Homeಮುಖಪುಟಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ -ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ -ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

‘ತೃಣಮೂಲ ಕಾಂಗ್ರೆಸ್ (ಟಿಎಂಸಿ) ದೆಹಲಿಯನ್ನು ಗೆಲ್ಲುತ್ತದೆ; ಮುಂಬರುವ ಲೋಕಸಭೆ ಚುನಾವಣೆ ನಂತರ ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಒಂದೇ ಛತ್ರಿ ಅಡಿಯಲ್ಲಿ ತರುತ್ತದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಂಗಾಳದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಮಾ, ಮತಿ, ಮಾನುಷ್ (ತಾಯಿ, ಭೂಮಿ, ಜನರು) ನ ಮೂಲ ಮೌಲ್ಯಗಳಿಗೆ ನಮ್ಮ ಪಕ್ಷ ಬದ್ಧವಾಗಿದೆ. ಟಿಎಂಸಿ ಬಂಗಾಳವನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಜೊತೆಗೆ, ರಾಷ್ಟ್ರದ ರಾಜಧಾನಿಗೆ ತನ್ನ ಪ್ರಭಾವವನ್ನು ವಿಸ್ತರಿಸುತ್ತದೆ’ ಎಂದರು.

ಲೋಕಸಭೆ ಚುನಾವಣೆ ನಂತರದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ತಮ್ಮ ಆಲೋಚನೆ ಕುರಿತು ಒತ್ತಿಹೇಳಿದರು. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಸೇರಿದಂತೆ ಇಂಡಿಯಾ ಬ್ಲಾಕ್ ಮೈತ್ರಿಯಲ್ಲಿನ ಸಂಭಾವ್ಯ ಬದಲಾವಣೆಯ ಬಗ್ಗೆ ಸುಳಿವು ನೀಡಿದರು.

‘ಜನರು ನಮ್ಮೊಂದಿಗಿದ್ದಾರೆ; ನಾವು ಅವರಿಗೆ ಭರವಸೆ ನೀಡುತ್ತೇವೆ… ನಾವು ದೆಹಲಿಯನ್ನು ಗೆಲ್ಲುತ್ತೇವೆ. ಚುನಾವಣೆಯ ನಂತರ ನಾವು ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಒಟ್ಟಿಗೆ ತೆಗೆದುಕೊಂಡು ಗುರಿ ಸಾಧಿಸುತ್ತೇವೆ’ ಎಂದು ಮುಖ್ಯಮಂತ್ರಿ ಬ್ಯಾನರ್ಜಿ ಹೇಳಿದರು.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ಯಾನರ್ಜಿ ಅವರು, ‘ಈ ನಿರ್ಧಾರಗಳು ಮತದಾರರನ್ನು ಪ್ರತ್ಯೇಕಿಸುವ ಗುರಿಯನ್ನು ಹೊಂದಿವೆ. ಈ ರಾಜಕೀಯ ಯೋಜನೆಗಳನ್ನು ನಂಬಬೇಡಿ’ ಎಂದು ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು. ‘ಬಿಜೆಪಿಯು ಚುನಾವಣೆಗಳನ್ನು ಗೆಲ್ಲಲು ಇಂತಹ ಕ್ರಮಗಳನ್ನು ಬಳಸುತ್ತಿದೆ’ ಎಂದು ಅವರು ಆರೋಪಿಸಿದರು.

