Homeಮುಖಪುಟಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ -ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ -ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

‘ತೃಣಮೂಲ ಕಾಂಗ್ರೆಸ್ (ಟಿಎಂಸಿ) ದೆಹಲಿಯನ್ನು ಗೆಲ್ಲುತ್ತದೆ; ಮುಂಬರುವ ಲೋಕಸಭೆ ಚುನಾವಣೆ ನಂತರ ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಒಂದೇ ಛತ್ರಿ ಅಡಿಯಲ್ಲಿ ತರುತ್ತದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಂಗಾಳದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಮಾ, ಮತಿ, ಮಾನುಷ್ (ತಾಯಿ, ಭೂಮಿ, ಜನರು) ನ ಮೂಲ ಮೌಲ್ಯಗಳಿಗೆ ನಮ್ಮ ಪಕ್ಷ ಬದ್ಧವಾಗಿದೆ. ಟಿಎಂಸಿ ಬಂಗಾಳವನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಜೊತೆಗೆ, ರಾಷ್ಟ್ರದ ರಾಜಧಾನಿಗೆ ತನ್ನ ಪ್ರಭಾವವನ್ನು ವಿಸ್ತರಿಸುತ್ತದೆ’ ಎಂದರು.

ಲೋಕಸಭೆ ಚುನಾವಣೆ ನಂತರದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ತಮ್ಮ ಆಲೋಚನೆ ಕುರಿತು ಒತ್ತಿಹೇಳಿದರು. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಸೇರಿದಂತೆ ಇಂಡಿಯಾ ಬ್ಲಾಕ್ ಮೈತ್ರಿಯಲ್ಲಿನ ಸಂಭಾವ್ಯ ಬದಲಾವಣೆಯ ಬಗ್ಗೆ ಸುಳಿವು ನೀಡಿದರು.

‘ಜನರು ನಮ್ಮೊಂದಿಗಿದ್ದಾರೆ; ನಾವು ಅವರಿಗೆ ಭರವಸೆ ನೀಡುತ್ತೇವೆ… ನಾವು ದೆಹಲಿಯನ್ನು ಗೆಲ್ಲುತ್ತೇವೆ. ಚುನಾವಣೆಯ ನಂತರ ನಾವು ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಒಟ್ಟಿಗೆ ತೆಗೆದುಕೊಂಡು ಗುರಿ ಸಾಧಿಸುತ್ತೇವೆ’ ಎಂದು ಮುಖ್ಯಮಂತ್ರಿ ಬ್ಯಾನರ್ಜಿ ಹೇಳಿದರು.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ಯಾನರ್ಜಿ ಅವರು, ‘ಈ ನಿರ್ಧಾರಗಳು ಮತದಾರರನ್ನು ಪ್ರತ್ಯೇಕಿಸುವ ಗುರಿಯನ್ನು ಹೊಂದಿವೆ. ಈ ರಾಜಕೀಯ ಯೋಜನೆಗಳನ್ನು ನಂಬಬೇಡಿ’ ಎಂದು ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು. ‘ಬಿಜೆಪಿಯು ಚುನಾವಣೆಗಳನ್ನು ಗೆಲ್ಲಲು ಇಂತಹ ಕ್ರಮಗಳನ್ನು ಬಳಸುತ್ತಿದೆ’ ಎಂದು ಅವರು ಆರೋಪಿಸಿದರು.

‘ದಯವಿಟ್ಟು ನೆನಪಿಡಿ, ಇಲ್ಲಿ ಎನ್ಆರ್‌ಸಿ ಜಾರಿಗೆ ತರಲು ನಾನು ಅವರಿಗೆ ಅವಕಾಶ ನೀಡುವುದಿಲ್ಲ. ಅವರು ಸಿಎಎ ಹೆಸರಿನಲ್ಲಿ ಸುಳ್ಳು ಹೇಳುತ್ತಿದ್ದಾರೆ. ಇದು ಅವರ ರಾಜಕೀಯ ಯೋಜನೆಗಳು, ಅವರನ್ನು ನಂಬಬೇಡಿ, ಅವರು ನಿಮ್ಮೆಲ್ಲರನ್ನು ಪ್ರತ್ಯೇಕಿಸಲು ಬಯಸುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

