Homeಮುಖಪುಟಎರಡು ಚರಣಗಳ 'ವಂದೇ ಮಾತರಂ' ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

- Advertisement -
- Advertisement -

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು ಗುರುವಾರ ಸಮರ್ಥಿಸಿಕೊಂಡಿದೆ. ತನ್ನ ಐತಿಹಾಸಿಕ ರಾಷ್ಟ್ರೀಯತಾವಾದಿ ಹಿನ್ನೆಲೆಯನ್ನು ಪ್ರತಿಪಾದಿಸಲು ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ರವೀಂದ್ರನಾಥ ಟ್ಯಾಗೋರ್ ಸೇರಿದಂತೆ ಹಲವು ನಾಯಕರ ಪರಂಪರೆ ಮತ್ತು ಅನುಮೋದನೆಯನ್ನು ಕಾಂಗ್ರೆಸ್ ಈ ಸಂದರ್ಭದಲ್ಲಿ ಸ್ಮರಿಸಿದೆ.

‘ವಂದೇ ಮಾತರಂ’ ಗಾಯನದ ಕುರಿತು ಪಕ್ಷದ ನಿಲುವು ಸ್ವಾತಂತ್ರ್ಯ ಸಂಗ್ರಾಮದ ಅವಧಿಯ ದೀರ್ಘಕಾಲದ ಸಾಂಸ್ಥಿಕ ನಿರ್ಧಾರದಲ್ಲಿ ಬೇರೂರಿದೆ. ಇದು ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲ ಎಂದು ಕೆಲವು ಕಾಂಗ್ರೆಸ್ ನಾಯಕರು ವಾದಿಸಿದ್ದಾರೆ.

ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಬ್ರಿಟಿಷರ ಕಿರುಕುಳ ಮತ್ತು ಕ್ರಮಗಳನ್ನು ಎದುರಿಸಿದ ಹೊರತಾಗಿಯೂ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಗೀತೆಯನ್ನು ಹಾಡುವುದನ್ನು ಮುಂದುವರಿಸಿದ್ದರು ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಜನ್ ಸಂಘ ಮತ್ತು ಆರ್‌ಎಸ್‌ಎಸ್‌ಗೆ ಸೇರಿದ ಸದಸ್ಯರು ಈ ಗೀತೆಯನ್ನು ಹಾಡಿದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬ್ರಿಟಿಷರಿಗೆ ಮಾಹಿತಿ ನೀಡುತ್ತಿದ್ದರು ಎಂದೂ ಅವರು ಆರೋಪಿಸಿದ್ದಾರೆ.

1937ರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ನಿರ್ಧಾರದ ಮೂಲಕ ಸ್ಥಾಪಿಸಲಾದ ಸಂಪ್ರದಾಯವನ್ನು ಮುಂದುವರಿಸಲು ಸಿಡಬ್ಲ್ಯೂಸಿ ನಿರ್ಧರಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಈ ಸಂಪ್ರದಾಯದಂತೆ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಪಠಿಸಲಾಗುತ್ತದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಗೀತೆಯ ಸಂಪೂರ್ಣ ಗಾಯನವನ್ನು ಅಧಿಕೃತ ಪ್ರೋಟೋಕಾಲ್‌ನ ಭಾಗವಾಗಿ ಮಾಡಿದ್ದರಿಂದ ಈ ನಿರ್ಧಾರವು ಪ್ರಾಮುಖ್ಯತೆ ಪಡೆದುಕೊಂಡಿದೆ.

ಕಾಂಗ್ರೆಸ್ ಸಂಸದೆ ಜೆಬಿ ಮಾಥರ್ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಹಲವು ಪ್ರಮುಖ ನಾಯಕರ ನಡುವಿನ ಚರ್ಚೆಯ ನಂತರ ಪಕ್ಷದ ನಿಲುವನ್ನು ಎಚ್ಚರಿಕೆಯಿಂದ ರೂಪಿಸಲಾಗಿತ್ತು. ಈ ಪದ್ಧತಿಯು ಮುಂದುವರಿಯುತ್ತದೆ ಎಂದು ಹೇಳಿದರು.

