Homeಕರ್ನಾಟಕ'ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ' ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

‘ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ’ ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

- Advertisement -
- Advertisement -

”ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿಷಕನ್ಯೆ, ಮತ್ತೆ ಅವರು ಚೀನಾ ಪಾಕಿಸ್ತಾನದ ಎಜೆಂಟ್” ಎಂದು ಕೊಪ್ಪಳದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಾಲಿಗೆ ಹರಿಬಿಟ್ಟಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಯತ್ನಾಳ್, ”ಮೋದಿ ನಾಗರಹಾವು ಆದರೆ ಸೋನಿಯಾ ಗಾಂಧಿ ವಿಷಕನ್ಯೆನಾ?” ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ ”ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹುಚ್ಚ” ಎಂದು ಕರೆದಿದ್ದಾರೆ.

ಯತ್ನಾಳ್ ಹೇಳಿಕೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ”ಸೋನಿಯಾ ಗಾಂಧಿ ವಿಷಕನ್ಯೆ ಎಂಬ ಹೇಳಿಕೆ ಮೂಲಕ ಇಡೀ ಸ್ತ್ರೀ ಕುಲವನ್ನೇ ಅವಮಾನಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿಯಿಂದ ತಕ್ಷಣ ಉಚ್ಛಾಟಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ”ಯತ್ನಾಳ ಅವರು ಭಾರತದ ಎಲ್ಲ ಮಹಿಳೆಯರನ್ನು ಅವಮಾನಿಸಿದ್ದಾರೆ. ಈ ಘಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇಶದ ಕ್ಷಮೆ ಕೋರಬೇಕು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಕ್ಷಣವೇ ಯತ್ನಾಳ ಅವರನ್ನು ಉಚ್ಛಾಟಿಸಬೇಕು” ಎಂದು ಒತ್ತಾಯಿಸಿದ್ದಾರೆ.

”ಸೋನಿಯಾ ಅವರು ಈ ದೇಶದ ಅಖಂಡತೆ ಮತ್ತು ಸಮಗ್ರತೆಗಾಗಿ ಅತ್ತೆ ಹಾಗೂ ಗಂಡನನ್ನು ಕಳೆದುಕೊಂಡರು. ಎರಡು ಬಾರಿ ದೇಶದ ಪ್ರಧಾನಿ ಹುದ್ದೆ ಅಲಂಕರಿಸುವ ಅವಕಾಶ ಸಿಕ್ಕರೂ ಡಾ.ಮನಮೋಹನ್ ಸಿಂಗ್ ಅವರಂತಹ ಶ್ರೇಷ್ಠ ಆರ್ಥಿಕ ತಜ್ಞನಿಗೆ ಅವಕಾಶ ಕಲ್ಪಿಸಿದರು. ಅಂತಹ ಧೀಮಂತ ಮಹಿಳೆಯ ಕುರಿತು ಯತ್ನಾಳ ಕೀಳುಮಟ್ಟದ ಹೇಳಿಕೆ ನೀಡಿರುವುದು ಅಕ್ಷಮ್ಯ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

”ಯತ್ನಾಳ್, ನಿನ್ನ ಹೇಳಿಕೆಗೆ ಈ ರಾಜ್ಯದ ಜನರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೇಗೆ ಪ್ರತಿಕ್ರಿಯಿಸುತ್ತಾರೋ ನನಗಂತೂ ಗೊತ್ತಿಲ್ಲ” ಎಂದು ಏಕವಚನದಲ್ಲೇ ಎಚ್ಚರಿಕೆ ಡಿಕೆ ಶಿವಕುಮಾರ್ ನೀಡಿದ್ದಾರೆ.