‘ದಯವಿಟ್ಟು ನೆನಪಿಡಿ, ಇಲ್ಲಿ ಎನ್ಆರ್‌ಸಿ ಜಾರಿಗೆ ತರಲು ನಾನು ಅವರಿಗೆ ಅವಕಾಶ ನೀಡುವುದಿಲ್ಲ. ಅವರು ಸಿಎಎ ಹೆಸರಿನಲ್ಲಿ ಸುಳ್ಳು ಹೇಳುತ್ತಿದ್ದಾರೆ. ಇದು ಅವರ ರಾಜಕೀಯ ಯೋಜನೆಗಳು, ಅವರನ್ನು ನಂಬಬೇಡಿ, ಅವರು ನಿಮ್ಮೆಲ್ಲರನ್ನು ಪ್ರತ್ಯೇಕಿಸಲು ಬಯಸುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

‘ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ ಮತ್ತು ಎಡಪಕ್ಷಗಳು ಮೈತ್ರಿ ಮಾಡಿಕೊಳ್ಳುತ್ತಿವೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆರೋಪಿಸಿದರು. ಎಡಪಕ್ಷಗಳ ಹಸ್ತಕ್ಷೇಪದಿಂದಾಗಿ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಚರ್ಚೆ ವಿಫಲವಾಗಿದೆ ಎಂದು ದೂರಿದರು.

‘ನೀವು ಯಾರನ್ನು ಆರಿಸುತ್ತೀರಿ, 365 ದಿನಗಳು ನಿಮ್ಮೊಂದಿಗೆ ಇರುವವರನ್ನು ಅಥವಾ ಋತುಮಾನದ ಹಕ್ಕಿಯಂತೆ ಬರುವವರನ್ನು? ನೆನಪಿಡಿ ನಾವು ದೆಹಲಿಯನ್ನು ಗೆಲ್ಲುತ್ತೇವೆ. ಬಂಗಾಳವು ದೆಹಲಿಯನ್ನು ಗೆಲ್ಲುವ ಮಾರ್ಗವನ್ನು ತೋರಿಸುತ್ತದೆ. ನಾವು ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತೇವೆ. ನಾವು ಮೈತ್ರಿ ಬಯಸಿದ್ದೇವೆ; ಆದರೆ ಕಾಂಗ್ರೆಸ್ ಅದನ್ನು ಮಾಡಲಿಲ್ಲ, ಬದಲಿಗೆ ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ’ ಎಂದು ಅವರು ಆರೋಪಿಸಿದ್ದಾರೆ.

ಭೂ ಹಗರಣದ ಆರೋಪದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಬಗ್ಗೆ ಮಾತನಾಡಿ, ‘ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಬಂಧಿಸುತ್ತಿದೆ’ ಎಂದು ಕಿಡಿಕಾರಿದರು.

‘ಈ ದೇಶದಲ್ಲಿ ಪ್ರತಿಪಕ್ಷದ ನಾಯಕರೆಲ್ಲ ಜೈಲಿಗೆ ಹಾಕಲ್ಪಡುತ್ತಾರೆ. ನನ್ನನ್ನು ಜೈಲಿಗೆ ಹಾಕಿದರೆ ನಾನು ಹೊರಗೆ ಬರುತ್ತೇನೆ. ನೆನಪಿರಲಿ.. ಚುನಾವಣೆ ಗೆಲ್ಲವುದಕ್ಕಾಗಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದ್ದಾರೆ. ನಾವು ಕಳ್ಳರೇ, ಅವರು ಪುಣ್ಯಾತ್ಮರೇ? ಇಂದು ಅಧಿಕಾರದಲ್ಲಿದ್ದಾರೆ.. ಆದ್ದರಿಂದ ಅವರು ಏಜೆನ್ಸಿಗಳನ್ನು ಹೊಂದಿದ್ದಾರೆ, ನಾಳೆ ಅವರು ಅಧಿಕಾರದಲ್ಲಿ ಇರುವುದಿಲ್ಲ, ಎಲ್ಲಾ ಏಜೆನ್ಸಿಗಳು ಕಣ್ಮರೆಯಾಗುತ್ತವೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

2019ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 22 ಲೋಕಸಭಾ ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿತು ಮತ್ತು ಬಿಜೆಪಿ ಪಶ್ಚಿಮ ಬಂಗಾಳದಲ್ಲಿ 18 ಸ್ಥಾನಗಳನ್ನು ಗಳಿಸಿತು.

ಇದನ್ನೂ ಓದಿ; ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...