Homeಮುಖಪುಟಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

- Advertisement -
- Advertisement -

ಬಿಜೆಪಿ ಪಕ್ಷವು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳ್ಳತನ ಮಾಡುತ್ತಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ಅವರು ಹೇಳಿದ್ದು, ಐಟಿ ಇಲಾಖೆಯು ಕಾಂಗ್ರೆಸ್‌ನ ಖಾತೆಯಿಂದ 5.89 ಕೋಟಿ ಕಡಿತಗೊಳಿಸಿರುವ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಎಐಸಿಸಿ, ಭಾರತೀಯ ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಖಾತೆಗಳಿಂದ ಆದಾಯ ತೆರಿಗೆ ಇಲಾಖೆ 65.89 ಕೋಟಿ ಕಡಿತಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಕೆ.ಸಿ ವೇಣುಗೋಪಾಲ್‌ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳ್ಳತನ ಮಾಡುತ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದಾಗ ಬಿಜೆಪಿಯನ್ನು ಎಂದಿಗೂ ಈ ರೀತಿ ನಡೆಸಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ಅವರು (ಬಿಜೆಪಿ) ನಮ್ಮ ಹಣವನ್ನು ಬ್ಯಾಂಕ್‌ಗಳಿಂದ ಕದಿಯುತ್ತಿದ್ದಾರೆ. ನಾವೂ ಈ ದೇಶವನ್ನು ಆಳಿದ್ದೇವೆ. ಅಂತಹ ಯಾವುದೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಥವಾ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ರೀತಿಯಾಗಿ ಮಾಡಿರುವ ನಿದರ್ಶನ ಇದ್ದರೆ ಬಿಜೆಪಿ ಪ್ರಸ್ತುತಪಡಿಸಬಹುದು ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ರಾಜಕೀಯ ಪಕ್ಷವಾಗಿ ಬಿಜೆಪಿಯು ಯಾವತ್ತೂ ಆದಾಯ ತೆರಿಗೆ ಪಾವತಿ ಮಾಡಿಲ್ಲ ಎಂದ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್‌ ಪಕ್ಷದ ಆದಾಯ ತೆರಿಗೆ ಕಡಿತವು ಪ್ರಜಾಪ್ರಭುತ್ವದ ತತ್ವಗಳು ಮತ್ತು ಮೌಲ್ಯಗಳ ಮೇಲಿನ ದಾಳಿಯಾಗಿದೆ. ಅವರು ಭಾರತದ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ ಇದು ನಿಜಕ್ಕೂ ಸ್ಪಷ್ಟವಾಗಿ ಸರ್ವಾಧಿಕಾರದ ಉದಾಹರಣೆಯಾಗಿದೆ. ಬಿಜೆಪಿಗಿಂತ ಭಿನ್ನವಾಗಿ ಕಾಂಗ್ರೆಸ್ ಈ ಹಣವನ್ನು ಪಕ್ಷದ ಕಾರ್ಯಕರ್ತರಿಂದ ಪಡೆದುಕೊಂಡಿದೆ ಎಂದು ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಬ್ಯಾಂಕ್‌ಗಳ ಇತ್ತೀಚಿನ ಮಾಹಿತಿಯ ಪ್ರಕಾರ, ಬಿಜೆಪಿ ಸರ್ಕಾರವು ನಮ್ಮ ಠೇವಣಿಗಳಿಂದ ಸರಿಸುಮಾರು 65.89 ಕೋಟಿಗಳನ್ನು ಸರ್ಕಾರಕ್ಕೆ ವರ್ಗಾಯಿಸುವಂತೆ ಬ್ಯಾಂಕ್‌ಗಳನ್ನು ಒತ್ತಾಯಿಸಿದೆ. ಈ ಮೊತ್ತವು AICC ಮತ್ತು ಭಾರತೀಯ ಯುವ ಕಾಂಗ್ರೆಸ್ ಖಾತೆ ಮತ್ತು NSUIಯಿಂದ ಬಂದಿದೆ. ಬಿಜೆಪಿಗಿಂತ ಭಿನ್ನವಾಗಿ, ನಾವು ಈ ಹಣವನ್ನು ಪಕ್ಷದ ಸಾಮಾನ್ಯ ಕಾರ್ಯಕರ್ತರಿಂದ ಪಡೆದುಕೊಂಡಿದ್ದೇವೆ. ಸಂಸತ್ ಚುನಾವಣೆಗೆ ಮುನ್ನ, ಪ್ರಮುಖ ವಿರೋಧ ಪಕ್ಷದ ಖಾತೆಯನ್ನು ಬಿಜೆಪಿ ಸರ್ಕಾರ ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಬುಧವಾರ, ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಇದು ಆತಂಕಕಾರಿ ಬೆಳವಣಿಗೆ, ಕೇಂದ್ರ ಸರ್ಕಾರದ ಏಜೆನ್ಸಿಗಳ ಕ್ರಮಗಳ ಬಗ್ಗೆ ಕಳವಳ ಹೆಚ್ಚುತ್ತಿದೆ. ಭಾರತದಲ್ಲಿ ಬಹು ಪಕ್ಷ ವ್ಯವಸ್ಥೆಗೆ ಸಂಭಾವ್ಯ ಅಪಾಯವಿದೆ. ಇದನ್ನು ತಡೆಯದಿದ್ದರೆ, ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳಲಿದೆ. ನ್ಯಾಯಾಂಗದ ಮಧ್ಯಪ್ರವೇಶ ಇಲ್ಲವಾದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳೇ ನಾಶವಾಗಲಿವೆ ಎಂದು ಮಾಕನ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಬಾಕಿ ಇರುವ ತೆರಿಗೆ ವಸೂಲಾತಿ ವಿರುದ್ಧ ಕಾಂಗ್ರೆಸ್, ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಮೊರೆ ಹೋಗಿದೆ. ಕಾಂಗ್ರೆಸ್ ನಿಯಮಗಳನ್ನು ಉಲ್ಲಂಘಿಸಿದೆ ಮತ್ತು ಆದ್ದರಿಂದ ಸಾಮಾನ್ಯ ತೆರಿಗೆ ಪಾವತಿದಾರ ಎಂದು ಪರಿಗಣಿಸಲಾಗುತ್ತಿದೆ ಎಂದು ಇಲಾಖೆ ಬುಧವಾರ ನ್ಯಾಯಾಲಯಕ್ಕೆ ತಿಳಿಸಿದೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಗುರಿಯಾಗಿಸಲಾಗುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಕೂಡ ಕಾಂಗ್ರೆಸ್‌ ಪಕ್ಷವು ಮಾಡುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರತ್ಯಾರೋಪವನ್ನು ಮಾಡಿದೆ.