”ನರೇಂದ್ರ ಮೋದಿಯವರು ಗುರುವಾರ ವರ್ಚ್ಯುಯಲ್ ಸಭೆ ನಡೆಸಿದ್ದಾರೆ. 50 ಲಕ್ಷ ಜನರನ್ನು ಉದ್ದೇಶಿಸಿ ಮಾತನಾಡಿರುವುದಾಗಿ ಹೇಳಿಕೊಂಡಿದ್ದಾರೆ. ಈ ಸಭೆಗೆ ಅನುಮತಿ ನೀಡಲಾಗಿತ್ತೆ? ಸಭೆಯ ವೆಚ್ಚದ ವಿವರವನ್ನು ಯಾರ ಲೆಕ್ಕಕ್ಕೆ ಸೇರಿಸಲಾಗುತ್ತದೆ ಎಂಬುದನ್ನು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು. ಈ ಕುರಿತು ಕ್ರಮ ಕೈಗೊಳ್ಳಬೇಕು” ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಈ ಬಗ್ಗೆ ಕಾಂಗ್ರೆಸ್ ಘಟಕ ಸರಣಿ ಟ್ವೀಟ್ ಮಾಡಿದ್ದು, ”ಯತ್ನಾಳರ “ವಿಷಕನ್ಯೆ” ಹೇಳಿಕೆಗೆ ನರೇಂದ್ರ ಮೋದಿ ಅವರ ಅನುಮೋದನೆ ಇರಬಹುದೇನೋ, ಅವರದ್ದೂ ಇದೇ ಮನಸ್ಥಿತಿಯಲ್ಲವೇ! ಕಾಂಗ್ರೆಸ್ಸಿನ ವಿಧವೆ, ಜರ್ಸಿ ಹಸು, ವಿಷಕನ್ಯೆ, ಶ್ರೀಮತಿ ಸೋನಿಯಾ ಗಾಂಧಿಯವರ ಬಿಜೆಪಿ ಪ್ರಯೋಗಿಸುವ ಅತ್ಯಂತ ಕೀಳು ಪದಗಳು ಇನ್ನೆಷ್ಟಿವೆ? ಸಿಎಂ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ ಯತ್ನಾಳ್ ಈ ಹೇಳಿಕೆ ನೀಡಿದರೆ?” ಎಂದು ಪ್ರಶ್ನಿಸಿದೆ.

”ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯು ಈ ದೇಶದ ಸಂಸ್ಕೃತಿಗೆ ದಕ್ಕೆ ತರುವಂತಹದ್ದು. ಅವರ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಸಿಎಂ ಬಸವರಾಜಬೊಮ್ಮಾಯಿ ಅವರು ಸೋನಿಯಾ ಗಾಂಧಿಯವರ ಹಾಗೂ ಈ ದೇಶದ ಸಮಸ್ತ ಮಹಿಳೆಯರಲ್ಲಿ ಮಂಡಿಯೂರಿ ಕ್ಷಮೆ ಕೇಳಬೇಕು. ಇದು ಸೋನಿಯಾ ಗಾಂಧಿಯವರೊಬ್ಬರ ಪ್ರಶ್ನೆಯಲ್ಲ, ಇಡೀ ಸ್ತ್ರೀಕುಲದ ಘನತೆಯ ಪ್ರಶ್ನೆ” ಕಾಂಗ್ರೆಸ್ ಆಗ್ರಹಿಸಿದೆ.

”ಬಾರ್ ಡ್ಯಾನ್ಸರ್, ಕಾಂಗ್ರೆಸ್‌ನ ವಿಧವೆ, ಜರ್ಸಿ ಹಸು, ವಿಷಕನ್ಯೆ.. ಬಿಜೆಪಿಗರಿಂದ ಈ ರೀತಿಯ ಕೀಳು ಮಟ್ಟದ ನಿಂದನೆಗೆ ಒಳಗಾಗುತ್ತಿರುವ ಶ್ರೀಮತಿ ಸೋನಿಯಾ ಗಾಂಧಿಯವರು ಮಾಡಿದ ಅಪರಾದವಾದರೂ ಏನು? ಅವರು ಭಾರತದ ಸಂಸ್ಕೃತಿ ಅಳವಡಿಸಿಕೊಂಡು ಬದುಕುತ್ತಿರುವುದು ತಪ್ಪೇ? ದೇಶಕ್ಕಾಗಿ ಪತಿಯನ್ನು ಕಳೆದುಕೊಂಡಿದ್ದು ತಪ್ಪೇ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...