Homeಮುಖಪುಟಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

ಫಡ್ನವೀಸ್ ಸರ್ಕಾರದ ನೇಮಕಾತಿ ಹಗರಣ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್- ಆಸಕ್ತಿ ತೋರಿದ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ನಡೆಸಿದ ಮಹಾ ನೇಮಕಾತಿ ಚಾಲನೆಯಲ್ಲಿ ಸಂಭವಿಸಿದ ಬಹು ಕೋಟಿ ಹಗರಣದ ಬಗ್ಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಕುರಿತು ತನಿಖೆ ಮಾಡಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಲೋಚಿಸುತ್ತಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು, ದಿ ವೈರ್, 2019 ರಲ್ಲಿ ನಡೆದ ಸರ್ಕರಿ ನೇಮಕಾತಿಯಲ್ಲಿ ಮಹಾ ಅಕ್ರಮ ನಡೆದಿದೆ ಎಂದು ತನಿಖಾ ವರದಿ ಮಾಡಿತ್ತು. 11 ವಿಭಾಗಗಳಲ್ಲಿ ವರ್ಗ ’ಸಿ’ ಮತ್ತು ವರ್ಗ ’ಡಿ’ ಹುದ್ದೆಗಳನ್ನು ಭರ್ತಿ ಮಾಡಬೇಕಾಗುವ ಅಕ್ರಮ ನೇಮಕಾತಿ ಮಾಡಿಕೊಳ್ಳಲಾಗಿತ್ತು.

ನಿನ್ನೆ ಮಾರ್ಚ್ 5 ರಂದು ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ದಿ ವೈರ್‌ನ ವೀಕ್ಷಣೆಯಂತೆಯೇ, ಪಟೋಲೆ ಕೂಡ ಹಗರಣದ ವ್ಯಾಪ್ತಿಯನ್ನು ಮಧ್ಯಪ್ರದೇಶದ ವೃತ್ತಿಪರ ಪರೀಕ್ಷಾ ಮಂಡಳಿಯ ಹಗರಣದೊಂದಿಗೆ ಹೋಲಿಸಿದ್ದಾರೆ. ಇದನ್ನು ಸಾಮಾನ್ಯವಾಗಿ ವ್ಯಾಪಮ್ ಹಗರಣ ಎಂದು ಕರೆಯಲಾಗುತ್ತದೆ. ಈ ಮೆಗಾಭರ್ತಿ ಘೋಟಾಲಾ (ಮೆಗಾ ನೇಮಕಾತಿ ಹಗರಣ) ಮಧ್ಯಪ್ರದೇಶದಲ್ಲಿ ಪತ್ತೆಯಾದ ವ್ಯಾಪಂ ಹಗರಣಕ್ಕಿಂತ ದೊಡ್ಡದಾಗಿದೆ. ಮಹಾಪರಿಷ್ಠರ ಹೆಸರಿನಲ್ಲಿ, ಹಿಂದಿನ ಸರ್ಕಾರವು ಹಲವಾರು ಸಾವಿರ ಆಕಾಂಕ್ಷಿಗಳ ಜೀವನ ಮತ್ತು ಕನಸುಗಳನ್ನು ಹಾಳು ಮಾಡಿದೆ ಎಂದು ಪಟೋಲೆ ಸದನದಲ್ಲಿ ಹೇಳಿದರು.

2017 ಮತ್ತು 2019 ರ ನಡುವೆ ರಾಜ್ಯದ 25 ಇಲಾಖೆಗಳಲ್ಲಿ 30,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ 35.5 ಲಕ್ಷ ಆಕಾಂಕ್ಷಿಗಳ ಭವಿಷ್ಯವನ್ನು ಮಹಾಪರೀಕ್ಷಾ ಪೋರ್ಟಲ್ ನಿರ್ಧರಿಸಬೇಕಿತ್ತು. ವ್ಯಾಪಂ ಹಗರಣದಂತೆ, ಮಹಾರಾಷ್ಟ್ರದಲ್ಲೂ ಸಾವಿರಾರು ಅಭ್ಯರ್ಥಿಗಳು ನೇಮಕಾತಿ ಅಕ್ರಮವನ್ನು ಆರೋಪಿಸಿದ್ದರು. ಮಹಾ-ಐಟಿ ಇಲಾಖೆಯು ಖಾಸಗಿ ಕಂಪನಿಗಳಾದ ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಜೊತೆ ಒಪ್ಪಂದ ಮಾಡಿಕೊಂಡು ಅಕ್ರಮ ಎಸಗಿತ್ತು ಎಂದು ಆರೋಪ ಮಾಡಲಾಗಿತ್ತು.

