Homeಮುಖಪುಟಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ -ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ -ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

‘ತೃಣಮೂಲ ಕಾಂಗ್ರೆಸ್ (ಟಿಎಂಸಿ) ದೆಹಲಿಯನ್ನು ಗೆಲ್ಲುತ್ತದೆ; ಮುಂಬರುವ ಲೋಕಸಭೆ ಚುನಾವಣೆ ನಂತರ ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಒಂದೇ ಛತ್ರಿ ಅಡಿಯಲ್ಲಿ ತರುತ್ತದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಂಗಾಳದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಮಾ, ಮತಿ, ಮಾನುಷ್ (ತಾಯಿ, ಭೂಮಿ, ಜನರು) ನ ಮೂಲ ಮೌಲ್ಯಗಳಿಗೆ ನಮ್ಮ ಪಕ್ಷ ಬದ್ಧವಾಗಿದೆ. ಟಿಎಂಸಿ ಬಂಗಾಳವನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಜೊತೆಗೆ, ರಾಷ್ಟ್ರದ ರಾಜಧಾನಿಗೆ ತನ್ನ ಪ್ರಭಾವವನ್ನು ವಿಸ್ತರಿಸುತ್ತದೆ’ ಎಂದರು.

ಲೋಕಸಭೆ ಚುನಾವಣೆ ನಂತರದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ತಮ್ಮ ಆಲೋಚನೆ ಕುರಿತು ಒತ್ತಿಹೇಳಿದರು. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಸೇರಿದಂತೆ ಇಂಡಿಯಾ ಬ್ಲಾಕ್ ಮೈತ್ರಿಯಲ್ಲಿನ ಸಂಭಾವ್ಯ ಬದಲಾವಣೆಯ ಬಗ್ಗೆ ಸುಳಿವು ನೀಡಿದರು.

‘ಜನರು ನಮ್ಮೊಂದಿಗಿದ್ದಾರೆ; ನಾವು ಅವರಿಗೆ ಭರವಸೆ ನೀಡುತ್ತೇವೆ… ನಾವು ದೆಹಲಿಯನ್ನು ಗೆಲ್ಲುತ್ತೇವೆ. ಚುನಾವಣೆಯ ನಂತರ ನಾವು ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಒಟ್ಟಿಗೆ ತೆಗೆದುಕೊಂಡು ಗುರಿ ಸಾಧಿಸುತ್ತೇವೆ’ ಎಂದು ಮುಖ್ಯಮಂತ್ರಿ ಬ್ಯಾನರ್ಜಿ ಹೇಳಿದರು.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ಯಾನರ್ಜಿ ಅವರು, ‘ಈ ನಿರ್ಧಾರಗಳು ಮತದಾರರನ್ನು ಪ್ರತ್ಯೇಕಿಸುವ ಗುರಿಯನ್ನು ಹೊಂದಿವೆ. ಈ ರಾಜಕೀಯ ಯೋಜನೆಗಳನ್ನು ನಂಬಬೇಡಿ’ ಎಂದು ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು. ‘ಬಿಜೆಪಿಯು ಚುನಾವಣೆಗಳನ್ನು ಗೆಲ್ಲಲು ಇಂತಹ ಕ್ರಮಗಳನ್ನು ಬಳಸುತ್ತಿದೆ’ ಎಂದು ಅವರು ಆರೋಪಿಸಿದರು.