‘ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ ಮತ್ತು ಎಡಪಕ್ಷಗಳು ಮೈತ್ರಿ ಮಾಡಿಕೊಳ್ಳುತ್ತಿವೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆರೋಪಿಸಿದರು. ಎಡಪಕ್ಷಗಳ ಹಸ್ತಕ್ಷೇಪದಿಂದಾಗಿ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಚರ್ಚೆ ವಿಫಲವಾಗಿದೆ ಎಂದು ದೂರಿದರು.

‘ನೀವು ಯಾರನ್ನು ಆರಿಸುತ್ತೀರಿ, 365 ದಿನಗಳು ನಿಮ್ಮೊಂದಿಗೆ ಇರುವವರನ್ನು ಅಥವಾ ಋತುಮಾನದ ಹಕ್ಕಿಯಂತೆ ಬರುವವರನ್ನು? ನೆನಪಿಡಿ ನಾವು ದೆಹಲಿಯನ್ನು ಗೆಲ್ಲುತ್ತೇವೆ. ಬಂಗಾಳವು ದೆಹಲಿಯನ್ನು ಗೆಲ್ಲುವ ಮಾರ್ಗವನ್ನು ತೋರಿಸುತ್ತದೆ. ನಾವು ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತೇವೆ. ನಾವು ಮೈತ್ರಿ ಬಯಸಿದ್ದೇವೆ; ಆದರೆ ಕಾಂಗ್ರೆಸ್ ಅದನ್ನು ಮಾಡಲಿಲ್ಲ, ಬದಲಿಗೆ ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ’ ಎಂದು ಅವರು ಆರೋಪಿಸಿದ್ದಾರೆ.

ಭೂ ಹಗರಣದ ಆರೋಪದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಬಗ್ಗೆ ಮಾತನಾಡಿ, ‘ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಬಂಧಿಸುತ್ತಿದೆ’ ಎಂದು ಕಿಡಿಕಾರಿದರು.

‘ಈ ದೇಶದಲ್ಲಿ ಪ್ರತಿಪಕ್ಷದ ನಾಯಕರೆಲ್ಲ ಜೈಲಿಗೆ ಹಾಕಲ್ಪಡುತ್ತಾರೆ. ನನ್ನನ್ನು ಜೈಲಿಗೆ ಹಾಕಿದರೆ ನಾನು ಹೊರಗೆ ಬರುತ್ತೇನೆ. ನೆನಪಿರಲಿ.. ಚುನಾವಣೆ ಗೆಲ್ಲವುದಕ್ಕಾಗಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದ್ದಾರೆ. ನಾವು ಕಳ್ಳರೇ, ಅವರು ಪುಣ್ಯಾತ್ಮರೇ? ಇಂದು ಅಧಿಕಾರದಲ್ಲಿದ್ದಾರೆ.. ಆದ್ದರಿಂದ ಅವರು ಏಜೆನ್ಸಿಗಳನ್ನು ಹೊಂದಿದ್ದಾರೆ, ನಾಳೆ ಅವರು ಅಧಿಕಾರದಲ್ಲಿ ಇರುವುದಿಲ್ಲ, ಎಲ್ಲಾ ಏಜೆನ್ಸಿಗಳು ಕಣ್ಮರೆಯಾಗುತ್ತವೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

2019ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 22 ಲೋಕಸಭಾ ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿತು ಮತ್ತು ಬಿಜೆಪಿ ಪಶ್ಚಿಮ ಬಂಗಾಳದಲ್ಲಿ 18 ಸ್ಥಾನಗಳನ್ನು ಗಳಿಸಿತು.

ಇದನ್ನೂ ಓದಿ; ಭಾರತ್‌ ಜೋಡೋ ನ್ಯಾಯ ಯಾತ್ರೆ: ಪ.ಬಂಗಾಳದಲ್ಲಿ ಕಾರ್ಮಿಕರ ಜೊತೆ ರಾಹುಲ್‌ ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...