ಎಂದು ನಾನು ನಿಮಗೆ ಹೇಳಬಲ್ಲೆ… ಈ ಬಗ್ಗೆ ನಾವು ಗಂಭೀರವಾಗಿ ಯೋಚಿಸುತ್ತಿದ್ದೇವೆ, ಆದರೆ ಅದು ಹೇಗೆ ಚರ್ಚೆಯಾಗುತ್ತದೆ ಎಂದು ನಾನು ಈಗ ಹೇಳಲಾರೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ಪಕ್ಷದ ಚುನಾವಣಾ ಪುನರುಜ್ಜೀವನಕ್ಕೆ ಉದ್ದೇಶಪೂರ್ವಕವಾಗಿ ಮತ್ತು ಮಾರ್ಗಸೂಚಿಯನ್ನು ಕಂಡುಕೊಳ್ಳಲು ನಡೆಯುತ್ತಿರುವ ಚಿಂತನ ಶಿಬಿರದಲ್ಲಿ ಈ ವಿಚಾರಗಳು ಚರ್ಚೆಗೆ ಬರುತ್ತವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಸುಮಾರು 430 ಕಾಂಗ್ರೆಸ್ ನಾಯಕರು ಶಿಬಿರದಲ್ಲಿ ಒಟ್ಟುಗೂಡಲಿದ್ದಾರೆ ಎಂದು ವರದಿಯಾಗಿದ್ದು, 2014 ರಲ್ಲಿ ಪಕ್ಷದ ಚುನಾವಣಾ ಹಿನ್ನಡೆ ಪ್ರಾರಂಭವಾದ ನಂತರ ಕಾಂಗ್ರೆಸ್‌ ಸೇರುತ್ತಿರುವ ಮೊದಲ ಚಿಂತನಾ ಅಧಿವೇಶನವಾಗಿದೆ.

ಶಿಬಿರದಲ್ಲಿ ಎರಡು ಪ್ರಸ್ತಾವನೆಗಳ ಕುರಿತು ಅಂತಿಮ ರೂಪುರೇಷೆ ಹೊರಬೀಳಬೇಕಿದೆ ಎಂದು ಮೂಲಗಳು ತಿಳಿಸಿವೆ. ವಯಸ್ಸಿನ ಮಿತಿ ಏನಾಗಿರಬೇಕು: 70 ಅಥವಾ 75? ಮತ್ತು ರಾಜ್ಯಸಭೆಯ ಅವಧಿಯನ್ನು 2 ಅಥವಾ 3 ಕ್ಕೆ ಸೀಮಿತಗೊಳಿಸಬೇಕೇ? ಮುಂತಾದ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

“ಸಾಂಸ್ಥಿಕ ಪುನರುಜ್ಜೀವನ ನಡೆದಾಗ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಕೇಂದ್ರ ಚುನಾವಣಾ ಸಮಿತಿಯಲ್ಲಿ ನಿರ್ದಿಷ್ಟ ಶೇಕಡಾವಾರು ಯುವ ನಾಯಕರಿಗೆ ಸ್ಥಾನ ಸಿಗುವಂತೆ ನೋಡಿಕೊಳ್ಳಲಾಗುತ್ತದೆ. ಇದು ಪಿಸಿಸಿ (ರಾಜ್ಯ ಘಟಕಗಳು) ಮತ್ತು ಜಿಲ್ಲಾ ಸಮಿತಿಗಳಿಗೂ ಅನ್ವಯಿಸುತ್ತದೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಮಲ್ ನಾಥ್ ರಾಜೀನಾಮೆ

70 ಮತ್ತು 75 ವರ್ಷ ಮೇಲ್ಪಟ್ಟ ನಾಯಕರು ಪಕ್ಷದಲ್ಲಿ ಹಲವು ಹಂತಗಳಲ್ಲಿ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅವರು ಕೆಳಗಿಳಿಯುವಂತೆ ಕೇಳುವ ಸಾಧ್ಯತೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಇದು “ಕ್ರಮೇಣ ಹಂತ-ಹಂತ ಆಗಬಹುದು” ಎಂದು ತಿಳಿಸಿದೆ.

