Homeಮುಖಪುಟಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ 'ಶುದ್ಧೀಕರಣ' ಮಾಡಿದ ಬಿಜೆಪಿ ಶಾಸಕ!

ಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ ‘ಶುದ್ಧೀಕರಣ’ ಮಾಡಿದ ಬಿಜೆಪಿ ಶಾಸಕ!

- Advertisement -
- Advertisement -

ಜೈಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ತಮ್ಮ ಪಕ್ಷ ಅಧಿಕಾರ ಹಿಡಿಯಲು ಸಹಾಯ ಮಾಡಿದ ಕಾಂಗ್ರೆಸ್ ಪಕ್ಷದಿಂದ ಪಕ್ಷಾಂತರವಾದ ಕೌನ್ಸಿಲರ್‌ಗಳಿಗೆ ಗೋಮೂತ್ರ ಮತ್ತು ಗಂಗಾಜಲ ಕುಡಿಸಿ ‘ಶುದ್ಧೀಕರಣ ಸಮಾರಂಭ’ವನ್ನು ಬಿಜೆಪಿ ಶಾಸಕರೊಬ್ಬರು ನಡೆಸಿದ ಘಟನೆ ನಡೆದಿದೆ. ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ಹೆರಿಟೇಜ್ (ಜೆಎಂಸಿಎಚ್) ನ ಹೊಸ ಮೇಯರ್ ಆಗಿ ಕುಸುಮ್ ಯಾದವ್ ಅವರು ಅಧಿಕಾರ ವಹಿಸಿದ್ದು, ಈ ವೇಳೆ ಘಟನೆ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರದಂದು ಗಂಗಾಜಲ ಮತ್ತು ಗೋಮೂತ್ರವನ್ನು ಒಳಗೊಂಡ ಶುದ್ಧೀಕರಣ ಆಚರಣೆಯ ನಂತರ ಕುಸುಮ್ ಯಾದವ್ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಸಲಾಗಿತ್ತು.

ವೇದ ಮಂತ್ರಗಳೊಂದಿಗೆ ನಡೆದ ಶುದ್ಧೀಕರಣ ಸಮಾರಂಭವು ಹತೋಜ್ ಧಾಮ್ ದೇವಾಲಯದ ಪೂಜಾರಿ ಕೂಡಾ ಆಗಿರುವ ಬಲ್ಮುಕುಂದ್ ಆಚಾರ್ಯ ಅವರು ಕುಸುಮ್‌ ಯಾದವ್ ಮಾತ್ರವಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಪಕ್ಷಾಂತರಗೊಂಡ ಕೆಲವು ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ಕೂಡಾ ಸಾಂಕೇತಿಕವಾಗಿ ಶುದ್ಧೀಕರಿಸಿದ್ದಾರೆ.

‘ಶುದ್ಧೀಕರಣ ಪ್ರಕ್ರಿಯೆ’ಯ ಅಂಗವಾಗಿ ಕೌನ್ಸಿಲರ್‌ಗಳು ಮತ್ತು ಅಧಿಕಾರಿಗಳಿಗೆ ಸಾಂಕೇತಿಕವಾಗಿ ಗಂಗಾಜಲ ಮತ್ತು ಗೋಮೂತ್ರವನ್ನು ‘ಕುಡಿಯುವಂತೆ’ ಮಾಡಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂಓದಿ: ‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

ಭ್ರಷ್ಟಾಚಾರ ಆರೋಪದ ಕಾರಣದಿಂದ ಪದಚ್ಯುತಗೊಂಡಿದ್ದ ಕಾಂಗ್ರೆಸ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ಪದಚ್ಯುತಗೊಳಿಸಿದ ಬೆನ್ನಲ್ಲೇ ಕುಸುಮ್ ಯಾದವ್ ಅವರನ್ನು ಮೇಯರ್ ಆಗಿ ನೇಮಕ ಮಾಡಲಾಗಿತ್ತು. ಕುಸುಮ್‌ ಯಾದವ್ ಅವರು ಏಳು ಕಾಂಗ್ರೆಸ್ ಕೌನ್ಸಿಲರ್‌ಗಳು ಮತ್ತು ಸ್ವತಂತ್ರ ಸದಸ್ಯರ ಬೆಂಬಲದೊಂದಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು. ಕೌನ್ಸಿಲರ್‌ಗಳಿಗೆ ಗೋಮೂತ್ರ

ಆಪಾದಿತ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಶುದ್ಧೀಕರಿಸಲು ಶುದ್ಧೀಕರಣ ಸಮಾರಂಭ ಅಗತ್ಯ ಎಂದು ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿವರಿಸಿದ್ದಾರೆ. “ನಾವು ಪಾಲಿಕೆಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದೇವೆ, ಎಲ್ಲಾ ಕಲ್ಮಶಗಳನ್ನು ತೆಗೆದುಹಾಕಿದ್ದೇವೆ. ಈಗ ಬಿಜೆಪಿಯನ್ನು ಬೆಂಬಲಿಸಿದ ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ‘ಸನಾತನಿ’ಗಳನ್ನಾಗಿ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ತನ್ನ ಮಹಾ ಶುದ್ಧೀಕರಣ ಸಮಾರಂಭದಿಂದಾಗಿ ಇಡೀ ಜೈಪುರ ಮುನ್ಸಿಪಲ್ ಕಾರ್ಪೊರೇಶನ್ ಅನ್ನು ‘ಭ್ರಷ್ಟಾಚಾರ ಮುಕ್ತ’ ಮಾಡಲಾಗಿದೆ ಎಂದು ಅವರು ಹೇಳಿಕೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು ಶಾಸಕ ಆಚಾರ್ಯ ಅವರ ಕೃತ್ಯಗಳನ್ನು ತೀವ್ರವಾಗಿ ಖಂಡಿಸಿದ್ದು, ಅವರ ಅಧಿಕಾರವನ್ನು ಪ್ರಶ್ನಿಸಿದ್ದಾರೆ. “ನೀವು ಶಾಸಕರಾಗಿದ್ದೀರಿ, ಆಧ್ಯಾತ್ಮಿಕ ನಾಯಕರಲ್ಲ. ಕಾಂಗ್ರೆಸ್ ಕೌನ್ಸಿಲರ್‌ಗಳು ಈಗ ಶುದ್ಧ ಮತ್ತು ಸನಾತನಿಗಳು ಎಂದು ನೀವು ಹೇಗೆ ಘೋಷಿಸುತ್ತೀರಿ? ಬಲ್ಮುಕುಂದ್ ಆಚಾರ್ಯ ಸನಾತನ ಧರ್ಮದ ಸ್ವಯಂ ಪ್ರೇರಿತ ರಕ್ಷಕರೆ?” ಎಂದು ಕೇಳಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...