“ವಂದೇ ಮಾತರಂ ಕುರಿತು ಕಾಂಗ್ರೆಸ್‌ನ ನಿಲುವು ಇಂದು, ನಿನ್ನೆ ಅಥವಾ ಮೊನ್ನೆ ಹೊರಹೊಮ್ಮಿದ್ದಲ್ಲ. ಇದು 1937ರ ಕೋಲ್ಕತ್ತಾ ಅಧಿವೇಶನದಷ್ಟು ಹಳೆಯದು. ಆಗ ಮಹಾತ್ಮ ಗಾಂಧಿ, ಪಂಡಿತ್ ಜವಾಹರಲಾಲ್ ನೆಹರೂ ಮತ್ತು ರವೀಂದ್ರನಾಥ ಟ್ಯಾಗೋರ್ ಸೇರಿದಂತೆ ಮಹಾನ್ ನಾಯಕರು ಒಂದೆಡೆ ಸೇರಿ ಈ ವಿಷಯದ ಬಗ್ಗೆ ಚರ್ಚಿಸಿದರು. ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಹಾಡಲಾಗುವುದು ಎಂಬ ನಿರ್ಣಯವನ್ನು ಅಂಗೀಕರಿಸಿತು” ಎಂದು ಮಾಥರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಆ ನಿರ್ಧಾರ ಇಂದು ಮುಂದುವರಿದಿದೆ, ಎಂದೆಂದಿಗೂ ಮುಂದುವರಿಯುತ್ತದೆ” ಎಂದು ಅವರು ಹೇಳಿದರು.

ಕಾಂಗ್ರೆಸ್ ವಕ್ತಾರ ಸುರೇಂದ್ರ ರಜಪೂತ್ ಕೂಡ ‘ವಂದೇ ಮಾತರಂ’ ಜೊತೆಗಿನ ಪಕ್ಷದ ಒಡನಾಟವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು, ಈ ಗೀತೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಆರಂಭದಿಂದಲೂ ಹಾಡುತ್ತಿದ್ದಾರೆ, ಇದು ಸ್ವಾತಂತ್ರ್ಯ ಚಳವಳಿಯ ಪ್ರಮುಖ ಭಾಗವಾಗಿ ಉಳಿದಿದೆ ಎಂದು ಹೇಳಿದರು.

“ನಾವು ಆರಂಭದಿಂದಲೂ ‘ವಂದೇ ಮಾತರಂ’ ಹಾಡುತ್ತಿದ್ದೇವೆ. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ನಾವು ‘ವಂದೇ ಮಾತರಂ’ ಹಾಡುತ್ತಿದ್ದಾಗ, ಬ್ರಿಟಿಷರ ಈ ಚಾಡಿಕೋರರು ಸ್ವಾತಂತ್ರ್ಯ ಹೋರಾಟಗಾರರು ‘ವಂದೇ ಮಾತರಂ’ ಹಾಡುತ್ತಿದ್ದಾರೆ ಎಂದು ಬ್ರಿಟಿಷರಿಗೆ ಮಾಹಿತಿ ನೀಡುತ್ತಿದ್ದರು. ಬ್ರಿಟಿಷರು ನಮ್ಮ ಬೆನ್ನಿಗೆ ಚಾವಟಿಯಿಂದ ಹೊಡೆಯುತ್ತಿದ್ದರು” ಎಂದು ರಜಪೂತ್ ಹೇಳಿದ್ದಾರೆ.

“ನಾವು ಆಗಲೂ ‘ವಂದೇ ಮಾತರಂ’ ಹಾಡುವುದನ್ನು ನಿಲ್ಲಿಸಲಿಲ್ಲ. ಆ ಸಮಯದಲ್ಲಿ ನಾವು ಹಾಡುತ್ತಿದ್ದ ಅದೇ ‘ವಂದೇ ಮಾತರಂ’ ಅನ್ನು ನಾವು ಇಂದೂ ಹಾಡುತ್ತಿದ್ದೇವೆ. ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಡಿದ ಮತ್ತು ಗುರುದೇವ ರವೀಂದ್ರನಾಥ ಟ್ಯಾಗೋರ್ ಅನುಮೋದಿಸಿದ ‘ವಂದೇ ಮಾತರಂ’ ಅನ್ನು ನಾವು ಹಾಡಿದ್ದೇವೆ, ಹಾಡುತ್ತಿದ್ದೇವೆ ಮತ್ತು ಮುಂಬರುವ ದಿನಗಳಲ್ಲೂ ಹಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದರು.

“ಈ ಸಂಘದವರು ತಮ್ಮ ಶಾಖೆಗಳಲ್ಲಿ ವಂದೇ ಮಾತರಂ ಅನ್ನು ಏಕೆ ಹಾಡಲಿಲ್ಲ? ನಾವು ಬಿಜೆಪಿಯಿಂದ ಚಾಟಿ ಏಟು ತಿನ್ನಲು ಸಿದ್ಧರಿದ್ದೇವೆ, ಆದರೆ ಇದರ ಹಿಂದಿನ ಕಾರಣವನ್ನು ತಿಳಿದುಕೊಳ್ಳಲು ಬಯಸುತ್ತೇವೆ” ಎಂದು ರಜಪೂತ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...

ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ​​ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

ತಮ್ಮ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, "ಮತಗಳಿಗಾಗಿ ವಿರೋಧ ಪಕ್ಷವು ಹೊಸ ಮುಸ್ಲಿಂ ಲೀಗ್...

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...