Homeಮುಖಪುಟಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

- Advertisement -
- Advertisement -

ಬಿಜೆಪಿ ಪಕ್ಷವು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳ್ಳತನ ಮಾಡುತ್ತಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ಅವರು ಹೇಳಿದ್ದು, ಐಟಿ ಇಲಾಖೆಯು ಕಾಂಗ್ರೆಸ್‌ನ ಖಾತೆಯಿಂದ 5.89 ಕೋಟಿ ಕಡಿತಗೊಳಿಸಿರುವ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಎಐಸಿಸಿ, ಭಾರತೀಯ ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಖಾತೆಗಳಿಂದ ಆದಾಯ ತೆರಿಗೆ ಇಲಾಖೆ 65.89 ಕೋಟಿ ಕಡಿತಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಕೆ.ಸಿ ವೇಣುಗೋಪಾಲ್‌ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳ್ಳತನ ಮಾಡುತ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದಾಗ ಬಿಜೆಪಿಯನ್ನು ಎಂದಿಗೂ ಈ ರೀತಿ ನಡೆಸಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ಅವರು (ಬಿಜೆಪಿ) ನಮ್ಮ ಹಣವನ್ನು ಬ್ಯಾಂಕ್‌ಗಳಿಂದ ಕದಿಯುತ್ತಿದ್ದಾರೆ. ನಾವೂ ಈ ದೇಶವನ್ನು ಆಳಿದ್ದೇವೆ. ಅಂತಹ ಯಾವುದೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಥವಾ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ರೀತಿಯಾಗಿ ಮಾಡಿರುವ ನಿದರ್ಶನ ಇದ್ದರೆ ಬಿಜೆಪಿ ಪ್ರಸ್ತುತಪಡಿಸಬಹುದು ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ರಾಜಕೀಯ ಪಕ್ಷವಾಗಿ ಬಿಜೆಪಿಯು ಯಾವತ್ತೂ ಆದಾಯ ತೆರಿಗೆ ಪಾವತಿ ಮಾಡಿಲ್ಲ ಎಂದ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್‌ ಪಕ್ಷದ ಆದಾಯ ತೆರಿಗೆ ಕಡಿತವು ಪ್ರಜಾಪ್ರಭುತ್ವದ ತತ್ವಗಳು ಮತ್ತು ಮೌಲ್ಯಗಳ ಮೇಲಿನ ದಾಳಿಯಾಗಿದೆ. ಅವರು ಭಾರತದ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ ಇದು ನಿಜಕ್ಕೂ ಸ್ಪಷ್ಟವಾಗಿ ಸರ್ವಾಧಿಕಾರದ ಉದಾಹರಣೆಯಾಗಿದೆ. ಬಿಜೆಪಿಗಿಂತ ಭಿನ್ನವಾಗಿ ಕಾಂಗ್ರೆಸ್ ಈ ಹಣವನ್ನು ಪಕ್ಷದ ಕಾರ್ಯಕರ್ತರಿಂದ ಪಡೆದುಕೊಂಡಿದೆ ಎಂದು ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಬ್ಯಾಂಕ್‌ಗಳ ಇತ್ತೀಚಿನ ಮಾಹಿತಿಯ ಪ್ರಕಾರ, ಬಿಜೆಪಿ ಸರ್ಕಾರವು ನಮ್ಮ ಠೇವಣಿಗಳಿಂದ ಸರಿಸುಮಾರು 65.89 ಕೋಟಿಗಳನ್ನು ಸರ್ಕಾರಕ್ಕೆ ವರ್ಗಾಯಿಸುವಂತೆ ಬ್ಯಾಂಕ್‌ಗಳನ್ನು ಒತ್ತಾಯಿಸಿದೆ. ಈ ಮೊತ್ತವು AICC ಮತ್ತು ಭಾರತೀಯ ಯುವ ಕಾಂಗ್ರೆಸ್ ಖಾತೆ ಮತ್ತು NSUIಯಿಂದ ಬಂದಿದೆ. ಬಿಜೆಪಿಗಿಂತ ಭಿನ್ನವಾಗಿ, ನಾವು ಈ ಹಣವನ್ನು ಪಕ್ಷದ ಸಾಮಾನ್ಯ ಕಾರ್ಯಕರ್ತರಿಂದ ಪಡೆದುಕೊಂಡಿದ್ದೇವೆ. ಸಂಸತ್ ಚುನಾವಣೆಗೆ ಮುನ್ನ, ಪ್ರಮುಖ ವಿರೋಧ ಪಕ್ಷದ ಖಾತೆಯನ್ನು ಬಿಜೆಪಿ ಸರ್ಕಾರ ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಬುಧವಾರ, ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಇದು ಆತಂಕಕಾರಿ ಬೆಳವಣಿಗೆ, ಕೇಂದ್ರ ಸರ್ಕಾರದ ಏಜೆನ್ಸಿಗಳ ಕ್ರಮಗಳ ಬಗ್ಗೆ ಕಳವಳ ಹೆಚ್ಚುತ್ತಿದೆ. ಭಾರತದಲ್ಲಿ ಬಹು ಪಕ್ಷ ವ್ಯವಸ್ಥೆಗೆ ಸಂಭಾವ್ಯ ಅಪಾಯವಿದೆ. ಇದನ್ನು ತಡೆಯದಿದ್ದರೆ, ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳಲಿದೆ. ನ್ಯಾಯಾಂಗದ ಮಧ್ಯಪ್ರವೇಶ ಇಲ್ಲವಾದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳೇ ನಾಶವಾಗಲಿವೆ ಎಂದು ಮಾಕನ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಬಾಕಿ ಇರುವ ತೆರಿಗೆ ವಸೂಲಾತಿ ವಿರುದ್ಧ ಕಾಂಗ್ರೆಸ್, ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಮೊರೆ ಹೋಗಿದೆ. ಕಾಂಗ್ರೆಸ್ ನಿಯಮಗಳನ್ನು ಉಲ್ಲಂಘಿಸಿದೆ ಮತ್ತು ಆದ್ದರಿಂದ ಸಾಮಾನ್ಯ ತೆರಿಗೆ ಪಾವತಿದಾರ ಎಂದು ಪರಿಗಣಿಸಲಾಗುತ್ತಿದೆ ಎಂದು ಇಲಾಖೆ ಬುಧವಾರ ನ್ಯಾಯಾಲಯಕ್ಕೆ ತಿಳಿಸಿದೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಗುರಿಯಾಗಿಸಲಾಗುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಕೂಡ ಕಾಂಗ್ರೆಸ್‌ ಪಕ್ಷವು ಮಾಡುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರತ್ಯಾರೋಪವನ್ನು ಮಾಡಿದೆ.