ಆದಾಯ ತೆರಿಗೆ ಇಲಾಖೆಯು ತನ್ನ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಬಿಲ್‌ಗಳನ್ನು ಪಾವತಿಸಲು ಹಣವಿಲ್ಲ  ಎಂದು ಕಳೆದ ವಾರ ಕಾಂಗ್ರೆಸ್ ಹೇಳಿತ್ತು. ಅಧಿಕಾರದ ಅಮಲಿನಲ್ಲಿ ಮೋದಿ ಸರಕಾರವು ಲೋಕಸಭೆ ಚುನಾವಣೆಗೆ ಮುನ್ನವೇ ದೇಶದ ಅತಿದೊಡ್ಡ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದು ಭಾರತದ ಪ್ರಜಾಪ್ರಭುತ್ವದ ಮೇಲೆ ಆಳವಾದ ಆಕ್ರಮಣವಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.

65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆಯಿಂದ ವಿವಿಧ ಬ್ಯಾಂಕ್‌ಗಳಿಗೆ ಪತ್ರ

ತೆರಿಗೆ ಪಾವತಿ ವಿಳಂಬದ ಕಾರಣ ನೀಡಿ ಕಳೆದ ಶುಕ್ರವಾರ ಕಾಂಗ್ರೆಸ್ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಐಟಿ ಇಲಾಖೆಯ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿತ್ತು. ಪ್ರಾಧಿಕಾರವು ಮುಂದಿನ ವಿಚಾರಣೆಯವರೆಗೆ ಬ್ಯಾಂಕ್ ಖಾತೆ ಬಳಸಲು ಕಾಂಗ್ರೆಸ್‌ಗೆ ಅನುವು ಮಾಡಿಕೊಟ್ಟಿತ್ತು. ಇದರಿಂದ ಪಕ್ಷ ತಾತ್ಕಾಲಿಕ ನಿರಾಳವಾಗಿತ್ತು.

ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಪ್ರಕರಣ ಮೇಲ್ಮನವಿ ಪ್ರಾಧಿಕಾರದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ
ಕಾಂಗ್ರೆಸ್ ಮತ್ತು ಭಾರತೀಯ ಯುವ ಕಾಂಗ್ರೆಸ್‌, ಎನ್‌ಎಸ್‌ಯುಐಗೆ ಸೇರಿದ ವಿವಿಧ ಬ್ಯಾಂಕ್ ಖಾತೆಗಳಿಂದ 65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆ ವಿವಿಧ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ ಎಂದು ಮಾಕನ್ ಹೇಳಿದ್ದಾರೆ.

ಇದನ್ನು ಓದಿ: ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...