Homeಮುಖಪುಟಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

ಕಾಂಗ್ರೆಸ್‌ನ ಬ್ಯಾಂಕ್ ಖಾತೆಯಿಂದ ಬಿಜೆಪಿ ಹಣ ಕಳ್ಳತನ ಮಾಡುತ್ತಿದೆ: ಆರೋಪ

- Advertisement -
- Advertisement -

ಬಿಜೆಪಿ ಪಕ್ಷವು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳ್ಳತನ ಮಾಡುತ್ತಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ಅವರು ಹೇಳಿದ್ದು, ಐಟಿ ಇಲಾಖೆಯು ಕಾಂಗ್ರೆಸ್‌ನ ಖಾತೆಯಿಂದ 5.89 ಕೋಟಿ ಕಡಿತಗೊಳಿಸಿರುವ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಎಐಸಿಸಿ, ಭಾರತೀಯ ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಖಾತೆಗಳಿಂದ ಆದಾಯ ತೆರಿಗೆ ಇಲಾಖೆ 65.89 ಕೋಟಿ ಕಡಿತಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಕೆ.ಸಿ ವೇಣುಗೋಪಾಲ್‌ ಭಾರತೀಯ ಜನತಾ ಪಕ್ಷವು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳಿಂದ ಹಣವನ್ನು ಕಳ್ಳತನ ಮಾಡುತ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದಾಗ ಬಿಜೆಪಿಯನ್ನು ಎಂದಿಗೂ ಈ ರೀತಿ ನಡೆಸಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ಅವರು (ಬಿಜೆಪಿ) ನಮ್ಮ ಹಣವನ್ನು ಬ್ಯಾಂಕ್‌ಗಳಿಂದ ಕದಿಯುತ್ತಿದ್ದಾರೆ. ನಾವೂ ಈ ದೇಶವನ್ನು ಆಳಿದ್ದೇವೆ. ಅಂತಹ ಯಾವುದೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಥವಾ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ರೀತಿಯಾಗಿ ಮಾಡಿರುವ ನಿದರ್ಶನ ಇದ್ದರೆ ಬಿಜೆಪಿ ಪ್ರಸ್ತುತಪಡಿಸಬಹುದು ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ರಾಜಕೀಯ ಪಕ್ಷವಾಗಿ ಬಿಜೆಪಿಯು ಯಾವತ್ತೂ ಆದಾಯ ತೆರಿಗೆ ಪಾವತಿ ಮಾಡಿಲ್ಲ ಎಂದ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್‌ ಪಕ್ಷದ ಆದಾಯ ತೆರಿಗೆ ಕಡಿತವು ಪ್ರಜಾಪ್ರಭುತ್ವದ ತತ್ವಗಳು ಮತ್ತು ಮೌಲ್ಯಗಳ ಮೇಲಿನ ದಾಳಿಯಾಗಿದೆ. ಅವರು ಭಾರತದ ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ ಇದು ನಿಜಕ್ಕೂ ಸ್ಪಷ್ಟವಾಗಿ ಸರ್ವಾಧಿಕಾರದ ಉದಾಹರಣೆಯಾಗಿದೆ. ಬಿಜೆಪಿಗಿಂತ ಭಿನ್ನವಾಗಿ ಕಾಂಗ್ರೆಸ್ ಈ ಹಣವನ್ನು ಪಕ್ಷದ ಕಾರ್ಯಕರ್ತರಿಂದ ಪಡೆದುಕೊಂಡಿದೆ ಎಂದು ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಬ್ಯಾಂಕ್‌ಗಳ ಇತ್ತೀಚಿನ ಮಾಹಿತಿಯ ಪ್ರಕಾರ, ಬಿಜೆಪಿ ಸರ್ಕಾರವು ನಮ್ಮ ಠೇವಣಿಗಳಿಂದ ಸರಿಸುಮಾರು 65.89 ಕೋಟಿಗಳನ್ನು ಸರ್ಕಾರಕ್ಕೆ ವರ್ಗಾಯಿಸುವಂತೆ ಬ್ಯಾಂಕ್‌ಗಳನ್ನು ಒತ್ತಾಯಿಸಿದೆ. ಈ ಮೊತ್ತವು AICC ಮತ್ತು ಭಾರತೀಯ ಯುವ ಕಾಂಗ್ರೆಸ್ ಖಾತೆ ಮತ್ತು NSUIಯಿಂದ ಬಂದಿದೆ. ಬಿಜೆಪಿಗಿಂತ ಭಿನ್ನವಾಗಿ, ನಾವು ಈ ಹಣವನ್ನು ಪಕ್ಷದ ಸಾಮಾನ್ಯ ಕಾರ್ಯಕರ್ತರಿಂದ ಪಡೆದುಕೊಂಡಿದ್ದೇವೆ. ಸಂಸತ್ ಚುನಾವಣೆಗೆ ಮುನ್ನ, ಪ್ರಮುಖ ವಿರೋಧ ಪಕ್ಷದ ಖಾತೆಯನ್ನು ಬಿಜೆಪಿ ಸರ್ಕಾರ ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಬುಧವಾರ, ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಇದು ಆತಂಕಕಾರಿ ಬೆಳವಣಿಗೆ, ಕೇಂದ್ರ ಸರ್ಕಾರದ ಏಜೆನ್ಸಿಗಳ ಕ್ರಮಗಳ ಬಗ್ಗೆ ಕಳವಳ ಹೆಚ್ಚುತ್ತಿದೆ. ಭಾರತದಲ್ಲಿ ಬಹು ಪಕ್ಷ ವ್ಯವಸ್ಥೆಗೆ ಸಂಭಾವ್ಯ ಅಪಾಯವಿದೆ. ಇದನ್ನು ತಡೆಯದಿದ್ದರೆ, ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಗೊಳ್ಳಲಿದೆ. ನ್ಯಾಯಾಂಗದ ಮಧ್ಯಪ್ರವೇಶ ಇಲ್ಲವಾದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳೇ ನಾಶವಾಗಲಿವೆ ಎಂದು ಮಾಕನ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಬಾಕಿ ಇರುವ ತೆರಿಗೆ ವಸೂಲಾತಿ ವಿರುದ್ಧ ಕಾಂಗ್ರೆಸ್, ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಮೊರೆ ಹೋಗಿದೆ. ಕಾಂಗ್ರೆಸ್ ನಿಯಮಗಳನ್ನು ಉಲ್ಲಂಘಿಸಿದೆ ಮತ್ತು ಆದ್ದರಿಂದ ಸಾಮಾನ್ಯ ತೆರಿಗೆ ಪಾವತಿದಾರ ಎಂದು ಪರಿಗಣಿಸಲಾಗುತ್ತಿದೆ ಎಂದು ಇಲಾಖೆ ಬುಧವಾರ ನ್ಯಾಯಾಲಯಕ್ಕೆ ತಿಳಿಸಿದೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಗುರಿಯಾಗಿಸಲಾಗುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಕೂಡ ಕಾಂಗ್ರೆಸ್‌ ಪಕ್ಷವು ಮಾಡುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರತ್ಯಾರೋಪವನ್ನು ಮಾಡಿದೆ.