ಆದಾಯ ತೆರಿಗೆ ಇಲಾಖೆಯು ತನ್ನ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಬಿಲ್‌ಗಳನ್ನು ಪಾವತಿಸಲು ಹಣವಿಲ್ಲ  ಎಂದು ಕಳೆದ ವಾರ ಕಾಂಗ್ರೆಸ್ ಹೇಳಿತ್ತು. ಅಧಿಕಾರದ ಅಮಲಿನಲ್ಲಿ ಮೋದಿ ಸರಕಾರವು ಲೋಕಸಭೆ ಚುನಾವಣೆಗೆ ಮುನ್ನವೇ ದೇಶದ ಅತಿದೊಡ್ಡ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದು ಭಾರತದ ಪ್ರಜಾಪ್ರಭುತ್ವದ ಮೇಲೆ ಆಳವಾದ ಆಕ್ರಮಣವಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.

65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆಯಿಂದ ವಿವಿಧ ಬ್ಯಾಂಕ್‌ಗಳಿಗೆ ಪತ್ರ

ತೆರಿಗೆ ಪಾವತಿ ವಿಳಂಬದ ಕಾರಣ ನೀಡಿ ಕಳೆದ ಶುಕ್ರವಾರ ಕಾಂಗ್ರೆಸ್ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಐಟಿ ಇಲಾಖೆಯ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿತ್ತು. ಪ್ರಾಧಿಕಾರವು ಮುಂದಿನ ವಿಚಾರಣೆಯವರೆಗೆ ಬ್ಯಾಂಕ್ ಖಾತೆ ಬಳಸಲು ಕಾಂಗ್ರೆಸ್‌ಗೆ ಅನುವು ಮಾಡಿಕೊಟ್ಟಿತ್ತು. ಇದರಿಂದ ಪಕ್ಷ ತಾತ್ಕಾಲಿಕ ನಿರಾಳವಾಗಿತ್ತು.

ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಪ್ರಕರಣ ಮೇಲ್ಮನವಿ ಪ್ರಾಧಿಕಾರದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ
ಕಾಂಗ್ರೆಸ್ ಮತ್ತು ಭಾರತೀಯ ಯುವ ಕಾಂಗ್ರೆಸ್‌, ಎನ್‌ಎಸ್‌ಯುಐಗೆ ಸೇರಿದ ವಿವಿಧ ಬ್ಯಾಂಕ್ ಖಾತೆಗಳಿಂದ 65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆ ವಿವಿಧ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ ಎಂದು ಮಾಕನ್ ಹೇಳಿದ್ದಾರೆ.

ಇದನ್ನು ಓದಿ: ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...