‘ದಯವಿಟ್ಟು ನೆನಪಿಡಿ, ಇಲ್ಲಿ ಎನ್ಆರ್‌ಸಿ ಜಾರಿಗೆ ತರಲು ನಾನು ಅವರಿಗೆ ಅವಕಾಶ ನೀಡುವುದಿಲ್ಲ. ಅವರು ಸಿಎಎ ಹೆಸರಿನಲ್ಲಿ ಸುಳ್ಳು ಹೇಳುತ್ತಿದ್ದಾರೆ. ಇದು ಅವರ ರಾಜಕೀಯ ಯೋಜನೆಗಳು, ಅವರನ್ನು ನಂಬಬೇಡಿ, ಅವರು ನಿಮ್ಮೆಲ್ಲರನ್ನು ಪ್ರತ್ಯೇಕಿಸಲು ಬಯಸುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

‘ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ ಮತ್ತು ಎಡಪಕ್ಷಗಳು ಮೈತ್ರಿ ಮಾಡಿಕೊಳ್ಳುತ್ತಿವೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆರೋಪಿಸಿದರು. ಎಡಪಕ್ಷಗಳ ಹಸ್ತಕ್ಷೇಪದಿಂದಾಗಿ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಚರ್ಚೆ ವಿಫಲವಾಗಿದೆ ಎಂದು ದೂರಿದರು.

‘ನೀವು ಯಾರನ್ನು ಆರಿಸುತ್ತೀರಿ, 365 ದಿನಗಳು ನಿಮ್ಮೊಂದಿಗೆ ಇರುವವರನ್ನು ಅಥವಾ ಋತುಮಾನದ ಹಕ್ಕಿಯಂತೆ ಬರುವವರನ್ನು? ನೆನಪಿಡಿ ನಾವು ದೆಹಲಿಯನ್ನು ಗೆಲ್ಲುತ್ತೇವೆ. ಬಂಗಾಳವು ದೆಹಲಿಯನ್ನು ಗೆಲ್ಲುವ ಮಾರ್ಗವನ್ನು ತೋರಿಸುತ್ತದೆ. ನಾವು ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತೇವೆ. ನಾವು ಮೈತ್ರಿ ಬಯಸಿದ್ದೇವೆ; ಆದರೆ ಕಾಂಗ್ರೆಸ್ ಅದನ್ನು ಮಾಡಲಿಲ್ಲ, ಬದಲಿಗೆ ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ’ ಎಂದು ಅವರು ಆರೋಪಿಸಿದ್ದಾರೆ.

ಭೂ ಹಗರಣದ ಆರೋಪದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಬಗ್ಗೆ ಮಾತನಾಡಿ, ‘ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಬಂಧಿಸುತ್ತಿದೆ’ ಎಂದು ಕಿಡಿಕಾರಿದರು.

‘ಈ ದೇಶದಲ್ಲಿ ಪ್ರತಿಪಕ್ಷದ ನಾಯಕರೆಲ್ಲ ಜೈಲಿಗೆ ಹಾಕಲ್ಪಡುತ್ತಾರೆ. ನನ್ನನ್ನು ಜೈಲಿಗೆ ಹಾಕಿದರೆ ನಾನು ಹೊರಗೆ ಬರುತ್ತೇನೆ. ನೆನಪಿರಲಿ.. ಚುನಾವಣೆ ಗೆಲ್ಲವುದಕ್ಕಾಗಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದ್ದಾರೆ. ನಾವು ಕಳ್ಳರೇ, ಅವರು ಪುಣ್ಯಾತ್ಮರೇ? ಇಂದು ಅಧಿಕಾರದಲ್ಲಿದ್ದಾರೆ.. ಆದ್ದರಿಂದ ಅವರು ಏಜೆನ್ಸಿಗಳನ್ನು ಹೊಂದಿದ್ದಾರೆ, ನಾಳೆ ಅವರು ಅಧಿಕಾರದಲ್ಲಿ ಇರುವುದಿಲ್ಲ, ಎಲ್ಲಾ ಏಜೆನ್ಸಿಗಳು ಕಣ್ಮರೆಯಾಗುತ್ತವೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

2019ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 22 ಲೋಕಸಭಾ ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿತು ಮತ್ತು ಬಿಜೆಪಿ ಪಶ್ಚಿಮ ಬಂಗಾಳದಲ್ಲಿ 18 ಸ್ಥಾನಗಳನ್ನು ಗಳಿಸಿತು.

ಇದನ್ನೂ ಓದಿ; ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...