ವೈರ್‌ನ ವರದಿಯು 2019 ರಲ್ಲಿ ವಿವಿಧ ಇಲಾಖೆಗಳಲ್ಲಿ ’ಸಿ’ ಮತ್ತು ಕ್ಲಾಸ್ ’ಡಿ’ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿದ ವ್ಯವಸ್ಥಿತ ಜಾಲವನ್ನು ಬಹಿರಂಗಪಡಿಸಿತ್ತು. ಪರೀಕ್ಷೆಗಳನ್ನು ಮಹಾರಾಷ್ಟ್ರ ಪೋರ್ಟಲ್ ನಿರ್ವಹಿಸಿದ್ದು, ಇದನ್ನು ಮಹಾರಾಷ್ಟ್ರ ಮಾಹಿತಿ ತಂತ್ರಜ್ಞಾನ ನಿಗಮ ನಿರ್ವಹಿಸಿತ್ತು.

ಇದನ್ನೂ ಓದಿ: ‘ಇನ್ಮುಂದೆ ಕೈಗೆಟಕುವಂತಿಲ್ಲ’: ಐಟಿ ದಾಳಿ ಕುರಿತು ತಾಪ್ಸಿ ಪನ್ನು ಟ್ವೀಟ್

ಕಳೆದ ವರ್ಷ ಮೇ ತಿಂಗಳಲ್ಲಿ ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಹುಲ್ ದ್ವಿವೇದಿ ತಮ್ಮ ಜಿಲ್ಲೆಯಲ್ಲಿ ನಡೆಸಿದ ಪರೀಕ್ಷೆಗಳಲ್ಲಿನ ವ್ಯತ್ಯಾಸಗಳನ್ನು ಬಹಿರಂಗಪಡಿಸುವ 12 ಪುಟಗಳ ಭೀಕರ ವರದಿಯನ್ನು ಬರೆದಿದ್ದರು. ಅಹ್ಮದ್‌ನಗರ ಜಿಲ್ಲೆಯಲ್ಲಿ ಕನಿಷ್ಟ 14 ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಸಂಶಯಾಸ್ಪದರು ಎಂದು ಕಂಡುಬಂದಿದೆ. ಹಲವಾರು ನಕಲಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ದ್ವಿವೇದಿ ಕಂಡುಹಿಡಿದಿದ್ದರು.

ಆಳಕ್ಕೆ ಇಳಿದು ನೋಡಿದಾಗ, ದಿ ವೈರ್‌ನ ತನಿಖೆಯು ವಂಚನೆಯನ್ನು ಅಹ್ಮದ್‌ನಗರಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಆದರೆ ಇದು ವ್ಯಾಪಕ ಹಗರಣವಾಗಿದೆ, ಈ ರಾಜ್ಯ ನೇಮಕಾತಿ ಪರೀಕ್ಷೆಗಳನ್ನು ನಡೆಸಿದ ಎಲ್ಲಾ 34 ಜಿಲ್ಲೆಗಳಲ್ಲೂ ಅಕ್ರಮ ನಡೆದಿದೆ. ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ಹಿಡಿದು, ಭಾವಚಿತ್ರಗಳು ಮತ್ತು ಸಹಿಗಳಲ್ಲಿ ಹೊಂದಾಣಿಕೆಯಾಗದ ನೂರಾರು ಪ್ರಕರಣಗಳು ಬಯಲಿಗೆ ಬಂದಿದ್ದವು. ಪರೀಕ್ಷಾ ಹಾಲ್‌ಗೆ ಪ್ರವೇಶಿಸುವಾಗ ನೂರಾರು ಅಭ್ಯರ್ಥಿಗಳು ಪತ್ತೇದಾರಿ ಕ್ಯಾಮೆರಾಗಳು ಮತ್ತು ಮೈಕ್ರೊಫೋನ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ಎಂದು ವೈರ್ ಒತ್ತೆ ಹಚ್ಚಿತ್ತು.