ಆದಾಯ ತೆರಿಗೆ ಇಲಾಖೆಯು ತನ್ನ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಬಿಲ್‌ಗಳನ್ನು ಪಾವತಿಸಲು ಹಣವಿಲ್ಲ  ಎಂದು ಕಳೆದ ವಾರ ಕಾಂಗ್ರೆಸ್ ಹೇಳಿತ್ತು. ಅಧಿಕಾರದ ಅಮಲಿನಲ್ಲಿ ಮೋದಿ ಸರಕಾರವು ಲೋಕಸಭೆ ಚುನಾವಣೆಗೆ ಮುನ್ನವೇ ದೇಶದ ಅತಿದೊಡ್ಡ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದು ಭಾರತದ ಪ್ರಜಾಪ್ರಭುತ್ವದ ಮೇಲೆ ಆಳವಾದ ಆಕ್ರಮಣವಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.

65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆಯಿಂದ ವಿವಿಧ ಬ್ಯಾಂಕ್‌ಗಳಿಗೆ ಪತ್ರ

ತೆರಿಗೆ ಪಾವತಿ ವಿಳಂಬದ ಕಾರಣ ನೀಡಿ ಕಳೆದ ಶುಕ್ರವಾರ ಕಾಂಗ್ರೆಸ್ ಪಕ್ಷದ ವಿವಿಧ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಐಟಿ ಇಲಾಖೆಯ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿತ್ತು. ಪ್ರಾಧಿಕಾರವು ಮುಂದಿನ ವಿಚಾರಣೆಯವರೆಗೆ ಬ್ಯಾಂಕ್ ಖಾತೆ ಬಳಸಲು ಕಾಂಗ್ರೆಸ್‌ಗೆ ಅನುವು ಮಾಡಿಕೊಟ್ಟಿತ್ತು. ಇದರಿಂದ ಪಕ್ಷ ತಾತ್ಕಾಲಿಕ ನಿರಾಳವಾಗಿತ್ತು.

ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಪ್ರಕರಣ ಮೇಲ್ಮನವಿ ಪ್ರಾಧಿಕಾರದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ
ಕಾಂಗ್ರೆಸ್ ಮತ್ತು ಭಾರತೀಯ ಯುವ ಕಾಂಗ್ರೆಸ್‌, ಎನ್‌ಎಸ್‌ಯುಐಗೆ ಸೇರಿದ ವಿವಿಧ ಬ್ಯಾಂಕ್ ಖಾತೆಗಳಿಂದ 65 ಕೋಟಿ ಕಡಿತಗೊಳಿಸಲು ಆದಾಯ ತೆರಿಗೆ ಇಲಾಖೆ ವಿವಿಧ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ ಎಂದು ಮಾಕನ್ ಹೇಳಿದ್ದಾರೆ.

ಇದನ್ನು ಓದಿ: ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ನಿವಾಸದ ಮೇಲೆ ಸಿಬಿಐ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...