Homeಮುಖಪುಟಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ 'ಶುದ್ಧೀಕರಣ' ಮಾಡಿದ ಬಿಜೆಪಿ ಶಾಸಕ!

ಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ ‘ಶುದ್ಧೀಕರಣ’ ಮಾಡಿದ ಬಿಜೆಪಿ ಶಾಸಕ!

- Advertisement -
- Advertisement -

ಜೈಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ತಮ್ಮ ಪಕ್ಷ ಅಧಿಕಾರ ಹಿಡಿಯಲು ಸಹಾಯ ಮಾಡಿದ ಕಾಂಗ್ರೆಸ್ ಪಕ್ಷದಿಂದ ಪಕ್ಷಾಂತರವಾದ ಕೌನ್ಸಿಲರ್‌ಗಳಿಗೆ ಗೋಮೂತ್ರ ಮತ್ತು ಗಂಗಾಜಲ ಕುಡಿಸಿ ‘ಶುದ್ಧೀಕರಣ ಸಮಾರಂಭ’ವನ್ನು ಬಿಜೆಪಿ ಶಾಸಕರೊಬ್ಬರು ನಡೆಸಿದ ಘಟನೆ ನಡೆದಿದೆ. ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ಹೆರಿಟೇಜ್ (ಜೆಎಂಸಿಎಚ್) ನ ಹೊಸ ಮೇಯರ್ ಆಗಿ ಕುಸುಮ್ ಯಾದವ್ ಅವರು ಅಧಿಕಾರ ವಹಿಸಿದ್ದು, ಈ ವೇಳೆ ಘಟನೆ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರದಂದು ಗಂಗಾಜಲ ಮತ್ತು ಗೋಮೂತ್ರವನ್ನು ಒಳಗೊಂಡ ಶುದ್ಧೀಕರಣ ಆಚರಣೆಯ ನಂತರ ಕುಸುಮ್ ಯಾದವ್ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಸಲಾಗಿತ್ತು.

ವೇದ ಮಂತ್ರಗಳೊಂದಿಗೆ ನಡೆದ ಶುದ್ಧೀಕರಣ ಸಮಾರಂಭವು ಹತೋಜ್ ಧಾಮ್ ದೇವಾಲಯದ ಪೂಜಾರಿ ಕೂಡಾ ಆಗಿರುವ ಬಲ್ಮುಕುಂದ್ ಆಚಾರ್ಯ ಅವರು ಕುಸುಮ್‌ ಯಾದವ್ ಮಾತ್ರವಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಪಕ್ಷಾಂತರಗೊಂಡ ಕೆಲವು ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ಕೂಡಾ ಸಾಂಕೇತಿಕವಾಗಿ ಶುದ್ಧೀಕರಿಸಿದ್ದಾರೆ.

‘ಶುದ್ಧೀಕರಣ ಪ್ರಕ್ರಿಯೆ’ಯ ಅಂಗವಾಗಿ ಕೌನ್ಸಿಲರ್‌ಗಳು ಮತ್ತು ಅಧಿಕಾರಿಗಳಿಗೆ ಸಾಂಕೇತಿಕವಾಗಿ ಗಂಗಾಜಲ ಮತ್ತು ಗೋಮೂತ್ರವನ್ನು ‘ಕುಡಿಯುವಂತೆ’ ಮಾಡಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂಓದಿ: ‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

ಭ್ರಷ್ಟಾಚಾರ ಆರೋಪದ ಕಾರಣದಿಂದ ಪದಚ್ಯುತಗೊಂಡಿದ್ದ ಕಾಂಗ್ರೆಸ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ಪದಚ್ಯುತಗೊಳಿಸಿದ ಬೆನ್ನಲ್ಲೇ ಕುಸುಮ್ ಯಾದವ್ ಅವರನ್ನು ಮೇಯರ್ ಆಗಿ ನೇಮಕ ಮಾಡಲಾಗಿತ್ತು. ಕುಸುಮ್‌ ಯಾದವ್ ಅವರು ಏಳು ಕಾಂಗ್ರೆಸ್ ಕೌನ್ಸಿಲರ್‌ಗಳು ಮತ್ತು ಸ್ವತಂತ್ರ ಸದಸ್ಯರ ಬೆಂಬಲದೊಂದಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು. ಕೌನ್ಸಿಲರ್‌ಗಳಿಗೆ ಗೋಮೂತ್ರ

ಆಪಾದಿತ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಶುದ್ಧೀಕರಿಸಲು ಶುದ್ಧೀಕರಣ ಸಮಾರಂಭ ಅಗತ್ಯ ಎಂದು ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿವರಿಸಿದ್ದಾರೆ. “ನಾವು ಪಾಲಿಕೆಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದೇವೆ, ಎಲ್ಲಾ ಕಲ್ಮಶಗಳನ್ನು ತೆಗೆದುಹಾಕಿದ್ದೇವೆ. ಈಗ ಬಿಜೆಪಿಯನ್ನು ಬೆಂಬಲಿಸಿದ ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ‘ಸನಾತನಿ’ಗಳನ್ನಾಗಿ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ತನ್ನ ಮಹಾ ಶುದ್ಧೀಕರಣ ಸಮಾರಂಭದಿಂದಾಗಿ ಇಡೀ ಜೈಪುರ ಮುನ್ಸಿಪಲ್ ಕಾರ್ಪೊರೇಶನ್ ಅನ್ನು ‘ಭ್ರಷ್ಟಾಚಾರ ಮುಕ್ತ’ ಮಾಡಲಾಗಿದೆ ಎಂದು ಅವರು ಹೇಳಿಕೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು ಶಾಸಕ ಆಚಾರ್ಯ ಅವರ ಕೃತ್ಯಗಳನ್ನು ತೀವ್ರವಾಗಿ ಖಂಡಿಸಿದ್ದು, ಅವರ ಅಧಿಕಾರವನ್ನು ಪ್ರಶ್ನಿಸಿದ್ದಾರೆ. “ನೀವು ಶಾಸಕರಾಗಿದ್ದೀರಿ, ಆಧ್ಯಾತ್ಮಿಕ ನಾಯಕರಲ್ಲ. ಕಾಂಗ್ರೆಸ್ ಕೌನ್ಸಿಲರ್‌ಗಳು ಈಗ ಶುದ್ಧ ಮತ್ತು ಸನಾತನಿಗಳು ಎಂದು ನೀವು ಹೇಗೆ ಘೋಷಿಸುತ್ತೀರಿ? ಬಲ್ಮುಕುಂದ್ ಆಚಾರ್ಯ ಸನಾತನ ಧರ್ಮದ ಸ್ವಯಂ ಪ್ರೇರಿತ ರಕ್ಷಕರೆ?” ಎಂದು ಕೇಳಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...