ಯುಎಸ್ಟಿ ಗ್ಲೋಬಲ್ ಮತ್ತು ಆರ್ಸಿಯಸ್ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಎಂಬ ಎರಡು ಕಂಪನಿಗಳ ಗೋಲ್‌ಮಾಲ್ ಈಗ ಮತ್ತೆ ಸದಸನದಲ್ಲಿ ಚರ್ಚೆಗೆ ಬಂದಿದೆ. ಜೊತೆಗೆ ಮಹಾ-ಐಟಿ ಇಲಾಖೆಯ ಮಾಜಿ ನಾಮಿನಿ ನಿರ್ದೇಶಕ ಕೌಸ್ತುಬ್ ಧಾವ್ಸೆ ಪಾತ್ರ ಕೂಡ ಚರ್ಚೆಗೆ ಬಂದಿದೆ. ಫಡ್ನವೀಸ್ ಅವರ ನಿಕಟವರ್ತಿಯಾಗಿದ್ದ ಧಾವ್ಸೆ ಅವರು ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಆಗಿದ್ದರು ಮತ್ತು ರಾಜ್ಯದ ಬಿಜೆಪಿ ಸರ್ಕಾರ ಪತನಗೊಂಡ ಕೂಡಲೇ ಕಳೆದ ಡಿಸೆಂಬರ್‌ನಲ್ಲಿ ಮಹಾ-ಐಟಿ ನಿರ್ದೇಶಕರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

ಧಾವ್ಸೆಗೆ ಜಂಟಿ ಕಾರ್ಯದರ್ಶಿ ಸ್ಥಾನಮಾನ ನೀಡಲಾಗಿತ್ತು (ಅವರು ಮುಖ್ಯಮಂತ್ರಿಗೆ ವಿಶೇಷ ಕರ್ತವ್ಯದಲ್ಲಿದ್ದ ಅಧಿಕಾರಿಯಾಗಿದ್ದರು ಮತ್ತು ಈಗ ಪ್ರತಿಪಕ್ಷದ ನಾಯಕರಾಗಿರುವ ಫಡ್ನವೀಸ್ ಅವರ ಮುಖ್ಯ ನೀತಿ ಸಲಹೆಗಾರರಾಗಿದ್ದಾರೆ) ಮತ್ತು ಅವರಿಗೆ ಪಕ್ಷದ ವಾರ್‌ ರೂಮ್ ಉಸ್ತುವಾರಿ ವಹಿಸಲಾಗಿತ್ತು.

ದಿ ವೈರ್‌ನ ವರದಿಯನ್ನು ಅನುಸರಿಸಿ, ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ತಮ್ಮ ಕಚೇರಿ ಕುರಿತ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವುದಾಗಿ ಘೋಷಿಸಿದ್ದರು. ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಶಾಸಕ ರೋಹಿತ್ ಪವಾರ್ ಕೂಡ ತಕ್ಷಣ ಕ್ರಮ ಕೈಗೊಳ್ಳಲು ಕೋರಿದ್ದರು. ಆದರೆ ಅಂತಿಮವಾಗಿ ಯಾವುದೇ ಕ್ರಮವನ್ನು ಪ್ರಾರಂಭಿಸಲಿಲ್ಲ.

ಮಾರ್ಚ್ 5 ರಂದು, ಮಾಧ್ಯಮಗಳಲ್ಲಿ ಇದೇ ರೀತಿಯ ವರದಿಗಳನ್ನು ಅನುಸರಿಸಿ, ಈ ವಿಷಯವು ಮತ್ತೆ ಗಮನಕ್ಕೆ ಬಂದಿದೆ. ಈ ಪರೀಕ್ಷೆಗಳು ಸಾಮಾನ್ಯ ಆಡಳಿತ ಸಚಿವಾಲಯ (ಜಿಎಡಿ) ನಿರ್ವಹಿಸುವ ಆಡಳಿತ ಸೇವೆಗಳ ಒಂದು ಭಾಗವಾಗಿದೆ. ಇತರ ಖಾತೆಗಳ ಜೊತೆಗೆ, ಫಡ್ನವೀಸ್ ಜಿಎಡಿಯನ್ನು ನಿಭಾಯಿಸಿದ್ದರು ಮತ್ತು ರಾಜ್ಯದಲ್ಲಿ ಮಹಾಭರ್ತಿ (ಮೆಗಾ ನೇಮಕಾತಿ) ಅಭಿಯಾನವನ್ನು ನೇರವಾಗಿ ಮೇಲ್ವಿಚಾರಣೆ ಮಾಡಿದ್ದರು. ಈಗ ಈ ಬಂಡವಾಳವು ಈಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಇದೆ. ಈಗ ಹಗರಣದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...