ಸೋನಿಯಾ ಗಾಂಧಿ ಅವರಿಗೆ ವಯಸ್ಸು 75. 2024ರ ಲೋಕಸಭೆ ಚುನಾವಣೆವರೆಗೂ ಅವರನ್ನು ಮುಂದುವರಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಒತ್ತಾಯಿಸದ ಹೊರತು ಅವರು ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡುವ ಸೂಚನೆಗಳಿವೆ.

ಉದಯಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ, “ಕಾಂಗ್ರೆಸ್ ಜನ (ಜನರು) ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ಬಯಸುತ್ತಾರೆ” ಎಂದು ಪುನರುಚ್ಚರಿಸಿದ್ದು, ಆದರೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯು ನಡೆಯುತ್ತಿದೆ ಮತ್ತು ಇದು ಆಗಸ್ಟ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಯಸ್ಸು 79. ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಮ್ಮನ್ ಚಾಂಡಿ ಅವರ ವಯಸ್ಸು 78, ಸಿಡಬ್ಲ್ಯುಸಿ ಸದಸ್ಯರಾದ ಮನಮೋಹನ್ ಸಿಂಗ್ ಮತ್ತು ಎ.ಕೆ. ಆಂಟನಿ 80 ಮತ್ತು ಅಂಬಿಕಾ ಸೋನಿ, ಹರೀಶ್ ರಾವತ್, ಪಿ. ಚಿದಂಬರಂ, ಗುಲಾಂ ನಬಿ ಆಜಾದ್ 70 ವರ್ಷಕ್ಕಿಂತ ಮೇಲ್ಪಟ್ಟವರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ 71 ವರ್ಷ.

ಕಾಂಗ್ರೆಸ್‌ನ ರಾಜ್ಯ ನಾಯಕರುಗಳಲ್ಲಿ, ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ವಯಸ್ಸು 75. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದರೆ, ಅವರು ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿರುವ ಸಾಧ್ಯತೆಯಿದೆ. ಹರಿಯಾಣದಲ್ಲಿ ಭೂಪಿಂದರ್ ಸಿಂಗ್ ಹೂಡಾ ಪ್ರಕರಣವೂ ಇದೇ ಆಗಿದೆ. ಹಾಗಾದರೆ ಇವರುಗಳ ವಿಷಯದಲ್ಲಿ ಪಕ್ಷವೂ ವಿನಾಯಿತಿ ನೀಡಲಿವೆಯೇ? ಎಂಬ ಅಂಶಗಳ ಬಗ್ಗೆ ಇನ್ನೂ ಸ್ಪಷ್ಟತೆ ಹೊರಬರಬೇಕಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಚಿಂತನ್ ಶಿಬಿರ್‌ದ ಅರ್ಧದಷ್ಟು ಪ್ರತಿನಿಧಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕತ್ವ ಖಚಿತಪಡಿಸಿದೆ.

ಇದನ್ನೂ ಓದಿ: ತನ್ನ ಹಳ್ಳಿಗೆ ಉತ್ತಮ ರಸ್ತೆ ಕೇಳಿದ ಯುವಕನ ಮೇಲೆ ಹಲ್ಲೆ ನಡೆಸಿದ ಪಾವಗಡ ಕಾಂಗ್ರೆಸ್‌ ಶಾಸಕ ವೆಂಕಟರಮಣಪ್ಪ

ಸಂಘಟನೆಯಲ್ಲಿ ಹುದ್ದೆಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಈಗಾಗಲೇ 75 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಿದೆ. ಸಿಪಿಎಂ ಪಾಲಿಟ್‌ಬ್ಯೂರೊ ಮತ್ತು ಕೇಂದ್ರ ಸಮಿತಿ ಸೇರಿದಂತೆ ಎಲ್ಲಾ ತಮ್ಮ ಎಲ್ಲಾ ಸಂಸ್ಥೆಗಳಲ್ಲಿ ಸದಸ್ಯರಿಗೆ 75 ರ ನಿವೃತ್ತಿ ವಯಸ್ಸನ್ನು ಜಾರಿಗೆ ತಂದಿದೆ. ಜೊತೆಗೆ ಸದಸ್ಯರೊಬ್ಬರು ಮೂರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗುವುದನ್ನು ತಡೆಯುವ ನಿಯಮವನ್ನು ಜಾರಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...